• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಂಬೈ ಭೂಗತ ಲೋಕ ಬೆಳೆಯಲು ಫಡ್ನವಿಸ್ ಕಾರಣ – ನವಾಬ್ ಮಲಿಕ್ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
November 10, 2021
in ದೇಶ, ರಾಜಕೀಯ
0
ಮುಂಬೈ ಭೂಗತ ಲೋಕ ಬೆಳೆಯಲು ಫಡ್ನವಿಸ್ ಕಾರಣ – ನವಾಬ್ ಮಲಿಕ್ ವಾಗ್ದಾಳಿ
Share on WhatsAppShare on FacebookShare on Telegram

ಆರ್ಯನ್ ಖಾನ್ ಪ್ರಕರಣದ ತನಿಖೆ ನಡೆಸುತ್ತಿದ್ದ ಸಮೀರ್ ವಾಂಖೆಡೆ ವಿರುದ್ಧ ಸರಣಿ ಆರೋಪಗಳನ್ನು ಮಾಡಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಈಗ ಮಾಜಿ ಸಿಎಂ ದೇವೆಂದ್ರ ಫಡ್ನವಿಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮುಂಬೈನಲ್ಲಿ ಅಂಡರ್ ವರ್ಲ್ಡ್ ಬೆಳೆಯಲು ಫಡ್ನವಿಸ್ ಕಾರಣ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಸಮೀರ್ ವಾಂಖೆಡೆ ಹಾಗೂ ಫಡ್ನವಿಸ್ ನಡುವೆ ‘ಹಳೆಯ’ ಸಂಬಂಧವಿದೆ, ಈ ಕಾರಣಕ್ಕಾಗಿ ಫಡ್ನವಿಸ್ ವಾಂಖೆಡೆಯ ಬೆಂಬಲಕ್ಕೆ ನಿಂತಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

“ಬಿಕೆಸಿಯಲ್ಲಿ ಅಕ್ಟೋಬರ್ 8,2017ರಂದು ಸುಮಾರು 14 ಕೋಟಿ ಮೊತ್ತದ ನಕಲಿ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ, ಈ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದರ ತನಿಖಾ ತಂಡದಲ್ಲಿಯೂ ಸಮೀರ್ ವಾಂಖೆಡೆ ಭಾಗವಹಿಸಿದ್ದರು. ದೇವೆಂದ್ರ ಫಡ್ನವಿಸ್ ಸಿಎಂ ಆಗಿದ್ದಾಗ ರಾಜಕಾರಣದ ಅಪರಾಧೀಕರಣ ನಡೆದಿದೆ. ನಕಲಿ ಕರೆನ್ಸಿಗಳ ಜಾಲವನ್ನು ಸಿಎಂ ಆಗಿದ್ದಾಗ ಖುದ್ದು ಫಡ್ನವಿಸ್ ಅವರೇ ನಡೆಸುತ್ತಿದ್ದರು,” ಎಂದು ಮಲಿಕ್ ಹೇಳಿದ್ದಾರೆ.

ಬಿಜೆಪಿ ಸಭೆಗಳಲ್ಲಿ ಕಾಣಿಸುತ್ತಿದ್ದ, ಪಿಎಂ ನರೇಂದ್ರ ಮೋದಿ ಅವರ ಸಭೆಗಳಲ್ಲಿ ಕಾಣಿಸಿದ್ದ ರಿಯಾಝ್ ಭಾತಿ ಯಾರು ಎಂಬುದನ್ನು ಫಡ್ನವಿಸ್ ಹೇಳಬೇಕು. ನಕಲಿ ಪಾಸ್ ಪೋರ್ಟ್’ಗಳೊಂದಿಗೆ ಸಿಕ್ಕಿಬಿದ್ದಿದ್ದ ರಿಯಾಝ್ ಭಾತಿಯನ್ನು ಕೇವಲ ಎರಡೇ ದಿನಗಳಲ್ಲಿ ಯಾಕೆ ಬಿಡುಗಡೆಗೊಳಿಸಲಾಯಿತು? ಅವನಿಗೆ ದಾವೂದ್ ಇಬ್ರಾಹಿಂ ಜತೆಗಿದ್ದ ಸಂಬಂಧವನ್ನು ಯಾಕೆ ಮುಚ್ಚಿಡಲಾಯಿತು? ಇಂತಹ ವ್ಯಕ್ತಿ ಪ್ರಧಾನ ಮಂತ್ರಿ ಭಾಗವಹಿಸಿದ ಸಮಾರಂಭಕ್ಕೆ ತಲುಪಲು ಹೇಗೆ ಸಾಧ್ಯ?, ಎಂದು ಮಲಿಕ್ ಪ್ರಶ್ನಿಸಿದ್ದಾರೆ.

ರಿಯಾಝ್ ಭಾತಿ, ಮುನ್ನಾ ಯಾದವ್’ರಂತಹ ಹಲವು ಗೂಂಡಾಗಳನ್ನು ದೇವೇಂದ್ರ ಫಡ್ನವಿಸ್ ತಮ್ಮ ಅಧಿಕರಾವಧಿಯಲ್ಲಿ ರಕ್ಷಿಸಿದ್ದರು. ಮುನ್ನಾ ಯಾದವನ್ನು ಕಟ್ಟಡ ಕಾರ್ಮಿಕರ ಮಂಡಳಿಯ ಅಧ್ಯಕ್ಷನಾಗಿ ಆಯ್ಕೆ ಮಾಡಲಾಗಿತ್ತು. ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಕರೆತರುವ ಪ್ರಕರಣದಲ್ಲಿ ಭಾಗಿಯಾಗಿದ್ದ ಹೈದರ್ ಅಝಂ ಅನ್ನು ಮೌಲಾನಾ ಆಝಾದ್ ನಿಧಿ ಮಂಡಳಿಗೆ ಅಧ್ಯಕ್ಷನಾಗಿ ಆಯ್ಕೆ ಮಾಡಲಾಗಿತ್ತು, ಎಂದು ನವಾಬ್ ಮಲಿಕ್ ವಾಗ್ದಾಳಿ ನಡೆಸಿದ್ದಾರೆ.

“ಸಮೀರ್ ವಾಂಖೆಡೆ ಹಾಗೂ ಫಡ್ನವಿಸ್ ನಡುವಿನ ‘ಗೆಳೆತನ’ ಮುಂಬೈ ಹಾಗೂ ಮಹಾರಾಷ್ಟ್ರದಲ್ಲಿ ಅಪರಾಧಿ ಕೃತ್ಯಗಳ ಹೆಚ್ಚಳಕ್ಕೆ ಕಾರಣವಾಯಿತು. ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಇವೆಲ್ಲ ನಡೆದಿದೆ. ಅಮಾಯಕರನ್ನು ನಕಲಿ ಪ್ರಕರಣಗಳಲ್ಲಿ ಸಿಲುಕಿಸುವ ಜಾಲದ ವಿರುದ್ದ ನನ್ನ ಹೋರಾಟ ನಡೆಯುತ್ತಿದೆ. ಕೆಲವರು ನನ್ನನ್ನು ತಡೆಯಲು ಯತ್ನಿಸುತ್ತಿದ್ದಾರೆ. ಸತ್ಯವನ್ನು ಹೊರತರಲು ನನ್ನ ಹೋರಾಟ ಮುಂದುವರೆಸುತ್ತೇನೆ. ನನ್ನ ಹೊರಾಟ ಕೆಲವು ವ್ಯಕ್ತಿಗಳ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ಅಲ್ಲ. ಬದಲಾಗಿ ಕೆಲವು ಶಕ್ತಿಗಳಿಂದ ನಡೆಯುತ್ತಿರುವ ಅನ್ಯಾಯದ ವಿರುದ್ಧ ನನ್ನ ಹೊರಾಟ,” ಎಂದು ಮಲಿಕ್ ಹೇಳಿದ್ದಾರೆ.

Tags: BJPCongress Partyದೇವೇಂದ್ರ ಫಡ್ನವಿಸ್ನರೇಂದ್ರ ಮೋದಿನವಾಬ್ ಮಲಿಕ್ಬಿಜೆಪಿಭೂಗತ ಲೋಕಮುಂಬೈ
Previous Post

ಅಕ್ರಮ ಬಂಧನ ಬಲವಂತದ ಮದುವೆ: ಛತ್ತೀಸ್ಗಢದಲ್ಲೊಂದು ಅನಾಗರಿಕ ಡಿಟೆನ್ಷನ್ ಕ್ಯಾಂಪ್

Next Post

ಲಖಿಂಪುರ್ ಖೇರಿ ಹಿಂಸಾಚಾರದ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ : ಎತ್ತ ಸಾಗುತ್ತಿದೆ ತನಿಖೆ?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಲಖಿಂಪುರ್ ಖೇರಿ ಹಿಂಸಾಚಾರದ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ : ಎತ್ತ ಸಾಗುತ್ತಿದೆ ತನಿಖೆ?

ಲಖಿಂಪುರ್ ಖೇರಿ ಹಿಂಸಾಚಾರದ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ : ಎತ್ತ ಸಾಗುತ್ತಿದೆ ತನಿಖೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada