• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರೀ ಬೆಂಕಿ : ಅಗ್ನಿ ನಂದಿಸಲು ವಾಯುಪಡೆಯ ಹೆಲಿಕಾಪ್ಟರ್ಗಳ ಬಳಕೆ!

ಪ್ರತಿಧ್ವನಿ by ಪ್ರತಿಧ್ವನಿ
March 29, 2022
in ಇದೀಗ
0
ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರೀ ಬೆಂಕಿ : ಅಗ್ನಿ ನಂದಿಸಲು ವಾಯುಪಡೆಯ ಹೆಲಿಕಾಪ್ಟರ್ಗಳ ಬಳಕೆ!
Share on WhatsAppShare on FacebookShare on Telegram

ರಾಜಸ್ಥಾನದ ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿನ್ನೆ ಪ್ರಾರಂಭವಾದ ಭಾರೀ ಬೆಂಕಿ 10 ಚದರ ಕಿಲೋಮೀಟರ್ಗೆ ವ್ಯಾಪಿಸಿದೆ, ಇದು ಸುಮಾರು 1,800 ಫುಟ್ಬಾಲ್ ಮೈದಾನಗಳ ವ್ಯಾಪ್ತಿಯಷ್ಟು ಹರಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ವಾಯುಪಡೆ ( IAF) ಎರಡು ಹೆಲಿಕಾಪ್ಟರ್ಗಳು ಬೆಂಕಿ ಪೀಡಿತ ಪ್ರದೇಶದ ಮೇಲೆ ನೀರನ್ನು ಹಾರಿಸಿ ಅಗ್ನಿ ನಂದಿಸಲು ಕೆಲಸ ಮಾಡುತ್ತಿವೆ.

ADVERTISEMENT

ಎಸ್ಟಿ-17 ಎಂಬ ಹೆಸರಿನ ಹೆಣ್ಣು ಹುಲಿಯ ಭೀತಿಯಿಂದ ಅರಣ್ಯಾಧಿಕಾರಿಗಳು ಮುಂದೆ ಸಾಗಲು ಹಿಂದೇಟು ಹಾಕುತ್ತಿದ್ದಾರೆ. ಇದು ಬೆಂಕಿ ವ್ಯಾಪಿಸಲು ಕಾರಣವಾಗಿದ್ದು ಅರಣ್ಯ ಇಲಾಖೆ ಮಿಲಿಟರಿ ಸೇನಾ ಸಹಾಯ ಕೋರಿದೆ. ತಾಯಿ ಹುಲಿ ತನ್ನ ಎರಡು ಮರಿಗಳೊಂದಿಗೆ ಪ್ರದೇಶದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭಾರೀ ಬೆಂಕಿಯಿಂದಾಗಿ ಉಸಿರುಗಟ್ಟಿಸಬಹುದು ಎಂದು ತಜ್ಞರು ಹೇಳಿದ್ದಾರೆ. ಸರಿಸ್ಕಾ ಮೀಸಲು ಪ್ರದೇಶದಲ್ಲಿ 20ಕ್ಕೂ ಹೆಚ್ಚು ಹುಲಿಗಳಿವೆ ಎಂದು ತಿಳಿಸಿದ್ದಾರೆ.

ಅಗ್ನಿಶಾಮಕ ದಳದವರು ಪರಿಸ್ಥಿತಿಯನ್ನು ಹತೋಟಿಗೆ ತರಲು ಇನ್ನೂ ಸಾಧ್ಯವಾಗಿಲ್ಲ. ಎರಡು ಐಎಎಫ್ ಹೆಲಿಕಾಪ್ಟರ್ಗಳು ರಾಜಸ್ಥಾನದ ಸಿಲಿಸೆರ್ಹ್ ಸರೋವರದಿಂದ ನೀರನ್ನು ಸಂಗ್ರಹಿಸುತ್ತಿವೆ ಮತ್ತು ಸರೋವರದಿಂದ 43 ಕಿಮೀ ದೂರದಲ್ಲಿರುವ ಸರಿಸ್ಕಾದಲ್ಲಿ ಕಾಡ್ಗಿಚ್ಚಿನ ಮೇಲೆ ಹಾಕಿ ಬೆಂಕಿಯನ್ನು ನಂದಿಸಲು ಕೆಲಸ ಮಾಡುತ್ತಿದೆ .

ಅರಣ್ಯಾಧಿಕಾರಿಗಳು ಬೆಂಕಿನಂದಿಸಲು ವಿಫಲವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೇನಾ ಸಹಾಯ ಕೋರಿದೆ. ಇಂದು ಸೇನಾ ದಳ ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾದ್ದು, 2 ಹೆಲಿಕಾಪ್ಟರ್ಗಳು ಹೈಡ್ರಾಲಿಕ್ ವ್ಯವಸ್ಥೆಯನ್ನು ಬಳಸಿ ನೀರು ಹರಡಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿವೆ.

“ಸರಿಸ್ಕಾದಲ್ಲಿ ದೊಡ್ಡ ಪ್ರದೇಶಗಳಲ್ಲಿ ಹರಡಿದ” ಬೆಂಕಿಯನ್ನು ನಿಯಂತ್ರಿಸಲು ಸಹಾಯ ಮಾಡಲು ಅಲ್ವಾರ್ ಜಿಲ್ಲಾಡಳಿತವು SOS ಅನ್ನು ಕಳುಹಿಸಿದ ನಂತರ ಎರಡು Mi-17 V5 ಹೆಲಿಕಾಪ್ಟರ್ಗಳನ್ನು ಕಳುಹಿಸಲಾಗಿದೆ ಎಂದು IAF ಹೇಳಿಕೆಯಲ್ಲಿ ತಿಳಿಸಿದೆ.

ಹುಲಿ ಸಂರಕ್ಷಿತ ಪ್ರದೇಶದ ಸಮೀಪವಿರುವ ಮೂರು ಗ್ರಾಮಗಳಲ್ಲಿಬೆಂಕಿಯ ತೀರ್ವತೆಯ ಕುರಿತು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಲಾಗಿದೆ. ಬೆಂಕಿಗೆ ಕಾರಣ ತಿಳಿದುಬಂದಿಲ್ಲವಾದರೂ, ಇತ್ತೀಚಿನ ದಿನಗಳಲ್ಲಿ ದೇಶದ ಉತ್ತರ ಭಾಗಗಳಲ್ಲಿ ತೀವ್ರವಾದ ಶಾಖ ತಾಪಮಾನ ಕಂಡುಬಂದಿದೆ.

ಎರಡು ದಿನಗಳ ಹಿಂದೆ ನಗರದ ಸಮೀಪದಲ್ಲೇ ಇರುವ ಬುರಾ ಸಿಂಗ್ ಬೆಟ್ಟದಲ್ಲಿ ಹೊತ್ತಿಕೊಂಡಿದ್ದ ಬೆಂಕಿ ಗಾಳಿಯ ರಭಸಕ್ಕೆ ಕಾಡಿಗೂ ಹೊತ್ತಿಕೊಂಡಿದೆ. ಕಾಡಿನ ಗುಡ್ಡಗಾಡು ಪ್ರದೇಶಕ್ಕೆ ಬೆಂಕಿ ವ್ಯಾಪಿಸಿರುವುದರಿಂದ ಅಗ್ನಿಶಾಮಕ ದಳ ಅಲ್ಲಿಗೆ ತಲುಪಲು ಸಾಧ್ಯವಾಗಿಲ್ಲ. ಇದು ಚಿರತೆಗಳು, ಕಾಡು ನಾಯಿಗಳು, ಕಾಡಿನ ಬೆಕ್ಕುಗಳು, ಹೈನಾಗಳು ಮತ್ತು ನರಿಗಳು ಸೇರಿದಂತೆ ಹಲವಾರು ಮಾಂಸಾಹಾರಿ ಪ್ರಾಣಿಗಳು ನೆಲೆಯಾಗಿದೆ.

https://twitter.com/RajaniPathak17/status/1508770414415257604?s=20&t=zYkssTHbU87XDEeLD2H23A

ಪ್ರತಿ ನಾಲ್ಕು ವರ್ಷಗಳಿಗೊಮ್ಮೆ, ಭಾರತವು ತನ್ನ ಹುಲಿಗಳ ಸಂಖ್ಯೆಯನ್ನು ಲೆಕ್ಕ ಹಾಕುತ್ತದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ದೇಶದ ಹುಲಿ ಸಂರಕ್ಷಣಾ ಸಂಸ್ಥೆಯು ಅಳಿವಿನಂಚಿನಲ್ಲಿರುವ 126 ದೊಡ್ಡ ಹುಲಿಗಳು 2021ರಲ್ಲಿ ಸಾವನ್ನಪ್ಪಿವೆ ಎಂದು ಹೇಳಿದೆ.. ಈ ಹಿಂದೆ 2016 ರಲ್ಲಿ 121 ಹುಲಿಗಳು ಸಾವನ್ನಪ್ಪಿದಾಗ ವರ್ಷಕ್ಕೆ ಅತಿ ಹೆಚ್ಚು ಸಾವು ಸಂಭವಿಸಿದೆ. ವಿಶ್ವದ ಹುಲಿ ಸಂಖ್ಯೆಯ ಶೇಕಡಾ 75 ರಷ್ಟು ಭಾರತವು ನೆಲೆಯಾಗಿದೆ.

Tags: ಅಗ್ನಿ ಅವಘಡ;ಭಾರೀ ಬೆಂಕಿವಾಯುಪಡೆಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶಹೆಲಿಕಾಪ್ಟರ್
Previous Post

50 ವರ್ಷಗಳ ಐತಿಹಾಸಿಕ ಗಡಿ ವಿವಾದ ಬಗೆಹರಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿದ ಅಸ್ಸಾಂ – ಮೇಘಾಲಯ

Next Post

ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ : ಮಡಿಕೇರಿ ಶಾಸಕ ಅಪ್ಪಚ್ಚು‌ ರಂಜನ್!

Related Posts

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!
Top Story

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು :  ಐಪಿಎಲ್ 2026ರ ಆವೃತ್ತಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 222/4 ರನ್ ಗಳಿಸಿದ್ದು, ರನ್‌ ಮಷಿನ್‌...

Read moreDetails
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
Next Post
ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ : ಮಡಿಕೇರಿ ಶಾಸಕ ಅಪ್ಪಚ್ಚು‌ ರಂಜನ್!

ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ : ಮಡಿಕೇರಿ ಶಾಸಕ ಅಪ್ಪಚ್ಚು‌ ರಂಜನ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada