ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಕೊಂದ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಖಾಸಗಿ ಹೋಟೆಲ್ ನಲ್ಲಿ ಚಂದ್ರಶೇಖರ್ ಅವರನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಚಂದ್ರಶೇಖರ್ ಅವರ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಉದ್ಯಮದ ವಿಚಾರವಾಗಿ ಹುಬ್ಬಳ್ಳಿಗೆ ಚಂದ್ರಶೇಖರ್ ಸ್ವಾಮೀಜಿ ಭೇಟಿ ನೀಡಿದ್ದರು. ಖಾಸಗಿ ಹೋಟೆಲ್ ನಲ್ಲಿ ತಂಗಿದ್ದ ಅವರನ್ನು ಕಾಲಿಗೆ ಬೀಳುವ ನೆಪದಲ್ಲಿ ಬಂದು ಕೊಲೆಗೈಯ್ಯಲಾಗಿದ್ದು, ಕಾರಣ ತಿಳಿದು ಬಂದಿಲ್ಲ.