ಅರಬ್ಬಿ ಸಮುದ್ರದಲ್ಲಿ (Arabbi sea) ಸುಳಿಗಾಳಿ ಸೃಷ್ಟಿಯಾದ ಹಿನ್ನೆಲೆ, ಬೆಂಗಳೂರಿನಲ್ಲಿ (Bangalore) ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ಪುಲಕೇಶಿನಗರದ ರಸ್ತೆಯಲ್ಲಿ ನೀರು ನಿಂತಿದ್ದು, ರಾತ್ರಿ ಜನರು ಪರದಾಡಿದ್ದಾರೆ. ಇವತ್ತು ಕೂಡ ರಾಜಧಾನಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 9 ರವರೆಗೆ (August 9th) ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತ ಅಬ್ಬರಿಸಿದ ವರುಣನ ಆರ್ಭಟಕ್ಕೆ ಹನುಮಂತ ನಗರದ ಪ್ರಮುಖ ರಸ್ತೆ ಮತ್ತು ವೈಯಾಲಿಕಾವಲ್ ರಸ್ತೆಯಲ್ಲಿ ಮರದ ಕೊಂಬೆಗಳು ಉರುಳಿ ಬಿದ್ದಿದೆ.
ಪಾರ್ಕಿಂಗ್ ಮಾಡಿದ್ದ ಬೈಕ್ ಮೇಲೆ ಬೃಹತ್ ಕೊಂಬೆ ಬಿದ್ದಿದೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ಸಹಾಯದಿಂದ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದ ಕೊಂಬೆಯನ್ನು ರಸ್ತೆಯ ಬದಿಗೆ ಸರಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು. ಇನ್ನು ವೈಯಾಲಿಕಾವಲ್ನಲ್ಲೂ ಮರ ಬಿದ್ದು, ವಾಹನ ಸವಾರರು ಪರದಾಡಿದ್ದಾರೆ.





