• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ಮೇಲೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ?: ಹೆಚ್‌ಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
October 19, 2021
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಮೇಲೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ?: ಹೆಚ್‌ಡಿಕೆ
Share on WhatsAppShare on FacebookShare on Telegram

ಸಿದ್ದರಾಮಯ್ಯ ಮೇಲೆ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗಲು ನನಗೇನು ಬೇರೆ ಕೆಲಸ ಇಲ್ಲವೇ? ಮುಸ್ಲಿಂ ಅಭ್ಯರ್ಥಿಗಳ ರಾಜಕೀಯ ವಿವಾದ ಶುರು ಮಾಡಿದ್ದು ಯಾರು? ಅವರೇ ಅಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ADVERTISEMENT

ಹಾನಗಲ್‌ ಮತ್ತು ಸಿಂಧಗಿಯಲ್ಲಿ ಜೆಡಿಎಸ್‌ ಪಕ್ಷ ಇಬ್ಬರು ಸುಶಿಕ್ಷಿತ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ. ಆದರೆ, ಜೆಡಿಎಸ್‌ ಸೆಕ್ಯುಲರ್‌ ಮತಗಳನ್ನು ವಿಭಜಿಸಿ ಬಿಜೆಪಿಗೆ ಗೆಲ್ಲಲು ಅವಕಾಶ ಮಾಡಿಕೊಡಲು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ ಎಂದು ಸಿದ್ದರಾಮಯ್ಯ ಮೊದಲು ಹುಯಿಲೆಬ್ಬಿಸಿದರು. ಅನಗತ್ಯ ವಿವಾದವನ್ನು ಸೃಷ್ಟಿಸಿ  ಗೊಂದಲ ಆರಂಭ ಮಾಡಿದ್ದಾರೆ. ಬಹುಶಃ ಅದಕ್ಕೆ ನಾನೇ ಅಂತ್ಯ ಹಾಡಬೇಕಾಗುತ್ತದೆ, ಅಂಥ ಸ್ಥಿತಿಗೆ ನನ್ನನ್ನು ದೂಡಿದ್ದಾರೆ ಎಂದು ಹೆಚ್‌ಡಿಕೆ  ಮಾರ್ಮಿಕವಾಗಿ ನುಡಿದಿದ್ದಾರೆ.

ಕಾಂಗ್ರೆಸ್‌ ಪಕ್ಷವೇ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಬಹುದಾಗಿತ್ತಲ್ಲವೇ? ಅದನ್ನು ಮಾಡದೇ ಜೆಡಿಎಸ್‌ ಟಿಕೆಟ್‌ ಕೊಟ್ಟಿತು ಎಂಧು ಕೊರಗುವುದು ಏಕೆ? ಸಿಂಧಗಿಯಲ್ಲಿ ನಮ್ಮ ಪಕ್ಷದ ನಿಷ್ಠಾವಂತರಿಗೆ ಟಿಕೆಟ್‌ ಕೊಟ್ಟಿದ್ದೇವೆ. ಪಕ್ಷದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ಮರಣ ಹೊಂದಿದ ನಾಯಕರ ಕುಟುಂಬದ ಹೆಣ್ಣು ಮಗಳು ನಾಜಿಯಾ ಶಕೀಲಾ ಅಂಗಡಿ ಅವರಿಗೆ ಟಿಕೆಟ್‌ ನೀಡಿದ್ದೇವೆ. ಇದರ ಬಗ್ಗೆ ಕಾಂಗ್ರೆಸ್‌ಗೆ ಸಂಕಟವೇಕೆ? ಕ್ಷೇತ್ರದಲ್ಲಿ ಪೈಪೋಟಿ ಇರುವುದು ಜೆಡಿಎಸ್-ಬಿಜೆಪಿ ನಡುವೆ ಮಾತ್ರ. ಯಾವ ಚುನಾವಣೆಯ್ಲಲೂ ಕಾಂಗ್ರೆಸ್‌ ಸಿಂಧಗಿಯಲ್ಲಿ ಎರಡನೇ ಸ್ಥಾನಕ್ಕೂ ಬಂದಿಲ್ಲ. ಹಾಗಿದ್ದ ಮೇಲೆ ಜೆಡಿಎಸ್‌ ವಿರುದ್ಧ ಅಪಪ್ರಚಾರ ಮಾಡುವುದೇಕೆ? ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.

ನಾನು ಯಾವುದೇ ಕಾರಣಕ್ಕೂ ಅವರ ತಂಟೆಗೆ ಹೋಗುವುದಿಲ್ಲ, ಅವರೇ ಪದೇಪದೆ ನಮ್ಮ ಸುದ್ದಿಗೆ ಬರುತ್ತಿದ್ದಾರೆ. ನಮಗೆ ಮಾಡಲು ಸಾಕಷ್ಟು ಕೆಲಸಗಳಿವೆ, ಹೇಳಲು ಅನೇಕ ವಿಚಾರಗಳಿವೆ. ಜನರ ಬಳಿ ಮತ ಕೇಳಲು ನಮ್ಮಲ್ಲಿ ಜನರಿಗಾಗಿ ಮಾಡಿದ ಸೇವೆ ಇದೆ. ಕಾಂಗ್ರೆಸ್‌ ಪಕ್ಷದ ಹೆಸರೇಳಿಕೊಂಡು ಮತ ಕೇಳಬೇಕಾದ ಕರ್ಮ ನಮಗಿಲ್ಲ. ಆದರೆ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಹೆಸರೇಳಿಕೊಂಡೇ ಮತಯಾಚನೆ ಮಾಡುತ್ತಿದ್ದಾರೆಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ನೀರಾವರಿ ಯೋಜನೆ ನಿಲ್ಲಿಸಿದ ಬಿಜೆಪಿ ಸರ್ಕಾರ:

ನಾಗಠಾಣ ಮತ್ತು ಇಂಡಿ ವಿಧಾನಸಭೆ ಕ್ಷೇತ್ರದ ಸುಮಾರು 28,000 ಹೆಕ್ಟೇರ್‌ ಭೂಮಿಗೆ ನೀರೊದಗಿಸುವ ಯೋಜನೆಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ರೇವಣಸಿದ್ದೇಶ್ವರ ವೃದ್ಧಿ ಯೋಜನೆ ಅಡಿಯಲ್ಲಿ ಬಜೆಟ್‌ ಮೂಲಕವೇ 250 ಕೋಟಿ ರೂ.ಗಳನ್ನು ಮೀಸಲಿರಿಸಿದ್ದೆ. ಆದರೆ, ಬಿಜೆಪಿ ಸರ್ಕಾರ ಅದಕ್ಕೆ ತಡೆಯೊಡ್ಡಿದೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

ಯೋಜನೆಗೆ ಬಿಜೆಪಿ ಸರ್ಕಾರ ತಡೆಯೊಡ್ಡಿದ್ದನ್ನು ಪ್ರತಿಭಟಿಸಿ ಆ ಭಾಗದ ರೈತರು ಕಳೆದ ೪೦ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಕೆಲ ದಿನದ ಹಿಂದೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್‌ ಡಿ ದೇವೇಗೌಡರು ಅಲ್ಲಿನ ರೈತರನ್ನು ಭೇಟಿಯಾಗಿ ಅವರ ಬೇಡಿಕೆಗೆ ದನಿಗೂಡಿಸಿದ್ದಾರೆ ಹಾಗೂ ನಿಮ್ಮ ಪ್ರತಿಭಟನೆಯನ್ನು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ಯೋಜನೆ ಕಾರ್ಯಗತ ಮಾಡುವ ನಿಟ್ಟಿನಲ್ಲಿ ನಿಮ್ಮ ಜತೆ ನಿಂತು ಹೋರಾಟ ನಡೆಸುವುದಾಗಿ ಭರವಸೆ ನೀಡಿದ್ದಾರೆ  ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೆ ಚುನಾವಣೆಯಲ್ಲಿ ಮಾತನಾಡಲು ವಿಷಯವೇ ಇಲ್ಲ. ನಮಗೆ ಅಂಥ ಕೊರತೆ ಇಲ್ಲ. ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ನಾನು ಮತ್ತು ನಮ್ಮ ತಂದೆಯವರು ಕೊಟ್ಟ ನೀರಾವರಿ ಯೋಜನೆಗಳು ಇನ್ನಿತರೆ ಕಾರ್ಯಕ್ರಮಗಳ ಮೂಲಕ ಜನರ ಮುಂದೆ ಹೋಗುತ್ತೇವೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.

Tags: BJPBy-electionCongress PartyCovid 19ElectionhanagalJDSJDS KarnatakaKarnatakaKarnataka By-electionsindhagiಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ- ಯಡಿಯೂರಪ್ಪ ಭೇಟಿ: ಎಚ್ಡಿಕೆ ಹೇಳಿಕೆಯ ಹಿಂದಿನ ಲಾಜಿಕ್ ಏನು?

Next Post

ಕೋವಿಡ್‌ ಮೂರನೇ ಅಲೆ ಆತಂಕ ಬೇಡ; ತಜ್ಞರ ಸಮಿತಿ ಅಭಯ

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ಕೋವಿಡ್ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದ ಆರೋಗ್ಯ ಇಲಾಖೆ

ಕೋವಿಡ್‌ ಮೂರನೇ ಅಲೆ ಆತಂಕ ಬೇಡ; ತಜ್ಞರ ಸಮಿತಿ ಅಭಯ

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada