• Home
  • About Us
  • ಕರ್ನಾಟಕ
Saturday, July 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಆರ್ ಸಿಬಿಗೆ ಸುಲಭ ತುತ್ತಾದ ಹೈದರಾಬಾದ್; ವಿರೋಚಿತ ಸೋಲಿನ ಸೇಡು ತೀರಿಸಿಕೊಂಡ ಬೆಂಗಳೂರು ಹುಡುಗರು!

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in ಕ್ರೀಡೆ
0
ಆರ್ ಸಿಬಿಗೆ ಸುಲಭ ತುತ್ತಾದ ಹೈದರಾಬಾದ್; ವಿರೋಚಿತ ಸೋಲಿನ ಸೇಡು ತೀರಿಸಿಕೊಂಡ ಬೆಂಗಳೂರು ಹುಡುಗರು!
Share on WhatsAppShare on FacebookShare on Telegram

ಹೈದರಾಬಾದ್‌: ಸನ್ ರೈಸರ್ಸ್ ಹೈದರಾಬಾದ್ ತಂಡ ಬೆಂಗಳೂರು ತಂಡಕ್ಕೆ ಸುಲಭ ತುತ್ತಾಯಿತು. 35 ರನ್ ಗಳಿಂದ ಅಮೋಘ ಜಯ ಸಾಧಿಸಿ, ಹಿಂದಿನ ಪಂದ್ಯದ ಸೇಡನ್ನು ಆರ್ ಸಿಬಿ ತೀರಿಸಿಕೊಂಡಿದೆ.

ADVERTISEMENT

ತವರಿನಲ್ಲಿ ಅನುಭವಿಸಿದ ವಿರೋಚಿತ ಸೋಲಿಗೆ ಈ ಮೂಲಕ ಬೆಂಗಳೂರು ತಂಡ ತಕ್ಕ ಉತ್ತರ ನೀಡಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡವು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 206 ರನ್‌ ಗಳಿಸಿತ್ತು. ಕಠಿಣ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡ 8 ವಿಕೆಟ್‌ ಕಳೆದುಕೊಂಡು ಕೇವಲ 171 ರನ್‌ ಗಳಿಸಿತು. ಈ ಮೂಲಕ ಬರೋಬ್ಬರಿ 35 ರನ್ ಗಳಿಂದ ಬೆಂಗಳೂರು ತಂಡ ಗೆಲುವು ಸಾಧಿಸುವ ಮೂಲಕ ತವರಿನಲ್ಲಿ ಅನುಭವಿಸಿದ್ದ ವಿರೋಚಿತ ಸೋಲಿನ ಸೇಡನ್ನು ತೀರಿಸಿಕೊಂಡಿದೆ.

ಹೈದರಾಬಾದ್ ಯಾವುದೇ ರೀತಿಯಲ್ಲಿ ಇಂದು ಬೆಂಗಳೂರಿಗೆ ಸವಾಲು ಒಡ್ಡಲಿಲ್ಲ. ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗಗಳೆರಡರಲ್ಲಿಯೂ ಇಂದು ವಿಫಲವಾಯಿತು. 5 ಓವರ್‌ಗಳಲ್ಲಿ 56 ರನ್‌ ಗಳಿಸಿದ್ದ ಹೈದರಾಬಾದ್ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು ಸೋಲಿನ ದವಡೆಗೆ ಸಿಲುಕಿತ್ತು. ಯಾವೊಬ್ಬ ಆಟಗಾರ ಕೂಡ ಆರ್ ಸಿಬಿ ಎದುರು ಮಿಂಚಲು ಆಗಲಿಲ್ಲ. ಪರಿಣಾಮ ಹೈದರಾಬಾದ್ ಸೋಲು ಕಾಣುವಂತಾಯಿತು.

ಹೈದರಾಬಾದ್‌ ಪರ ಅಭಿಷೇಕ್‌ ಶರ್ಮಾ 31, ನಾಯಕ ಪ್ಯಾಟ್‌ ಕಮ್ಮಿನ್ಸ್‌ 31, ನಿತೀಶ್‌ ಕುಮಾರ್‌ ರೆಡ್ಡಿ 13, ಟ್ರಾವಿಸ್‌ ಹೆಡ್‌ 1, ಹೆನ್ರಿಕ್‌ ಕ್ಲಾಸೆನ್‌, ಏಡನ್‌ ಮಾರ್ಕ್ರಮ್‌ ತಲಾ 7, ಅಬ್ದುಲ್‌ ಸಮದ್‌ 10, ಭುವನೇಶ್ವರ್‌ ಕುಮಾರ್‌ 13, ಶಹಬಾಜ್‌ ಅಹ್ಮದ್‌ 40, ಜಯದೇವ್‌ ಉನಡ್ಕಟ್‌ 8 ರನ್‌ ಗಳಿಸಿ ಔಟ್ ಆದರು. ಆರ್‌ಸಿಬಿ ಪರ ನಾಯಕ ಫಾಫ್‌ ಡು ಪ್ಲೆಸಿಸ್‌ ಹಾಗೂ ವಿರಾಟ್‌ ಕೊಹ್ಲಿ ಸ್ಪೋಟಕ ಆರಂಭ ನೀಡಿದರೂ. ಆದರೆ, ಕೊಹ್ಲಿ ನನಂತರ ನಿಧಾನಗತಿ ಆಟವಾಡಿದರು. ಡುಪ್ಲೆಸಿಸ್‌ 12 ಎಸೆತಗಳಲ್ಲಿ 25 ರನ್‌ ಗಳಿಸಿದರು. ರಜತ್‌ ಪಾಟೀದಾರ್‌ ಕೇವಲ 20 ಎಸೆತಗಳಲ್ಲೇ ಅರ್ಧಶತಕ ಪೂರೈಸಿದರು. ಕೊನೆಯಲ್ಲಿ ಗ್ರೀನ್‌ ಮತ್ತಿತರ ಬ್ಯಾಟರ್‌ಗಳ ಸಂಘಟಿತ ಪ್ರದರ್ಶನದಿಂದ ಆರ್‌ಸಿಬಿ 200 ರನ್‌ಗಳ ಗಡಿ ದಾಟುವಲ್ಲಿ ಬೆಂಗಳೂರು ತಂಡ ಯಶಸ್ವಿಯಾಯಿತು.

ಆರ್‌ಸಿಬಿ ಪರ ರಜತ್‌ ಪಾಟೀದಾರ್‌ 20 ಎಸೆತಗಳಲ್ಲಿ 50 ರನ್‌ (5 ಸಿಕ್ಸರ್‌, 2 ಬೌಂಡರಿ), ವಿರಾಟ್‌ ಕೊಹ್ಲಿ 51 ರನ್‌ (43 ಎಸೆತ, 4 ಬೌಂಡರಿ, 1 ಸಿಕ್ಸರ್‌), ಡುಪ್ಲೆಸಿಸ್‌ 25 ರನ್‌, ಕ್ಯಾಮರೂನ್‌ ಗ್ರೀನ್‌ 37 ರನ್‌, ಮಹಿಪಾಲ್‌ ಲೋಮ್ರೋರ್‌ 7ರನ್‌, ದಿನೇಶ್‌ ಕಾರ್ತಿಕ್‌ 11 ರನ್‌, ಸ್ವಪ್ನಿಲ್ ಸಿಂಗ್‌ 12 ರನ್‌ ಗಳಿಸಿ ಮಿಂಚಿದರು. ಈ ಮೂಲಕ ಟೂರ್ನಿಯಲ್ಲಿ 2 ನೇ ಗೆಲುವನ್ನು ಬೆಂಗಳೂರು ತಂಡ ಗಳಿಸಿತು. ಕೊನೆಯ ಎಲ್ಲ ಪಂದ್ಯಗಳನ್ನು ಗೆದ್ದು ಏನಾದರೂ ಪವಾಡ ನಡೆದರೆ ಬೆಂಗಳೂರು ತಂಡ ಪ್ಲೇ ಆಫ್ ಹಂತಕ್ಕೆ ಏರಬಹುದು.

Tags: CricketHyderabadMatchRCBsrh
Previous Post

ಚುನಾವಣೆ ವೇಳೆ ಭರ್ಜರಿ ಬೇಟೆ; 7 ಕೆಜಿ ಚಿನ್ನ, 5 ಕೋಟಿ ನಗದು ವಶಕ್ಕೆ

Next Post

ಭಾರತೀಯ ಹೈಕಮಿಷನ್ ಕಚೇರಿ ಮೇಲೆ ದಾಳಿ; ಆರೋಪಿ ಅರೆಸ್ಟ್

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಭಾರತೀಯ ಹೈಕಮಿಷನ್ ಕಚೇರಿ ಮೇಲೆ ದಾಳಿ; ಆರೋಪಿ ಅರೆಸ್ಟ್

ಭಾರತೀಯ ಹೈಕಮಿಷನ್ ಕಚೇರಿ ಮೇಲೆ ದಾಳಿ; ಆರೋಪಿ ಅರೆಸ್ಟ್

Please login to join discussion

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
Top Story

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

by ಪ್ರತಿಧ್ವನಿ
July 11, 2025
Top Story

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ
Top Story

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

by ಪ್ರತಿಧ್ವನಿ
July 11, 2025
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

by ಪ್ರತಿಧ್ವನಿ
July 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 12, 2025

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada