ರಾಜಕೀಯಕ್ಕೆ ಬರಬೇಕಾ? ಲೋಕಸಭಾ ಚುನಾವಣೆಗೆ ನಿಲ್ಲಬೇಕಾ? ಎಂಬ ಬಗ್ಗೆ ನಾನಿನ್ನೂ ನಿರ್ಧಾರ ಮಾಡಿಲ್ಲ ಎಂದು ಜಯದೇವ(Jayadeva) ಹೃದ್ರೋಗ ಆಸ್ಪತ್ರೆಯ(Hospital) ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್(Dr CN Manjunath) ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ ಬಾಲಗಂಗಾಧರನಾಥ ಸ್ವಾಮಿ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವು ಕಡೆ ಜನರು ಒತ್ತಡ ಹಾಕುತ್ತಾ ಇದ್ದಾರೆ, ಜನರು ನನ್ನ ಲೋಕಸಭಾ(Loka Saba) ಚುನಾವಣೆ(Election) ಸ್ಪರ್ಧೆ ಬಗ್ಗೆ ಮಾತಾಡುತ್ತಾ ಇದ್ದಾರೆ. ಆದರೆ ನಾನು ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ. ರಾಜಕೀಯಕ್ಕೆ ಬರಬೇಕಾ, ಲೋಕಸಭೆಗೆ ನಿಲ್ಲಬೇಕೆಂದು ನಿರ್ಧಾರ ಮಾಡಿಲ್ಲ.

ರಾಜ್ಯ ಮಟ್ಟದಲ್ಲಿ ಹೃದ್ರೋಗ ಚಿಕಿತ್ಸಾ ಕೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೀರಾ. ಇದೇ ರೀತಿ ರಾಷ್ಟ್ರ ಮಟ್ಟದಲ್ಲೂ ಈ ರೀತಿಯ ಸುಧಾರಣೆ ಯಾಕೆ ತರಬಾರದು ಎಂದು ಹೇಳ್ತಾ ಇದ್ದಾರೆ. ಮುಂದೆ ಸ್ಪರ್ಧೆಯ ಬಗ್ಗೆ ತೀರ್ಮಾನ ಮಾಡಿದ್ರೆ ಹೇಳ್ತೀನಿ. ನಾನು ಈಗಲೂ ಆಲೋಚನೆಯಲ್ಲಿಯೇ ಇದ್ದೀನಿ. ಲೋಕಸಭೆ ಪ್ರವೇಶ ಕೇವಲ ರಾಜಕೀಯ ಮೂಲಕವೇ ಅಲ್ಲ. ಲೋಕಸಭೆನೆ ಬೇರೆ ರಾಜಕೀಯವೇ ಬೇರೆ ಎಂಬುದು ನನ್ನ ಅರ್ಥ. ಸದ್ಯ ಆಲೋಚನೆಯಲ್ಲಿ ಇದ್ದೀನಿ ಮುಂದೆ ಈ ಬಗ್ಗೆ ಸ್ಪಷ್ಟ ನಿಲುವು ಹೇಳ್ತೀನಿ ಎನ್ನುವ ಮೂಲಕ ಲೋಕಸಭಾ ಚುನಾವಣೆಗೆ ತಾವು ಸ್ಪರ್ಧಿಸುವ ವಿಷಯಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಮಾಡಿರೋದು ಜನ ಸೇವೆ. ರಾಷ್ಟ್ರಮಟ್ಟದಲ್ಲಿ ಜನಸೇವೆಗೆ ಅವಕಾಶವಿದೆ ಹೋಗಿ ಎನ್ನುತ್ತಿದ್ದಾರೆ. ಒಂದು ಜಿಲ್ಲೆಗೆ ಹೋದಾಗ ಆ ಜಿಲ್ಲೆಯವರು ಹೇಳ್ತಾರೆ. ನಾಳೆ ಮೈಸೂರಿಗೆ ಹೋಗ್ತಾ ಇದೀನಿ. ಹೋದಲ್ಲಿ ಎಲ್ಲಾ ಅಲ್ಲಿ ನಿಲುತ್ತಿರಾ ಅಂತಾರೆ ಜನರು. ಈ ರಾಜಕೀಯ ಕ್ಷೇತ್ರಕ್ಕೆ ಹೋಗಬೇಕಾ ಬೇಡ್ವಾ ಎನ್ನೋ ನಿರ್ಧಾರವೇ ಮಾಡಿಲ್ಲ ಎಂದಿದ್ದಾರೆ.
ಇದೇ ವೇಳೆ ಜಯದೇವ ಸಂಸ್ಥೆ ಮೇಲೆ ಸರ್ಕಾರದಿಂದ ತನಿಖೆಗೆ ಚಿಂತನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಇಡೀ ರಾಷ್ಟ್ರದಲ್ಲಿ ಜಯದೇವ ಸಂಸ್ಥೆ ಮಾದರಿ ಸಂಸ್ಥೆಯಾಗಿ ಅಭಿವೃದ್ಧಿಗೊಳಿಸಿದ್ದೇವೆ. ಈ ಸರ್ಕಾರ ಹಾಗೂ ಹಿಂದಿನ ಸರ್ಕಾರ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಡೀ ರಾಷ್ಟ್ರದಲ್ಲಿ ಜಯದೇವ ಸಂಸ್ಥೆ ಮಾದರಿ ಸಂಸ್ಥೆಯಾಗಿ ಅಭಿವೃದ್ಧಿ ಮಾಡಿದ್ದೇವೆ. ಈ ಸರ್ಕಾರ ಹಾಗೂ ಹಿಂದಿನ ಸರ್ಕಾರ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವ ಕಾರಣಕ್ಕೆ ತನಿಖೆ ಮಾಡಬೇಕು ಎಂದು ನಿರ್ಧಾರ ಮಾಡಿದೆ ಗೊತ್ತಿಲ್ಲ, ನನಗೆ ಸಂತೋಷ. ಕೇಂದ್ರ ಆರೋಗ್ಯ ಸ್ಥಾಯಿ ಸಮಿತಿ ನಮ್ಮ ಕೆಲಸ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಾರ್ಯವೈಖರಿ, ನಿರ್ವಹಣೆ ನೋಡಿ ಓನರ್ ಯಾರು ಅಂದ್ರು. ಸರ್ಕಾರಕ್ಕೆ ಈ ಸಂಸ್ಥೆ ಶೋಕೇಸ್ ಆಗಿದೆ ಎಂದಿದ್ಧರು. ಜಯದೇವ ರೀತಿ ಸರ್ಕಾರಿ ಸಂಸ್ಥೆಗಳನ್ನ ಯಾಕೆ ಅಭಿವೃದ್ದಿ ಮಾಡಬಾರದು ಎಂದು ಸರ್ಕಾರವೇ ತಿಳಿಸಿದೆ ಎಂದಿದ್ದಾರೆ.
#CNManjunath #JayadevaHospital #Lokasaba #Election #Mandya