Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬ್ರಾಹ್ಮಣ ಸಮೂಹವನ್ನು ನಾನು ನಿಂದಿಸಿಲ್ಲ: ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟನೆ

ಪ್ರತಿಧ್ವನಿ

ಪ್ರತಿಧ್ವನಿ

February 9, 2023
Share on FacebookShare on Twitter

ಬೆಂಗಳೂರು: ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ. ಬ್ರಾಹ್ಮಣ ಸಮೂಹವನ್ನು ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ. ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ. ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ ಎಂದು ಹೇಳಿದ್ದಾರೆ.

ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ. 8/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 9, 2023

ನಿಂದಕರ ಬಗ್ಗೆ ಅಂಜುವ ಪೈಕಿ ನಾನಲ್ಲ

ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ವಿಕೃತಿಗೆ ಸೊಪ್ಪು ಹಾಕುವುದಿಲ್ಲ

ನಾನು ಎತ್ತಿದ ವಿಚಾರಕ್ಕೆ ಸಂಬಂಧವೇ ಇಲ್ಲದಂತೆ ಇವರು ಅವೇಶಭರಿತರಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ, ವಿಧಾನಸೌಧದಲ್ಲಿ ಬಿಜೆಪಿಯು ಪೇಶ್ವೆಗಳ ವಂಶಾವಳಿಯ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು ತಾಕತ್ತು ತೋರಿಸುತ್ತಿಲ್ಲ, ಯಾಕೆ? ಇಂಥ ವಿಕೃತಿಗಳಿಗೆ ನಾನು ಸೊಪ್ಪು ಹಾಕುವುದಿಲ್ಲ ಎಂದು ಹೇಳಿದ್ದಾರೆ.

ಬೊಗಳೆ ಬಿಟ್ಟು, ಕೇಕೆ ಹಾಕಿದರೆ ಜನ ನಂಬುವುದಿಲ್ಲ

ಯಾರೋ ಮಾಡಿದ ಆದೇಶ, ಕಟ್ಟಪ್ಪಣೆಗೆ ಅಂಜಿ ನನ್ನ ಬಗ್ಗೆ ಬಿಜೆಪಿ ನಾಯಕರು ಸರಣಿ ಹೇಳಿಕೆ ನೀಡಬಹುದು. ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿಸಬಹುದು. ಆದರೆ, ಅವರೆಲ್ಲ ತಮ್ಮ ಆತ್ಮಸಾಕ್ಷಿಯನ್ನು ಒಮ್ಮೆ ಪ್ರಶ್ನೆ ಮಾಡಿಕೊಳ್ಳಲಿ. ಪೇಶ್ವೆ ವಂಶಾವಳಿ ನಾಯಕನ ಸರಣಿ ಹುನ್ನಾರಗಳ ಬಗ್ಗೆ ಮಾತನಾಡುವ ಧೈರ್ಯ ಅವರು ತೋರುತ್ತಾರೆಯೇ?  ನನಗೆ ಸೋಲುವ ಭಯವಂತೆ, ಹತಾಶೆಯಂತೆ ಎಂದು ಬೊಗಳೆ ಬಿಟ್ಟುಕೊಂಡು ಕೇಕೆ ಹಾಕಿದರೆ ಜನ ನಂಬುವುದಿಲ್ಲ, ಅವರಿಗೂ ಗರ್ಭಗುಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತು. ಸತ್ಯ ಸಾಯುವುದೂ ಇಲ್ಲ. ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ ಎಂದು ತಿಳಿಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಬಿಜೆಪಿ ಸರ್ಕಾರ  ಮೀಸಲಾತಿ ಸರ್ಕಸ್ ಬಗ್ಗೆ ಹೆಚ್.ಡಿಕೆ ಕಿಡಿ
Top Story

ಬಿಜೆಪಿ ಸರ್ಕಾರ ಮೀಸಲಾತಿ ಸರ್ಕಸ್ ಬಗ್ಗೆ ಹೆಚ್.ಡಿಕೆ ಕಿಡಿ

by ಪ್ರತಿಧ್ವನಿ
March 25, 2023
ಈ ದೇಶ ಯಾರೋ ಇಬ್ಬರಿಗೆ ಸೇರಿದ್ದಲ್ಲ ; ಎಲ್ಲರಿಗೂ ಸೇರಿದ್ದು : ರಾಹುಲ್‌ ಗಾಂಧಿ..! : This Country Does Not Belong to Any Two; Belongs to Everyone
Top Story

ಈ ದೇಶ ಯಾರೋ ಇಬ್ಬರಿಗೆ ಸೇರಿದ್ದಲ್ಲ ; ಎಲ್ಲರಿಗೂ ಸೇರಿದ್ದು : ರಾಹುಲ್‌ ಗಾಂಧಿ..! : This Country Does Not Belong to Any Two; Belongs to Everyone

by ಪ್ರತಿಧ್ವನಿ
March 20, 2023
ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ; ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು : ಸಿದ್ದರಾಮಯ್ಯ
Top Story

ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ; ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು : ಸಿದ್ದರಾಮಯ್ಯ

by ಪ್ರತಿಧ್ವನಿ
March 26, 2023
ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 3 | #PRATIDHVANI
ಕರ್ನಾಟಕ

ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 3 | #PRATIDHVANI

by ಪ್ರತಿಧ್ವನಿ
March 25, 2023
ಸಿ.ಟಿ ರವಿಗೆ ಮತ್ತೆ ಅವಮಾನ.. ಸಿದ್ದರಾಮಯ್ಯ ವಿರುದ್ಧ ಸೇಡಿಗೆ ಬಿದ್ದ ಬಿಜೆಪಿ..!
Top Story

ಸಿ.ಟಿ ರವಿಗೆ ಮತ್ತೆ ಅವಮಾನ.. ಸಿದ್ದರಾಮಯ್ಯ ವಿರುದ್ಧ ಸೇಡಿಗೆ ಬಿದ್ದ ಬಿಜೆಪಿ..!

by ಕೃಷ್ಣ ಮಣಿ
March 25, 2023
Next Post
D.K Shivakumar : ಏರ್‌ಪೋರ್ಟ್‌ಗೆ BSY ಹೆಸರು ಡಿಕೆಶಿ ರಿಯಾಕ್ಷನ್..! | #pratidhvaninews

D.K Shivakumar : ಏರ್‌ಪೋರ್ಟ್‌ಗೆ BSY ಹೆಸರು ಡಿಕೆಶಿ ರಿಯಾಕ್ಷನ್..! | #pratidhvaninews

ಬ್ರಾಹ್ಮಣ ಮುಖ್ಯಮಂತ್ರಿಯ ಕುರಿತು ಕುಮಾರಸ್ವಾಮಿ ಹುಟ್ಟುಹಾಕಿರುವ ಚರ್ಚೆ

ಬ್ರಾಹ್ಮಣ ಮುಖ್ಯಮಂತ್ರಿಯ ಕುರಿತು ಕುಮಾರಸ್ವಾಮಿ ಹುಟ್ಟುಹಾಕಿರುವ ಚರ್ಚೆ

ಸ್ವಾತಂತ್ರ್ಯದ ವಿಚಾರದಲ್ಲಿ ನಮಗಿರುವ ಹಕ್ಕು, ನೈತಿಕತೆ ಅವರಿಗಿಲ್ಲ : ಡಿ.ಕೆ.ಶಿವಕುಮಾರ್‌

ವಿಮಾನ ನಿಲ್ದಾಣಕ್ಕೆ ಯಾರ ಹೆಸರಾದರೂ ಇಡಲಿ, ಮೊದಲು ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲಿ: ಡಿ.ಕೆ. ಶಿವಕುಮಾರ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist