• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಇನ್ಮುಂದೆ ಸೋನಿಯಾ ಗಾಂಧಿ ಪೂರ್ಣಾವಧಿ ಎಐಸಿಸಿ ಅಧ್ಯಕ್ಷೆ; ಕಾಂಗ್ರೆಸ್ ಕಾರ್ಯಾಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧಾರ

ನಚಿಕೇತು by ನಚಿಕೇತು
October 18, 2021
in ದೇಶ, ರಾಜಕೀಯ
0
ಇನ್ಮುಂದೆ ಸೋನಿಯಾ ಗಾಂಧಿ ಪೂರ್ಣಾವಧಿ ಎಐಸಿಸಿ ಅಧ್ಯಕ್ಷೆ; ಕಾಂಗ್ರೆಸ್ ಕಾರ್ಯಾಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧಾರ
Share on WhatsAppShare on FacebookShare on Telegram


ಸುಮಾರು ಮೂರು ವರ್ಷಗಳಿಂದ ನಡೆಯುತ್ತಿರುವ ಚರ್ಚೆ ಮುಂದಿನ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು ಯಾರು ಎಂಬುದು. ಇದೇ ಕಾರಣಕ್ಕಾಗಿ ಹಿರಿಯ ನಾಯಕರು ಪಕ್ಷದ ವಿರುದ್ಧವೇ ತಿರುಗಿ ಬಿದ್ದ ಘಟನೆಗಳು ನಡೆದಿದ್ದವು. ಶನಿವಾರ ನಡೆದ  ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಮತ್ತೆ ಸೋನಿಯಾ ಗಾಂಧಿಗೆ ಪೂರ್ಣಾವಧಿ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಕಟ್ಟಲಾಗಿದೆ.

ADVERTISEMENT


ಹೌದು, ಕಾಂಗ್ರೆಸ್ ನಾಯಕತ್ವದ ಬಗ್ಗೆ ಪಕ್ಷದಲ್ಲಿ ಎದ್ದಿದ್ದ ಗೊಂದಲಕ್ಕೇ ಕೊನೆಗೂ ತೆರೆಬಿದ್ದಿದೆ. ಎಲ್ಲಾ ಟೀಕೆ ಟಿಪ್ಪಣಿಗಳಿಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತೆರೆ ಎಳೆದಿದ್ದಾರೆ. ಕಾಂಗ್ರೆಸ್ನಲ್ಲಿ ನಾನೇ ಪೂರ್ಣಾವಧಿ ಅಧ್ಯಕ್ಷೆ ಎಂದು ಹೇಳುವ ಮೂಲಕ ಪಕ್ಷದ ನಾಯಕರಿಗೆ ಸಂದೇಶ ರವಾನಿಸಿದ್ದಾರೆ.
2019ರ ಲೋಕಸಭಾ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್ ನಾಯಕನಿಲ್ಲದೆ ಪರದಾಡಬೇಕಾಯ್ತು. ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದವರಿದರೂ ಪೂರ್ಣ ಪ್ರಮಾಣದ ಅಧ್ಯಕ್ಷ ಸ್ಥಾನಕ್ಕಾಗಿ ಹಿರಿಯ ನಾಯಕರು G23 ಒಕ್ಕೂಟ ರಚಿಸಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧವೇ ತಿರುಗಿ ಬಿದ್ದಿದ್ದರು.
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿಯ ರಾಜೀನಾಮೆ ಬಳಿಕ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ  ಮುಂದುವರಿದಿದ್ದರು. ಆದರೂ, ಕಳೆದೊಂದು ವರ್ಷದಿಂದ ಪಕ್ಷದ ನಾಯಕತ್ವದ ಬಗ್ಗೆ ಜಿ-23 ನಾಯಕರು ಪ್ರಶ್ನೆಗಳನ್ನ ಎತ್ತಿದ್ದರು. ಇದು ಪಕ್ಷದಲ್ಲಿ ಹಲವು ಗೊಂದಲಗಳನ್ನ ಸೃಷ್ಟಿಸಿತ್ತು. ಸದ್ಯ ಈ ಎಲ್ಲಾ ಗೊಂದಲಗಳಿಗೂ ಇಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ತೆರೆ ಎಳೆದಿದ್ದಾರೆ.


ಶನಿವಾರ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯ್ತು. ಸಭೆಯಲ್ಲಿ ವೇಣುಗೋಪಾಲ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ, ಎ.ಕೆ. ಆ್ಯಂಟನಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಲವು ಮುಖಂಡರು ಭಾಗಿಯಾಗಿದ್ರು.
ಪ್ರಸ್ತುತ ರಾಜಕೀಯ ಸ್ಥಿತಿಗತಿಗಳ ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆ ಬಗ್ಗೆ ಚರ್ಚಿಸಲಾಯ್ತು. ಅಲ್ಲದೆ  ಪಕ್ಷದ ಪೂರ್ಣ ಅವಧಿಯ ಅಧ್ಯಕ್ಷರ ನೇಮಕಾತಿ ವಿಚಾರವೂ ಚರ್ಚೆಗೆ ಬಂತು. ಈ ವೇಳೆ ಪಕ್ಷದ ಪೂರ್ಣಾವಧಿ ಅಧ್ಯಕ್ಷೆಯಾಗಿ ನಾನೇ ಮುಂದುವರಿಯೋದಾಗಿ ಹೇಳೋ ಮೂಲಕ ಸೋನಿಯಾಗಾಂಧಿ ಇದ್ದ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ. ಇದಕ್ಕೆ ಎಲ್ಲರೂ ಒಮ್ಮತದ ಒಪ್ಪಿಗೆಯೂ ನೀಡಿದ್ದಾರೆ.

ಸದ್ಯ ಕಳೆದೊಂದು ವರ್ಷದಿಂದ ಪಕ್ಷದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಎದ್ದಿದ್ದ ಮಹಾ ಬಿಕ್ಕಟ್ಟಿಗೆ ಕೊನೆಗೂ ಸೋನಿಯಾ ಗಾಂಧಿ ಉತ್ತರ ಕೊಟ್ಟಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಧ್ವನಿ ಎತ್ತಿದ್ದ ಜಿ 23 ನಾಯಕರಿಗೂ ಖಡಕ್ ಸಂದೇಶವನ್ನೂ ಕೊಟ್ಟಿದ್ದಾರೆ.
2022ರ ಅಕ್ಟೋಬರ್ವರೆಗೂ ನಾನೇ ಕಾಂಗ್ರೆಸ್ ಅಧ್ಯಕ್ಷೆಯಾಗಿರುತ್ತೇನೆ. ಸುಮ್ಮನೆ ಈ ವಿಷಯದ ಬಗ್ಗೆ ಮಾಧ್ಯಮಗಳಲ್ಲಿ ಸಂದೇಶ ರವಾನಿಸೋದು ಬೇಡ. ಸದ್ಯ ಎಲ್ಲ ಸಮಸ್ಯೆಗಳೂ ಬಗೆಹರಿದಿದ್ದು, ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಪಕ್ಷದಲ್ಲಿ ನಾಯಕರು ಶಿಸ್ತು, ನಿಯಮ ಪಾಲಿಸಿ ಬೇಗುದಿ ಬಿಟ್ಟು ಪಕ್ಷದ ಪರ ಕೆಲಸ ಮಾಡಬೇಕು. ಪಕ್ಷ ಸಂಘಟನೆಗೆ ನಾವೆಲ್ಲರೂ ಸೇರಿ ಒತ್ತು ನೀಡಬೇಕಿದೆ.  ಪಕ್ಷ, ಆಂತರಿಕ ಚುನಾವಣೆ ಎದುರಿಸಲು ಸಿದ್ಧವಿದ್ದು, ಒಗ್ಗಟ್ಟು ಹಾಗೂ ಪಕ್ಷದ ಹಿತಾಸಕ್ತಿಯ ದೃಷ್ಟಿಯಿಂದ ಎಲ್ಲರು ಕೆಲಸ ಮಾಡಬೇಕಿದೆ ಅಂತಾ ಸೋನಿಯಾ ತಮ್ಮ ನಾಯಕರಿಗೆ ಸಂದೇಶವನ್ನ ರವಾನಿಸಿದ್ದಾರೆ.


ಅಂತೂ ದೀರ್ಘ ಕಾಲದಿಂದ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಎದ್ದಿದ್ದ ಬಹುದೊಡ್ಡ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕಡ್ಡಿ ಮುರಿದಂತೆ ನಾನೇ ಪೂರ್ಣಾವಧಿ ಅಧ್ಯಕ್ಷೆ ಅಂತೇಳೋ ಮೂಲಕ ಸೋನಿಯಾ ಗಾಂಧಿ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ. ಆದ್ರೆ ಇದಕ್ಕೆ ಬಂಡಾಯ ಎದ್ದಿದ್ದ ಜಿ23 ನಾಯಕರ ನಿಲುವೇನು ಎಂಬುದೇ ಸದ್ಯದ ಪ್ರಶ್ನೆ

Tags: BJPCongress Partyಎ.ಕೆ. ಆ್ಯಂಟನಿಜಿ-23ಬಿಜೆಪಿಮಲ್ಲಿಕಾರ್ಜುನ ಖರ್ಗೆರಾಹುಲ್ ಗಾಂಧಿಲೋಕಸಭಾ ಚುನಾವಣೆವೇಣುಗೋಪಾಲಸುರ್ಜೇವಾಲಸೋನಿಯಾ ಗಾಂಧಿ
Previous Post

ರಾಜ್ಯದಲ್ಲಿ ಕುಸಿತ ಕಂಡ ಲಸಿಕೆ ಅಭಿಯಾನ; COVID-19 ಪರೀಕ್ಷೆ ಸಂಖ್ಯೆಯಲ್ಲೂ ಕುಸಿತ

Next Post

ಉತ್ತರ ಪ್ರದೇಶದಲ್ಲಿ ಹೊಸ ಜಾತಿ ಸಮೀಕರಣ ರೂಪಿಸಲು ಬಿಜೆಪಿ ಯತ್ನ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post
ಉತ್ತರ ಪ್ರದೇಶದಲ್ಲಿ ಹೊಸ ಜಾತಿ ಸಮೀಕರಣ ರೂಪಿಸಲು ಬಿಜೆಪಿ ಯತ್ನ

ಉತ್ತರ ಪ್ರದೇಶದಲ್ಲಿ ಹೊಸ ಜಾತಿ ಸಮೀಕರಣ ರೂಪಿಸಲು ಬಿಜೆಪಿ ಯತ್ನ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada