• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರೀ ಬೆಂಕಿ : ಅಗ್ನಿ ನಂದಿಸಲು ವಾಯುಪಡೆಯ ಹೆಲಿಕಾಪ್ಟರ್ಗಳ ಬಳಕೆ!

ಪ್ರತಿಧ್ವನಿ by ಪ್ರತಿಧ್ವನಿ
March 29, 2022
in ಇದೀಗ
0
ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರೀ ಬೆಂಕಿ : ಅಗ್ನಿ ನಂದಿಸಲು ವಾಯುಪಡೆಯ ಹೆಲಿಕಾಪ್ಟರ್ಗಳ ಬಳಕೆ!
Share on WhatsAppShare on FacebookShare on Telegram

ರಾಜಸ್ಥಾನದ ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿನ್ನೆ ಪ್ರಾರಂಭವಾದ ಭಾರೀ ಬೆಂಕಿ 10 ಚದರ ಕಿಲೋಮೀಟರ್ಗೆ ವ್ಯಾಪಿಸಿದೆ, ಇದು ಸುಮಾರು 1,800 ಫುಟ್ಬಾಲ್ ಮೈದಾನಗಳ ವ್ಯಾಪ್ತಿಯಷ್ಟು ಹರಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ವಾಯುಪಡೆ ( IAF) ಎರಡು ಹೆಲಿಕಾಪ್ಟರ್ಗಳು ಬೆಂಕಿ ಪೀಡಿತ ಪ್ರದೇಶದ ಮೇಲೆ ನೀರನ್ನು ಹಾರಿಸಿ ಅಗ್ನಿ ನಂದಿಸಲು ಕೆಲಸ ಮಾಡುತ್ತಿವೆ.

ADVERTISEMENT

ಎಸ್ಟಿ-17 ಎಂಬ ಹೆಸರಿನ ಹೆಣ್ಣು ಹುಲಿಯ ಭೀತಿಯಿಂದ ಅರಣ್ಯಾಧಿಕಾರಿಗಳು ಮುಂದೆ ಸಾಗಲು ಹಿಂದೇಟು ಹಾಕುತ್ತಿದ್ದಾರೆ. ಇದು ಬೆಂಕಿ ವ್ಯಾಪಿಸಲು ಕಾರಣವಾಗಿದ್ದು ಅರಣ್ಯ ಇಲಾಖೆ ಮಿಲಿಟರಿ ಸೇನಾ ಸಹಾಯ ಕೋರಿದೆ. ತಾಯಿ ಹುಲಿ ತನ್ನ ಎರಡು ಮರಿಗಳೊಂದಿಗೆ ಪ್ರದೇಶದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭಾರೀ ಬೆಂಕಿಯಿಂದಾಗಿ ಉಸಿರುಗಟ್ಟಿಸಬಹುದು ಎಂದು ತಜ್ಞರು ಹೇಳಿದ್ದಾರೆ. ಸರಿಸ್ಕಾ ಮೀಸಲು ಪ್ರದೇಶದಲ್ಲಿ 20ಕ್ಕೂ ಹೆಚ್ಚು ಹುಲಿಗಳಿವೆ ಎಂದು ತಿಳಿಸಿದ್ದಾರೆ.

ಅಗ್ನಿಶಾಮಕ ದಳದವರು ಪರಿಸ್ಥಿತಿಯನ್ನು ಹತೋಟಿಗೆ ತರಲು ಇನ್ನೂ ಸಾಧ್ಯವಾಗಿಲ್ಲ. ಎರಡು ಐಎಎಫ್ ಹೆಲಿಕಾಪ್ಟರ್ಗಳು ರಾಜಸ್ಥಾನದ ಸಿಲಿಸೆರ್ಹ್ ಸರೋವರದಿಂದ ನೀರನ್ನು ಸಂಗ್ರಹಿಸುತ್ತಿವೆ ಮತ್ತು ಸರೋವರದಿಂದ 43 ಕಿಮೀ ದೂರದಲ್ಲಿರುವ ಸರಿಸ್ಕಾದಲ್ಲಿ ಕಾಡ್ಗಿಚ್ಚಿನ ಮೇಲೆ ಹಾಕಿ ಬೆಂಕಿಯನ್ನು ನಂದಿಸಲು ಕೆಲಸ ಮಾಡುತ್ತಿದೆ .

ಅರಣ್ಯಾಧಿಕಾರಿಗಳು ಬೆಂಕಿನಂದಿಸಲು ವಿಫಲವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೇನಾ ಸಹಾಯ ಕೋರಿದೆ. ಇಂದು ಸೇನಾ ದಳ ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾದ್ದು, 2 ಹೆಲಿಕಾಪ್ಟರ್ಗಳು ಹೈಡ್ರಾಲಿಕ್ ವ್ಯವಸ್ಥೆಯನ್ನು ಬಳಸಿ ನೀರು ಹರಡಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿವೆ.

“ಸರಿಸ್ಕಾದಲ್ಲಿ ದೊಡ್ಡ ಪ್ರದೇಶಗಳಲ್ಲಿ ಹರಡಿದ” ಬೆಂಕಿಯನ್ನು ನಿಯಂತ್ರಿಸಲು ಸಹಾಯ ಮಾಡಲು ಅಲ್ವಾರ್ ಜಿಲ್ಲಾಡಳಿತವು SOS ಅನ್ನು ಕಳುಹಿಸಿದ ನಂತರ ಎರಡು Mi-17 V5 ಹೆಲಿಕಾಪ್ಟರ್ಗಳನ್ನು ಕಳುಹಿಸಲಾಗಿದೆ ಎಂದು IAF ಹೇಳಿಕೆಯಲ್ಲಿ ತಿಳಿಸಿದೆ.

ಹುಲಿ ಸಂರಕ್ಷಿತ ಪ್ರದೇಶದ ಸಮೀಪವಿರುವ ಮೂರು ಗ್ರಾಮಗಳಲ್ಲಿಬೆಂಕಿಯ ತೀರ್ವತೆಯ ಕುರಿತು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಲಾಗಿದೆ. ಬೆಂಕಿಗೆ ಕಾರಣ ತಿಳಿದುಬಂದಿಲ್ಲವಾದರೂ, ಇತ್ತೀಚಿನ ದಿನಗಳಲ್ಲಿ ದೇಶದ ಉತ್ತರ ಭಾಗಗಳಲ್ಲಿ ತೀವ್ರವಾದ ಶಾಖ ತಾಪಮಾನ ಕಂಡುಬಂದಿದೆ.

ಎರಡು ದಿನಗಳ ಹಿಂದೆ ನಗರದ ಸಮೀಪದಲ್ಲೇ ಇರುವ ಬುರಾ ಸಿಂಗ್ ಬೆಟ್ಟದಲ್ಲಿ ಹೊತ್ತಿಕೊಂಡಿದ್ದ ಬೆಂಕಿ ಗಾಳಿಯ ರಭಸಕ್ಕೆ ಕಾಡಿಗೂ ಹೊತ್ತಿಕೊಂಡಿದೆ. ಕಾಡಿನ ಗುಡ್ಡಗಾಡು ಪ್ರದೇಶಕ್ಕೆ ಬೆಂಕಿ ವ್ಯಾಪಿಸಿರುವುದರಿಂದ ಅಗ್ನಿಶಾಮಕ ದಳ ಅಲ್ಲಿಗೆ ತಲುಪಲು ಸಾಧ್ಯವಾಗಿಲ್ಲ. ಇದು ಚಿರತೆಗಳು, ಕಾಡು ನಾಯಿಗಳು, ಕಾಡಿನ ಬೆಕ್ಕುಗಳು, ಹೈನಾಗಳು ಮತ್ತು ನರಿಗಳು ಸೇರಿದಂತೆ ಹಲವಾರು ಮಾಂಸಾಹಾರಿ ಪ್ರಾಣಿಗಳು ನೆಲೆಯಾಗಿದೆ.

https://twitter.com/RajaniPathak17/status/1508770414415257604?s=20&t=zYkssTHbU87XDEeLD2H23A

ಪ್ರತಿ ನಾಲ್ಕು ವರ್ಷಗಳಿಗೊಮ್ಮೆ, ಭಾರತವು ತನ್ನ ಹುಲಿಗಳ ಸಂಖ್ಯೆಯನ್ನು ಲೆಕ್ಕ ಹಾಕುತ್ತದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ದೇಶದ ಹುಲಿ ಸಂರಕ್ಷಣಾ ಸಂಸ್ಥೆಯು ಅಳಿವಿನಂಚಿನಲ್ಲಿರುವ 126 ದೊಡ್ಡ ಹುಲಿಗಳು 2021ರಲ್ಲಿ ಸಾವನ್ನಪ್ಪಿವೆ ಎಂದು ಹೇಳಿದೆ.. ಈ ಹಿಂದೆ 2016 ರಲ್ಲಿ 121 ಹುಲಿಗಳು ಸಾವನ್ನಪ್ಪಿದಾಗ ವರ್ಷಕ್ಕೆ ಅತಿ ಹೆಚ್ಚು ಸಾವು ಸಂಭವಿಸಿದೆ. ವಿಶ್ವದ ಹುಲಿ ಸಂಖ್ಯೆಯ ಶೇಕಡಾ 75 ರಷ್ಟು ಭಾರತವು ನೆಲೆಯಾಗಿದೆ.

Tags: ಅಗ್ನಿ ಅವಘಡ;ಭಾರೀ ಬೆಂಕಿವಾಯುಪಡೆಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶಹೆಲಿಕಾಪ್ಟರ್
Previous Post

50 ವರ್ಷಗಳ ಐತಿಹಾಸಿಕ ಗಡಿ ವಿವಾದ ಬಗೆಹರಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿದ ಅಸ್ಸಾಂ – ಮೇಘಾಲಯ

Next Post

ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ : ಮಡಿಕೇರಿ ಶಾಸಕ ಅಪ್ಪಚ್ಚು‌ ರಂಜನ್!

Related Posts

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
0

"ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...

Read moreDetails

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

November 19, 2025

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
Next Post
ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ : ಮಡಿಕೇರಿ ಶಾಸಕ ಅಪ್ಪಚ್ಚು‌ ರಂಜನ್!

ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ : ಮಡಿಕೇರಿ ಶಾಸಕ ಅಪ್ಪಚ್ಚು‌ ರಂಜನ್!

Please login to join discussion

Recent News

Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada