• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

Any Mind by Any Mind
June 16, 2021
in ಕರ್ನಾಟಕ
0
ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ
Share on WhatsAppShare on FacebookShare on Telegram

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವ ಜಾತಿ-ಜನಾಂಗದ ವಿರೋಧಿಯಲ್ಲ, ಹುಟ್ಟಿನ ಆಧಾರದ ಮೇಲೆ ಇವರು ಶ್ರೇಷ್ಠ, ಅವರು ಕನಿಷ್ಠ ಎಂಬ ಮನೋಸ್ಥಿತಿ, ವ್ಯವಸ್ಥೆ ವಿರುದ್ಧ ಮಾತ್ರ ನನ್ನ ಹೋರಾಟ, ಅನೇಕರು ಈ ವ್ಯವಸ್ಥೆಯೊಳಗೆ ಪಾಲುದಾರರಾಗಿದ್ದಾರೆ ಎಂದರು.

ADVERTISEMENT

ಬ್ರಾಹ್ಮಣ್ಯ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ವಿವರಣೆ ಕೇಳಲು ಪೊಲೀಸರು ನೊಟೀಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬಸವನಗುಡಿ ಠಾಣೆಗೆ ಆಗಮಿಸಿ ವಿಚಾರಣೆ ಮುಗಿಸಿ ಹೊರಬಂದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

Today, I was questioned for 4 hours at Basavanagudi Police Station regarding my social media videos & posts opposing #Brahminism

I stood by truth & democracy

Im proud to contribute in my own small ways to the global movement for equality, justice, & non-violence

Fight goes on!

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) June 16, 2021

ನನಗೆ ಈ ನೆಲದ ಕಾನೂನಿನ ಬಗ್ಗೆ ಗೌರವ ಇದೆ. ನನಗೆ ನ್ಯಾಯ ಸಿಗತ್ತೆ ಅನ್ನೊ ನಂಬಿಕೆ ಇದೆ. ನಾವು ಅಹಿಂಸಾತ್ಮಕವಾಗಿ ಹೋರಾಟ ಮುಂದುವರೆಸುತ್ತೇವೆ. ಮನುಷ್ಯತ್ವಕ್ಕೆ ವಿರುದ್ಧವಾದವರು ನನ್ನ ಮೇಲೆ ದೂರು ಹಾಕಿದ್ದಾರೆ. ಆದರೆ ನಾನು, ನನ್ನ ಹೇಳಿಕೆಯಿಂದ ಹಿಂದೆ ಸರಿಯಲ್ಲ ಎಂದಿದ್ದಾರೆ.

ನನ್ನ ಹೋರಾಟ ಬೇಧ-ಭಾವ ವಿರುದ್ಧ: ದೂರು ನೀಡಿದವರ ಹುನ್ನಾರ ಏನು ಎನ್ನುವುದನ್ನು ಕೇಳಪಟ್ಟಿದ್ದೇವೆ. ನನ್ನ ಹೋರಾಟ ಯಾವ ಜಾತಿ ಅಥವ ಜನಾಂಗದ ವಿರುದ್ಧವಾಗಿಲ್ಲ. ನನ್ನ ಹೋರಾಟ ಇರುವುದು ಬ್ರಾಹ್ಮಣ್ಯ ಅನ್ನೋ ಬೇಧ-ಭಾವದ ವಿರುದ್ಧ. ಜೀವಂತವಾಗಿರುವ ಅಸಮಾನತೆ ವಿರುದ್ಧ ಎಂದು ಚೇತನ್ ಸ್ಪಷ್ಟಪಡಿಸಿದರು.

ಇಲ್ಲಿ ನಾನು ಮನುಷ್ಯನ ಹುಟ್ಟನ್ನು ಪ್ರಶ್ನೆ ಮಾಡುತ್ತಿಲ್ಲ, ಮನುಷ್ಯ-ಮನುಷ್ಯರ ನಡುವೆ ಇರುವ ಬೇಧ-ಭಾವವನ್ನು ಪ್ರಶ್ನೆ ಮಾಡುತ್ತಿದ್ದೇವೆ. ಜೀವಂತವಾಗಿ ಇನ್ನೂ ಇದ್ದು, ಅದು ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಇನ್ನೂ ಇದ್ದು ಅದರ ವಿರುದ್ಧ ನಮ್ಮ ಹೋರಾಟ ಮುಂದುವರಿಸುತ್ತೇವೆ. ವಿಚಾರಣೆ ವೇಳೆ ಪ್ರತಿಯೊಂದು ಪ್ರಶ್ನೆಗೆ ಉತ್ತರ ಕೊಟ್ಟಿದ್ದೇನೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನಮಗೆ ನ್ಯಾಯ ಸಿಗುತ್ತದೆ ಎನ್ನುವ ಭಾವನೆ ಇದೆ ಎಂದಿದ್ದಾರೆ.

‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ. ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್​ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್​ ಟ್ವೀಟ್ ಮಾಡಿದ್ದರು. ಇದು ಸಾಕಷ್ಟು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.

Previous Post

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

Next Post

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
June 9, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆಯ ರಾಜಕೀಯ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಹೆಸರು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ....

Read moreDetails
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
Next Post
ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada