ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವ ಸಂಭ್ರಮ ಮನೆ ಮಾಡಿದೆ. ಸಪ್ತರಾತ್ರೋತ್ಸವದ ಮಧ್ಯಾರಾಧನೆಯಾದ ಇಂದು ವಿಶೇಷವಾದ ದಿನ. ದೇವರ ಧ್ಯಾನದಲ್ಲಿರುವ ರಾಯರು ಇಂದು ಕಣ್ಣೆರೆದು ಭಕ್ತರ ಕಡೆ ದೃಷ್ಟಿ ಹಾಯಿಸಲಿದ್ದಾರೆ. ಹೀಗಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಇಮದು ಭಕ್ತರು ಆಗಮಿಸುತ್ತಿದ್ದಾರೆ.
ಮಧ್ಯಾರಾಧನೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳ ಜೊತೆ ಉತ್ಸವಗಳು ಶ್ರೀ ಮಠದಲ್ಲಿ ನಡೆಯುತ್ತಿದ್ದು, ಇವತ್ತು ರಾಯರ ಮಠದಲ್ಲಿ ಮಧ್ಯಾರಾಧನೆ ನಡೆಯಲಿದೆ. ರಾಯರ ಏಳು ದಿನಗಳ ಆರಾಧನಾ ಮಹೋತ್ಸವದಲ್ಲಿ ಪೂರ್ವಾರಾಧನೆ, ಮಧ್ಯಾರಾಧನೆ ಹಾಗೂ ಉತ್ತರಾಧನೆ ಈ ಮೂರು ದಿನಗಳು ಅತಿ ಮಹತ್ವವಾಗಿವೆ.
ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾಗಿರುವ ಈ ದಿನಗಳಲ್ಲಿ ರಾಯರ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ ಇದ್ದು, ಹೀಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ ರಾಯರಿಗೆ ಭಕ್ತಿ ಸೇವೆಯನ್ನ ಸಮರ್ಪಿಸುತ್ತಿದ್ದಾರೆ.












