![](https://pratidhvani.com/wp-content/uploads/2024/04/1000005126.jpg)
ರಾಜಕಾರಣ ಎಂಬುದು ನಿಂತ ನೀರಲ್ಲ.. ಹರಿಯುವ ಗಂಗೆ ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವ್ರು,
ಪಕ್ಷ ರಾಜಕಾರಣ ಎಂಬುದು ಸತ್ತು ಬಹಳ ವರ್ಷಗಳು ಆಯಿತು. ಇತ್ತೀಚೆಗೆ ವ್ಯಕ್ತಿ ರಾಜಕಾರಣ ವೈಭವೀಕರಣ ಆಗುತ್ತಿದೆ. ನಾನು ಬಿಜೆಪಿ MLC ಕೂಡ ಹೌದು.. ಕಾಂಗ್ರೆಸ್ ಟಿಕೆಟ್ ಕೇಳಿದ್ದು ನಿಜ. ಒಂದು ವೇಳೆ ಯದುವೀರ್ ಒಡೆಯರ್ಗೆ ಬಿಜೆಪಿ ಟಿಕೆಟ್ ಕೊಟ್ಟ ಬಳಿಕ, ನನಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದ್ರೆ ಚುನಾವಣೆಗೆ ನಿಲ್ಲುತ್ತಿರಲಿಲ್ಲ. BJP ಅಭ್ಯರ್ಥಿ ಯದುವೀರ್ ಪರ ಪ್ರಚಾರಕ್ಕೆ ಹೋಗುತ್ತೇನೆ. ಇನ್ನ ಯದುವೀರ್ ಒಡೆಯರ್ ಅವರಿಗೆ ಮತ ಹಾಕಿ ಮಹಾರಾಜರ ಋಣ ತೀರಿಸಬೇಕು ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ರು.
![](https://pratidhvani.com/wp-content/uploads/2024/04/1000005127.jpg)
ಮಧು ಬಂಗಾರಪ್ಪ ಫೇಲ್..!
5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಕಾನೂನು ಬಾಹಿರ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.ಶಿಕ್ಷಣ ಹಕ್ಕು ಕಾಯ್ದೆಯನ್ನ ರಾಜ್ಯ ಸರ್ಕಾರ ಉಲ್ಲಂಘಿಸಿದೆ, ಹೀಗಾಗಿ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ ಹಾಕಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕೂಡ ಇದನ್ನೇ ಮಾಡಿತ್ತು, ಈಗ ಕಾಂಗ್ರೆಸ್ ಸರ್ಕಾರ ಕೂಡ ಇದೆ ನೀತಿ ಅನುಸರಿಸಿದೆ. ಪ್ರಶ್ನೆ ಪತ್ರಿಕೆಯಲ್ಲೂ ಕಿಕ್ ಬ್ಯಾಕ್ ಪಡೆಯಲು ಸರ್ಕಾರ ಮುಂದಾಗಿದೆ. ಪ್ರಶ್ನೆ ಪತ್ರಿಕೆ ಟೆಂಡರ್ ಒಬ್ಬನೇ ವ್ಯಕ್ತಿಗೆ ನೀಡಲಾಗಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನ ಸರ್ಕಾರ ಹಾಳು ಮಾಡಿದೆ. ಹಲವು ವಿನೂತನ ಕಾರ್ಯಕ್ರಮ ಮೂಲಕ ನಾವು ಮೊದಲಿದ್ದೆವು, ಇತ್ತೀಚಿನ ದಿನಗಳಲ್ಲಿ ತೀರ ಕೆಳಗಡೆ ಹೋಗಿದ್ದೇವೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಫಲರಾಗಿದ್ದಾರೆ. ಸರ್ಕಾರ ತನ್ನ ಒಣ ಪ್ರತಿಷ್ಠೆ ಬಿಟ್ಟು ಪರೀಕ್ಷೆಗಳನ್ನ ರದ್ದು ಮಾಡಬೇಕು. ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ, ಕೂಡಲೇ ಶಿಕ್ಷಣ ಸಚಿವರನ್ನ ಬದಲಾಯಿಸಬೇಕು. ಶಿಕ್ಷಣ ಗ್ಯಾರಂಟಿ ಮಕ್ಕಳಿಗೆ ತುಂಬಾ ಮುಖ್ಯ, NEP ಉಲ್ಲಂಘನೆ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ರು.