ಮೈಸೂರು (Mysuru): ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ (Congress) ಸೇರಲ್ಲ ಎಂದು ಶಾಸಕ ಜಿ.ಟಿ.ದೇವೆಗೌಡ (G.T.Devegowda) ಹೇಳಿದ್ದಾರೆ.
ಕಾಂಗ್ರೆಸ್ ಸೇರುತ್ತಾರೆ ಎಂಬ ವಿಚಾರವಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರಲ್ಲ. ಮೋದಿಯವರನ್ನು (Narendra Modi) ಮತ್ತೆ ಪ್ರಧಾನಿ ಮಾಡುವುದೇ ನಮ್ಮ ಗುರಿ ಎಂದಿದ್ದಾರೆ.
ನೂರಕ್ಕೆ ನೂರರಷ್ಟು ಪ್ರತಾಪ ಸಿಂಹರಿಗೆ (Pratap Simha) ಟಿಕೆಟ್ ಸಿಗುತ್ತೆ. ನಾನು ಕಳೆದ ಎರಡು ಚುನಾವಣೆಯಲ್ಲಿ ಪ್ರತಾಪ್ ಸಿಂಹ ಬೆಂಬಲಿಸಿದ್ದೆ. ಈಗಲೂ ಬೆಂಬಲಿಸುತ್ತೇನೆ. 10 ವರ್ಷದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರಿಗೆ ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದು ಸಂಸದ ಪ್ರತಾಪ್ ಸಿಂಹ ಪರ ಬ್ಯಾಟಿಂಗ್ ಮಾಡಿದ್ದಾರೆ.
#karnataka #mysuru #gtdevegowda #pratapsimha #jds #bjp #congress