ಸಿಎಂ ಸಿದ್ದರಾಮಯ್ಯ (Cm siddaramiah) ಇಂದು ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಸಿದ್ದರಾಮಯ್ಯ ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈಡುಗಾಯಿ ಒಡೆದು ಪಾರ್ಥನೆ ಸಲ್ಲಿಸಿದ್ದಾರೆ. ತೆಂಗಿನ ಕಾಯಿ ಮೇಲೆ ಕರ್ಪೂರ ಬೆಳಗಿ, ನಿವಾಳಿಸಿ ಈಡುಗಾಯಿ ಒಡೆದಿದ್ದಾರೆ. ಕಳೆದ ನಾಲ್ಕು ವಾರದಲ್ಲಿ ಎರಡನೇ ಬಾರಿಗೆ ಸಿದ್ದರಾಮಯ್ಯ ಚಾಮುಂಡಿ ದರ್ಶನ ಪಡೆದಿದ್ದಾರೆ.

ಈ ಮಧ್ಯೆ ರಾಜ್ಯ ಸರ್ಕಾರ ಹಾಗೂ ರಾಜಮನೆತನದ ನಡುವಿನ ಜಟಾಪಟಿ ಮುಂದುವರೆದಿದೆ. ಮೈಸೂರು (Mysore) ರಾಜಮನೆತನದ ವಿರೋಧದ ನಡುವೆಯೂ ಇವತ್ತು ಪ್ರಾಧಿಕಾರದ ಸಭೆ ನಡೆಸಲಾಗ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡಿಬೆಟ್ಟದಲ್ಲಿ (chamundi hill) ಸಭೆ ನಡೆಯಲಿದೆ. ಪ್ರಾಧಿಕಾರದ ಕಾರ್ಯದರ್ಶಿ ಸಭೆಗೆ ಬರುವಂತೆ ಪ್ರಮೋದಾದೇವಿಗೆ (Pramoda devi ಮೇಲ್ ಮೂಲಕ ಪತ್ರ ಕಳುಹಿಸಲಾಗಿತ್ತು.
ಈ ಬಗ್ಗೆ ಮೇಲ್ ಮೂಲಕವೇ ಪ್ರಾಧಿಕಾರಕ್ಕೆ ಪ್ರತ್ಯುತ್ತರ ನೀಡಿರುವ ಪ್ರಮೋದಾದೇವಿ ಒಡೆಯರ್, ಸಭೆ ಕಾನೂನು ಬಾಹಿರವಾಗಿ ನಡೆಯುತ್ತಿದೆ. ನ್ಯಾಯಾಲಯದ ವಿರುದ್ದ ಸಭೆ ನಡೆಸುತ್ತಿರುವುದು ಸರಿಯಲ್ಲ ಅಂತ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಸಿಎಂ ಸಿದ್ದರಾಮಯ್ಯ, ಕೋರ್ಟ್ ಹೇಳಿದಂತೆ ಸಭೆ ಮಾಡ್ತಿದ್ದೇನೆ ಅಂತ ತಿರುಗೇಟು ನೀಡಿದ್ದಾರೆ.











