![](https://pratidhvani.com/wp-content/uploads/2024/04/1000005191-1.jpg)
ಹಾಸನ (ಅರಕಲಗೂಡು): ನಾನು ಅವರಿಗೆ ಲೆಕ್ಕಕ್ಕೆ ಇದೀನಾ? ಅವರಿಗೆ ಸರಿಸಾಟಿ ಇದೀನಾ ಇಲ್ಲವಾ? ಎಂಬುದನ್ನು ಜನರು ಚುನಾವಣೆಯಲ್ಲಿಯೇ ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ರಾಮನಾಥಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ಹೊಸ ತೊಡಕು ದಿನ ನಮ್ಮ ತೋಟದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗೆ ಅಷ್ಟು ಜ್ಞಾನ ಇಲ್ಲವೇ? ಆದರೆ ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದರು.
![](https://pratidhvani.com/wp-content/uploads/2024/04/1000005189-1.jpg)
ನಾನು ಜಾತಿ ಆಧಾರದಲ್ಲಿ ರಾಜಕಾರಣ ಮಾಡಿದವನಲ್ಲ. ಪಾಪ ನನ್ನ ಸ್ನೇಹಿತರಿಗೆ ಹಣದ ಮದ ನೆತ್ತಿಗೇರಿದೆ. ಕುಮಾರಸ್ವಾಮಿ ನನಗೆ ಡೋಂಟ್ ಕೇರ್ ಅಂದಿದ್ದಾರೆ, ನಾನೇನು ಲೆಕ್ಕಕ್ಕೆ ಇಟ್ಟಿಕೋ ಎಂದು ಹೇಳಿದ್ದೀನಾ? ರಾಜ್ಯದ ಜನ ತೀರ್ಮಾನ ಮಾಡುತ್ತಾರೆ. ಇವರ ಹಣ ಅಧಿಕಾರ ಯಾವುದನ್ನೂ ತೀರ್ಮಾನ ಮಾಡಲ್ಲ. ಆರೂವರೆ ಕೋಟಿ ಜನ ಕುಮಾರಸ್ವಾಮಿ ಅವಶ್ಯಕತೆ ಇದೆಯೊ ಇಲ್ಲವೊ ಎಂದು ತೀರ್ಮಾನ ಮಾಡುತ್ತಾರೆ. ಅವರು ಏನೋ ಐ ಆಮ್ ಸ್ಟ್ರೈಟ್ ಫೈಟರ್ ಎಂದು ಹೇಳಿದಾರೆ. ಹೌದು ಕಣಪ್ಪ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್ ಅಂತ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ಗುಡುಗಿದರು.ಕೊತ್ಚಾಲ್ ರಾಮಚಂದ್ರನ ಗರಡಿಯಲ್ಲಿ ಬಂದಿರುವವರು ನೀವು. ನೀವು ಸ್ಟ್ರೈಟ್ ಫೈಟರ್ ಆಗಿದ್ದರೆ ವಿಧಾನಸೌಧದಲ್ಲಿ ಪೈಟ್ ಮಾಡ್ತೀರಾ. ನೀವು ಬಂದಿರುವ ಹಿನ್ನೆಲೆ ಅಂತದ್ದೇ ಅಲ್ಲವೇ? ನಿಮ್ಮಮದ ಇದೆಯಲ್ಲ, ಅದನ್ನು ಇಳಿಸುವ ಕಾಲ ಸನಿಹಕ್ಕೆ ಬಂದಿದೆ ಎಂದು ಅವರು ಕಿಡಿಕಾರಿದರು.