ಅಗಸ್ಟ್ 15ರಂದು (August 15th) ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನ ಆಚರಣೆಗೆ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಬೆಳಗ್ಗೆ 8.58ಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ (Cm siddaramiah) ಅವರಿಂದ ಧ್ವಜಾರೋಹಣ ನೆರವೇರಲಿದ್ದು ನಂತರ ತೆರೆದ ಜೀಪ್ ನಲ್ಲಿ ಪರೇಡ್ ಪರಿವೀಕ್ಷಣೆ ಮಾಡಲಿದ್ದಾರೆ.

ಕೆಎಸ್ ಆರ್ ಪಿ, ಸಿಆರ್ ಪಿಎಫ್, ಬಿಎಸ್ ಎಫ್ , ಟ್ರಾಫಿಕ್ ಪೊಲೀಸ್ ,ಮಹಿಳಾ ಪೊಲೀಸ್, ಡಾಗ್ ಸ್ಕ್ವಾಡ್ , ಹೋಂ ಗಾರ್ಡ್ ಸೇರಿದಂತೆ 35 ತುಕಡಿಗಳಿಂದ ಪರೇಡ್ ನಡೆಯಲಿದ್ದು, ಒಟ್ಟು 1150 ಜನ ಪರೇಡ್ ನಲ್ಲಿ ಭಾಗಿಯಾಗಲಿದ್ದಾರೆ.
ಏಳು ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಿಳಿಸುವ ವಿಶೇಷ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ. ಮಲ್ಲಕಂಬ, ಪ್ಯಾರ ಮೋಟರ್ , ಹಾಗೂ ಮೋಟಾರು ಸೈಕಲ್ ಪ್ರದರ್ಶನ ಇರಲಿದೆ.ಅಂಗಾಂಗ ದಾನ ಮಾಡಿದ 64 ಕುಟುಂಬಗಳಿಗೆ ಮುಖ್ಯಮಂತ್ರಿ ಗಳಿಂದ ಪ್ರಶಂಸಾ ಪತ್ರ ವಿತರಿಸಲಾಗುವುದು.