• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ: ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದ ಎಚ್.ಡಿ.ದೇವೇಗೌಡರು

Any Mind by Any Mind
January 13, 2024
in ಕರ್ನಾಟಕ, ರಾಜಕೀಯ
0
ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ: ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದ ಎಚ್.ಡಿ.ದೇವೇಗೌಡರು
Share on WhatsAppShare on FacebookShare on Telegram

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಕೇಂದ್ರ ಮಂತ್ರಿ(Central Minister) ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ(Narendra Modi) ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು(HD Deve Gowda) ಹೇಳಿದರು.

ADVERTISEMENT

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ ಮಾತನಾಡಿದ ಅವರು; ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ‌ ಅವರ‌ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿ‌ಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೂ ಉತ್ತರಿಸಿದ ಅವರು; ನರೇಂದ್ರ ಮೋದಿ ಅವರು ಏನು ಹೇಳ್ತಾರೋ ನೊಡೋಣ. ಅವರ ಮನಸಿನಲ್ಲಿ ಇದೆಯೋ ಗೊತ್ತಿಲ್ಲ. ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಅವರು ಕೇಳುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧೆ ಮಾಡೊದಿಲ್ಲ. 92 ವರ್ಷ ಆಯ್ತು. ರಾಜ್ಯಸಭೆಯ ಅವಧಿ ಇನ್ನು ಎರಡೂವರೆ ವರ್ಷ ಇದೆ. ರಾಜ್ಯಸಭೆಯೇ ಸಾಕು. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ, ನನಪಿನ ಶಕ್ತಿ ಇದೆ ಎಂದರು ಮಾಜಿ ಪ್ರಧಾನಿಗಳು.

ಮೋದಿ ಅವರ ವ್ರತಾಚರಣೆ ಬಗ್ಗೆ ಮೆಚ್ಚುಗೆ:
ನರೇಂದ್ರ ಮೋದಿ ಅವರಿಂದ 11 ದಿನಗಳ ವ್ರತಾಚರಣೆ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ದೇವೇಗೌಡರು; ಮೋದಿ‌ ಅವರು ನಿಷ್ಠೆಯಿಂದ, ಕ್ರಮಬದ್ದತೆಯಿಂದ ಮೋದಿ ವ್ರತಾಚರಣೆ ಮಾಡುತ್ತಿದ್ದಾರೆ. ಸೀತಾಮಾತೆ ಅಪಹರಣ ಮಾಡಿದ ನಾಸಿಕ್ ನಿಂದ ಅವರು ವ್ರತಾಚರಣೆ ಶುರು ಮಾಡಿದ್ದಾರೆ. ಅಲ್ಲಿ ಕರಿರಾಮ ಅಂತ ವಿಗ್ರಹ ಸ್ಥಾಪನೆ ಮಾಡಿದ್ದಾರೆ ಎಂದರು. ಮೋದಿ ಅವರು ಪುಣ್ಯ ಮಾಡಿಕೊಂಡು ಬಂದಿದ್ದಾರೆ. ನಿಯಮ, ನಿಷ್ಠೆ, ಶಿಸ್ತಿನಿಂದ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಶಾಸ್ತ್ರೋಕ್ತವಾಗಿ ಶ್ರದ್ಧೆಯಿಂದ ಎಲ್ಲಾ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ. ನಾನು ಕೂಡ ಇಂತಹ ವ್ರತಾಚರಣೆ ಮಾಡಿರಲಿಲ್ಲ. ಮೋದಿಗೆ ಅವರಿಗೆ ದೈವ ಶಕ್ತಿ ಇದೆ ಎಂದು ಹೇಳಿದರು ಮಾಜಿ ಪ್ರಧಾನಿಗಳು. ನಾನು ಕೂಡ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗುತ್ತೇನೆ. 99% ನಾನು ಹೋಗುತ್ತೇನೆ. ನನ್ನ ಶ್ರೀಮತಿ ಜೊತೆ ಹೋಗುವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಜನವರಿ 22ರ ಬಳಿಕ ರಾಮಮಂದಿರಕ್ಕೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು; ಸಿದ್ದರಾಮಯ್ಯ ಹೇಳಿಕೆಯನ್ನು ಸ್ವಾಗತ ಮಾಡುತ್ತೇನೆ. ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡಲು ಹೇಳಿದ್ದಾರೆ. ಇದು ಒಳ್ಳೆಯ ವಿಚಾರ. ಸಾಫ್ಟ್ ಹಿಂದುತ್ವವೋ, ಇನ್ನೊಂದೋ ಗೊತ್ತಿಲ್ಲ. ಸಿದ್ದರಾಮಯ್ಯ ರಾಮಮಂದಿರಕ್ಕೆ ಹೋಗುವ ಹೇಳಿಕೆ ಸ್ವಾಗತಾರ್ಹ ಎಂದು ಅವರು ತಿಳಿಸಿದರು. ಯುವನಿಧಿ ಯೋಜನೆ ಬಗ್ಗೆಯೂ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ಈ ಯೋಜನೆ ಒಳ್ಳೆಯದು, ಯುವ ಜನರಿಗೆ ಹಣ ಕೊಡಲಿ. ಅದರಲ್ಲಿ ತಪ್ಪೇನೂ ಇಲ್ಲ. ಎಲ್ಲಾ ಯುವಕರಿಗೂ ಹಣ ಕೊಡಲಿ. ಆ ಯುವಜನರು ಕೂಡ ರಾಮ ಮಂದರಕ್ಕೆ ಹೋಗಿ ಬರಲಿ. ಕೂಡಲೇ ಯುವನಿಧಿಯ ಮೊದಲ ಕಂತಿನ ಹಣ ಬಿಡುಗಡೆ ಮಾಡಲಿ ಎಂದು ಹೇಳಿದರು.

ಹಾಸನದಿಂದ ಪ್ರಜ್ವಲ್ ಸ್ಪರ್ಧೆ:
ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಮತ್ತೆ ಸ್ಪರ್ಧೆ ಮಾಡುತ್ತಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ; ಈ ಬಗ್ಗೆ ನಿಮಗೆ ಅನುಮಾನ ಏಕೆ? ಪ್ರಜ್ವಲ್ ಗೆ ಮೋದಿ‌ ಅವರು ಆಶೀರ್ವಾದ ಮಾಡ್ತಾರೆ‌. ಕುಮಾರಸ್ವಾಮಿ ಕೂಡಾ ಆಶೀರ್ವಾದ ಮಾಡ್ತಾರೆ. ನಾನು ಕೂಡಾ ಆಶೀರ್ವಾದ ಮಾಡಿದ್ದೀನಿ ಎಂದರು.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೆಗೌಡ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ ಹಾಜರಿದ್ದರು.

Previous Post

ಇಂದಿರಾಗಾಂಧಿ ಕುಟುಂಬದ ದುರಂತದ ಸಾವಿನ ಬಗ್ಗೆ ಸಂಸದ ಅನಂತಕುಮಾರ ಹೆಗಡೆ ಹೇಳಿದ್ದೇನು?

Next Post

ಬಸವಾದಿ ಶರಣರ ಆಶಯದ ಜಾತಿರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ: ಸಿದ್ದರಾಮಯ್ಯ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಬಸವಾದಿ ಶರಣರ ಆಶಯದ ಜಾತಿರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ: ಸಿದ್ದರಾಮಯ್ಯ

ಬಸವಾದಿ ಶರಣರ ಆಶಯದ ಜಾತಿರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ: ಸಿದ್ದರಾಮಯ್ಯ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada