ರಾಜ್ಯದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ (Rajeev gandhi housing scheme) ನಿವಾಸಗಳನ್ನು ಹಂಚಿಕೆ ಮಾಡುವಲ್ಲಿ ಅಕ್ರಮ, ಭ್ರಷ್ಟಾಚಾರ ನಡೆದಿದೆ ಎಂದು ಬಹಿರಂಗ ಆರೋಪ ಮಾಡಿ ಸಂಚಲನ ಸೃಷ್ಟಿಸಿದ್ದರು. ಇದು ಸರ್ಕಾರ ಮತ್ತು ಕಾಂಗ್ರೆಸ್ (Congress) ಪಕ್ಷವನ್ನು ಮುಜುಗರಕ್ಕೆ ಒಳಪಡಿಸಿತ್ತು.

ಹೀಗಾಗಿ ನಿನ್ನೆ ಆಳಂದ ಶಾಸಕ ಬಿ.ಆರ್ ಪಾಟೀಲ್ (BR patil) ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಶಾಸಕ ಬಿ. ಆರ್ ಪಾಟೀಲ್ ಹೇಳಿಕೆ ನೀಡಿದ್ದು,ನಾನು ಏನೆಲ್ಲ ಹೇಳಬೇಕಾಗಿತ್ತೋ ಹೇಳಿದ್ದೇನೆ.ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರಿಗೆ ಎಲ್ಲವನ್ನೂ ವಿವರವಾಗಿ ಹೇಳಿದ್ದೇನೆ ಎಂದಿದ್ದಾರೆ.

ನಮ್ಮ ಸಮಸ್ಯೆಗಳೇನಿತ್ತು, ಆ ಎಲ್ಲವನ್ನೂ ಅವರು ಸಮಾಧಾನದಿಂದ ಕೇಳಿದ್ದಾರೆ.ಹೀಗಾಗಿ ಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಅವರಿಗೆ ಬಿಟ್ಟದ್ದು, ಸಮಾಧಾನ ಅಸಮಾಧಾನ ನಂದೇನೂ ಇಲ್ಲ..ನಡೆದಿದ್ದನ್ನ ಅವರಿಗೆ ಹೇಳಿದ್ದೇವೆ,ಅವರು ಯೋಚನೆ ಮಾಡಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.