• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜನರ ತೀರ್ಪಿಗೆ ನಾನು ತಲೆಬಾಗುತ್ತೇನೆ, ನಿಖಿಲ್ ಕುಮಾರಸ್ವಾಮಿ..!!

ಪ್ರತಿಧ್ವನಿ by ಪ್ರತಿಧ್ವನಿ
November 23, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ, ಸೌಂದರ್ಯ
0
Share on WhatsAppShare on FacebookShare on Telegram

ನಾನು ಎದೆಗುಂದಲ್ಲ, ಸೋಲನ್ನು ಸಮಚಿತ್ತದಿಂದ ಸ್ವಕರಿಸುತ್ತೇನೆ, ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇನೆ..
ಕಾರ್ಯಕರ್ತರೆ ನಮ್ಮ ಪಕ್ಷದ ಬೆನ್ನೆಲುಬು ನಿಮ್ಮ ದ್ವನಿಯಾಗಿ ನಿಲ್ಲುತೇನೆ ಎಂದ ನಿಖಿಲ್ ಕುಮಾರಸ್ವಾಮಿ

ADVERTISEMENT

ಚನ್ನಪಟ್ಟಣದ ಜನತೆ ನೀಡಿದ ತೀರ್ಪಿಗೆ ನಾನು ತಲೆಬಾಗಿದ್ದೇನೆ. ಅವರ ಅದೇಶವನ್ನು ಒಪ್ಪಿಕೊಳ್ಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಬಿಟ್ಟು ಪಲಾಯನ ಮಾಡುವ ವ್ಯಕ್ತಿ ನಾನಲ್ಲ, ಎದೆಗುಂದುವ ಪ್ರಶೆಯೂ ಇಲ್ಲ. ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

Yaduveer Wadiyar: ನಾವು ಕೂಡ ಸೋಲಿನ ಅವಲೋಕನ ಮಾಡಬೇಕಿದೆ: ಯದುವೀರ್..! #bjp #nikhilkumaraswamy #yaduveer

ಚನ್ನಪಟ್ಟಣ ಚುನಾವಣೆ ಫಲಿತಾಂಶದ ಬಳಿಕ ಬಿಡದಿ ತೋಟದ ಮನೆಯಲ್ಲಿ ಮಾಧ್ಯಮಗಳ ಜತೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಜನರ ಆದೇಶವೇ ಅಂತಿಮ. ಅವರ ತೀರ್ಪಿಗೆ ತಲೆಬಾಗುತ್ತೇನೆ. ಇದು ನನಗೆ ಮೂರನೇ ಸೋಲು. ಈ ಸೋಲನ್ನು ವಿನಮ್ರವಾಗಿ ಸ್ವೀಕಾರ ಮಾಡುತ್ತೇನೆ. ಕ್ಷೇತ್ರದ ಜನತೆಯ ನಿರಂತರವಾಗಿ ಇರುತ್ತೇನೆ, ಅವರ ಸೇವೆ ಮಾಡುತ್ತೇನೆ. ನನ್ನ ಪರವಾಗಿ ಚುನಾವಣೆಯಲ್ಲಿ ಹಗಲು ರಾತ್ರಿ ಅವಿರತವಾಗಿ ಕೆಲಸ ಮಾಡಿದ ಜೆಡಿಎಸ್ ಬಿಜೆಪಿ ಪಕ್ಷಗಳ ಎಲ್ಲಾ ಕಾರ್ಯಕರ್ತರು, ಮುಖಂಡರು ಸೇರಿ ಎಲ್ಲರಿಗೂ ಶಿರಬಾಗಿ ನಮಿಸುತ್ತೇನೆ ಎಂದು ಅವರು ಹೇಳಿದರು.

ಇದು ನಾನು ಬಯಸದೇ ಬಂದ ಉಪ ಚುನಾವಣೆ. ಕಡೆ ಗಳಿಗೆಯಲ್ಲಿ ತೆಗೆದುಕೊಂಡ ನಿರ್ಧಾರ. ಪಕ್ಷ ಕಷ್ಟಕಾಲದಲ್ಲಿ ಇದ್ದಾಗ ತಲೆಬಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೇನೆ. 87,031 ಜನರು ನನ್ನ ಪರವಾಗಿ ಮತ ಹಾಕಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿ ಮಾಡಲಾರೆ. ಚುನಾವಣೆ ಸಂದರ್ಭದಲ್ಲಿ ಜನತೆಗೆ ನಾನು ಕೆಲ ಮಾತು ಕೊಟ್ಟಿದ್ದೇನೆ. ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಚನ್ನಪಟ್ಟಣ ಫಲಿತಾಂಶ ಅಘಾತ ತಂದಿದೆ ನಿಜ. ಆದರೆ, ಕೇವಲ ಅತ್ಯಂತ ಕಡಿಮೆ ಅವಧಿಯಲ್ಲಿ ಒಬ್ಬ ಯುವಕನಿಗೆ 87,031 ಮತಗಳು ಬಂದಿವೆ. ಇದು ಸಣ್ಣ ಪ್ರಮಾಣದ ಮತವಲ್ಲ, ಜನರ ಋಣ ತೀರಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ಎಲ್ಲರಿಗೂ ದನಿಯಾಗಿ ಇರುತ್ತೇನೆ. ಇಲ್ಲಿ ನಾವು ಎಡವಿದ್ದೇವೆ. ಎಲ್ಲಿ ಸರಿಪಡಿಸಿಕೊಳ್ಳ ಬೇಕೆಂದು ಕೂತು ಚರ್ಚೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಈ ಸೋಲಿನಿಂದ ನಾನು ಎದೆಗುಂದಲ್ಲ

ನಿಖಿಲ್ ಕುಮಾರಸ್ವಾಮಿಯಿಂದ ಪಕ್ಷ ಅಲ್ಲ, ಪಕ್ಷದಿಂದ ನಿಖಿಲ್ ಕುಮಾರಸ್ವಾಮಿ ಎಂದು ನಂಬಿರುವವನು ನಾನು. ಒಬ್ಬ ಸಾಮಾನ್ಯ ಕಾರ್ಯಕರ್ತನ ಹಾಗೆ ಕೆಲಸ ಮಾಡುತ್ತೇನೆ. ಈ ಸೋಲಿನಿಂದ ನಾನು ಎದೆಗುಂದಲ್ಲ, ಯುವ ಸಮುದಾಯದ ದನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ದೇವೆಗೌಡರು ಮತ್ತು ಕುಮಾರಸ್ವಾಮಿ ಅವರನ್ನು ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಸಿದವರು ರಾಮನಗರ ಜಿಲ್ಲೆಯ ಜನತೆ. ನಾನು ಚುನಾವಣೆ ವೇಳೆ ಮಾತಾಡಿದ ಮಾತು ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ. ನಾನು ಕೊಟ್ಟಿರುವ ಯಾವುದೇ ಮಾತು ಹಿಂಪಡೆಯೋದಿಲ್ಲ. ಅದನ್ನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದು ತಿಳಿಸಿದರು.

ನಾನು ಈ ಜಿಲ್ಲೆಯ ಮಗ ಅಂತ ಭಾವಿಸುತ್ತೇನೆ. ನನಗೆ ಕ್ಷೇತ್ರದ ಜನರ ಪ್ರೀತಿ ವಾತ್ಸಲ್ಯ ದಕ್ಕಿದೆ. ನಾವೇನು ಇಲ್ಲಿ ಜನಿಸಿಲ್ಲದಿರಬಹುದು, ನಮ್ಮದು ಅತ್ಯಂತ ಭಾವನಾತ್ಮಕ ಸಂಬಂಧ. ರಾಮನಗರದ ಜಿಲ್ಲೆ ಜನರ ಜತೆ ಪ್ರಾಮಾಣಿಕವಾಗಿ ಹೆಜ್ಜೆ ಹಾಕುತ್ತೇನೆ. ಕುಮಾರಣ್ಣನ ಜತೆಗೂಡಿ ಪ್ರಾಮಾಣಿಕವಾಗಿ ಕೆಲಸ ಮಾಡ್ತೇನೆ. ಮಂಡ್ಯ ಮತ್ತು ರಾಮನಗರ ಜನತೆ ಶಕ್ತಿ ತುಂಬಿಸಿ ಕುಮಾರಣ್ಣ ಅವರನ್ನು ಕೇಂದ್ರದ ಮಂತ್ರಿ ಮಾಡಿದ್ದಾರೆ ಜನರು. ಅವರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ನಿಖಿಲ್ ಅವರು ತಿಳಿಸಿದರು.

ಒಂದು ಸಮುದಾಯದ ಮತ ಕಾಂಗ್ರೆಸ್ ಗೆ ಮಾತ್ರ ಹೋಗಿವೆ:

ಒಂದು ನಿರ್ದಿಷ್ಟ ಸಮುದಾಯದ ಮತಗಳು ಕಾಂಗ್ರೆಸ್ ಪರವಾಗಿ ಕ್ರೋಢೀಕರಣ ಆಗಿವೆ. ಈ ಪಕ್ಷ ಸ್ಥಾಪನೆಯಾದಾಗಿಂದ ಆ ಸಮುದಾಯದ ಪರವಾಗಿಯೂ ನಮ್ಮ ಪಕ್ಷ ಹೋರಾಟ ನಡೆಸಿತ್ತು. ದೇವೇಗೌಡರು ಮೀಸಲಾತಿ ನೀಡಿದ್ದರು. ಅವರಿಗೆ ದೇವೇಗೌಡರು, ಕುಮಾರಸ್ವಾಮಿ ಅವರು ಸಾಕಷ್ಟು ಒಳ್ಳೆಯದು ಮಾಡಿದ್ದಾರೆ. ಆದರೂ ಆ ಸಮುದಾಯ ನಮ್ಮ ಪರ ಮತ ಹಾಕಿಲ್ಲ, ಈ ಬಗ್ಗೆ ಹೆಚ್ಚು ಚರ್ಚೆ ಮಾಡಲು ನಾನು ಬಯಸುವುದಿಲ್ಲ ಎಂದು ನಿಖಿಲ್ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಕಾರ್ಯಕರ್ತರೇ ಜೆಡಿಎಸ್ ಪಕ್ಷದ ಬೆನ್ನೆಲುಬು, ಶಕ್ತಿ. ದೇವೆಗೌಡರು ಫೀನಿಕ್ಸ್ ನಂತೆ ಜೆಡಿಸ್ ಪಕ್ಷವನ್ನ ಕಟ್ಟಿದ್ದಾರೆ.ಎಲ್ಲ ಏಳು ಬೀಳುಗಳನ್ನು ನೋಡಿದ್ದೇವೆ. ಎಲ್ಲವನ್ನು ಸಮಚಿತ್ತವಾಗಿ ಕೊಂಡೋಯ್ಯುತ್ತೀವಿ.ಎಲ್ಲ ಸಮುದಾಯಗಳಿಗೆ ಧ್ವನಿಯಾಗುವ ಕೆಲಸ ಮಾಡ್ತೀವಿ ಎಂದು ತಿಳಿಸಿದರು.

ಮಾಧ್ಯಮಗೋಷ್ಟಿಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎಲ್ಲಾ ನಾಯಕರು, ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Tags: BJPChannapattana By ElectionCongress PartyHD Devegowdahd kumarswamyJDSNikhil Kumarswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾರ್ಪೋರೇಟ್‌ ಪ್ರಪಂಚವೂ ಭ್ರಷ್ಟಾಚಾರದ ಕೂಪವೂ;

Next Post

ಕನ್ನಡದಲ್ಲೂ ಬರಲಿದೆ “ಜೋಜು ಜಾರ್ಜ್” ಅಭಿನಯದ ಮಲಯಾಳಂ ಚಿತ್ರ “ಪಣಿ” .

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಕನ್ನಡದಲ್ಲೂ ಬರಲಿದೆ "ಜೋಜು ಜಾರ್ಜ್" ಅಭಿನಯದ ಮಲಯಾಳಂ ಚಿತ್ರ "ಪಣಿ" .

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada