ಅಹಮದಾಬಾದ್: ಗುಜರಾತ್ ಕಾಂಗ್ರೆಸ್ನಲ್ಲಿ (Gujarat Congress) ಎರಡು ಬಣಗಳಿವೆ. ಒಂದು ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಸಾರ್ವಜನಿಕರಿಂದ ದೂರವಿರುತ್ತದೆ.

ಕಾಂಗ್ರೆಸ್ ಪಕ್ಷವು 20-30 ಜನರನ್ನು ಹೊರಹಾಕಬೇಕಾಗಿದ್ದರೂ ಸಹ ಹಾಗೆ ಮಾಡಲು ಯಾವುದೇ ಹಿಂಜರಿಕೆ ಇರಬಾರದು. ಪಕ್ಷದಲ್ಲಿ ಹಲವು ಸಿಂಹಗಳಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

ಅಹಮದಾಬಾದ್ನಲ್ಲಿ (Ahmedabad) ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮದೇ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದರು.
ಗುಜರಾತ್ (Gujarat) ಪ್ರದೇಶ ಕಾಂಗ್ರೆಸ್ ನಾಯಕರು ನಿರ್ದೇಶನ ನೀಡುವಲ್ಲಿ ವಿಫಲರಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುವುದರಲ್ಲಿ ತಮಗೆ ಯಾವುದೇ ಸಮಸ್ಯೆ ಇಲ್ಲ. ಸ್ಥಳೀಯ ನಾಯಕರ ಹೃದಯದಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳುವುದು ಮತ್ತು ಅರ್ಥಮಾಡಿಕೊಳ್ಳುವುದು ನನ್ನ ಗುರಿಯಾಗಿತ್ತು. ಈ ಸಂಭಾಷಣೆಯಲ್ಲಿ, ಸಂಘಟನೆ, ಗುಜರಾತ್ ರಾಜಕೀಯ ಮತ್ತು ಇಲ್ಲಿನ ಸರ್ಕಾರದ ಕಾರ್ಯವೈಖರಿಗೆ ಸಂಬಂಧಿಸಿದ ಹಲವು ವಿಷಯಗಳು ಬೆಳಕಿಗೆ ಬಂದವು ಎಂದರು.