ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ (Inauguration of Shimoga Airport) ನೆನ್ನೆ ಬಂದಿದ್ದು ಜನರನ್ನು ನಾನು ಇತಿಹಾಸದಲ್ಲೇ ಇಷ್ಟು ಜನ ನೋಡಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (BJP leader KS Eshwarappa) ಹೇಳಿದ್ದಾರೆ.
ಜನರು ನಮ್ಮ ಕೆಲಸ ಗಮನಿಸುತ್ತಿದ್ದಾರೆ ನಮ್ಮ ಮೇಲೆ ರಾಜ್ಯದ ಜನರು ನಂಬಿಕೆ ಇಟ್ಟಿದ್ದಾರೆ ಈ ಕಾರಣಕ್ಕಾಗಿ ರಾಷ್ಟ್ರೀಯ ನಾಯಕರು ಬಂದ್ರೆ ಆದ್ದೂರಿಯಾಗಿ ಸ್ವಾಗತ ಮಾಡುತ್ತಾರೆ ಜೊತೆಗೆ ಬಿಜೆಪಿ ಪಕ್ಷ ಅಧಿಕಾರ ಬರಬೇಕು ಎಂಬುದು ರಾಜ್ಯದ ಜನರ ಆಶಯ ಆಗಿದೆ, ಕಾಂಗ್ರೆಸ್ ನಿಂದ ಪೇ ಸಿಎಂ ಪೋಸ್ಟರ್ (Pay CM poster) ಅಭಿಯಾನಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದು, ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಗುಡುಗಿದ್ದಾರೆ.
ಇಂತ ಮಹಾನ್ ನಾಯಕ ಪ್ರಧಾನಿ ಮೋದಿ ಅವರನ್ನು ನರಹಂತಕ ಎಂದು ಹೇಳುತ್ತಾರೆ ೪೦ ಪರ್ಸೆಂಟೇಜ್ ವ್ಯವಹಾರ ಎಂದು ಕಾಂಗ್ರೆಸ್ ನವರು ಟೀಕೆ ಮಾಡಿದ್ದರು. ಈಗ ಪೇ ಸಿಎಂ (Pay CM) ಎಂದು ಆರೋಪ ಮಾಡುತ್ತಿದ್ದಾರೆ ಅವರು ಟೀಕೆ ಮಾಡುವ ಪದಗಳು ಸರಿಯಿಲ್ಲ, , ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಉತ್ತರ ಕೊಡುತ್ತಾರೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ಭಾಷೆ ಮೇಲೆ ಹಿಡಿತ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.