• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾನು ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ: ಸಿ.ಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
January 25, 2025
in Top Story, ಕರ್ನಾಟಕ, ರಾಜಕೀಯ, ಸಿನಿಮಾ
0
ನಾನು ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ: ಸಿ.ಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಡಾ.ರಾಜ್ ಅತ್ಯಂತ ಎತ್ತರದ ನಟ ಆಗಿದ್ದರೂ ಅವರ ವಿನಯ ಅದಕ್ಕಿಂತ ಎತ್ತರದಲ್ಲಿತ್ತು: ಸಿ.ಎಂ

ADVERTISEMENT

ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ: ಸಿ.ಎಂ ಭರವಸೆ

ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ: ಸಿ.ಎಂ ಘೋಷಣೆ


ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿ ಮಾತನಾಡಿದರು.

ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು.

ಕನ್ನಡ ಕೆಲಸಕ್ಕೆ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುವುದು ಎಂದರು.

ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೇ ಮಾದರಿ. ಡಾ.ರಾಜ್ ಕುಮಾರ್ ಅವರಿಗೆ ರಾಜ್ ಅವರೇ ಸಾಟಿ. ಇವರಿಗೆ ಸಾಟಿ ಆಗುವವರು ಯಾರೂ ಇನ್ನೂ ಬಂದಿಲ್ಲ ಎಂದರು.

ಡಾ.ರಾಜ್ ಅವರ ಗೋಕಾಕ್ ಚಳವಳಿಯಲ್ಲಿ ನಾನೂ ಅವರ ಭಾಷಣ ಕೇಳಲು ಹೋಗಿದ್ದೆ. ರಾಜ್ ಅವರಿಂದಾಗಿ ಕನ್ನಡ ಹೆಚ್ಚು ಶಕ್ತಿಯುತವಾಗಿ ಬೆಳೆಯಿತು ಎಂದರು‌.

ನಾನು ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದಾಗ ಸಾ.ರಾ.ಗೋವಿಂದು ಮತ್ತು ಹಿರಿಯ ಪತ್ರಕರ್ತ ವೆಂಕಟೇಶ್ ಅವರ ಪರಿಚಯ ಮೊದಲ ಬಾರಿ ಆಯಿತು. ಇವರ ಕನ್ನಡ ಪರ ಹೋರಾಟದ ಬಗ್ಗೆ ಆಗಲೇ ನನಗೆ ಅಭಿಮಾನ ಇತ್ತು. ನನಗೆ ಕನ್ನಡ ನಾಡು, ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ಇದನ್ನು ಗ್ರಹಿಸಿಯೇ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ನನ್ನನ್ನೇ ಕನ್ನಡ ಕಾವಲು ಸಮಿತಿಗೆ ಅಧ್ಯಕ್ಷನನ್ನಾಗಿಸಿದರು ಎಂದು ಸ್ಮರಿಸಿ, ಗೋವಿಂದು ಅವರ ಬದುಕು ಅವರ ಹೋರಾಟಗಳ ಕಾರಣದಿಂದಾಗಿ ಸಾರ್ಥಕವಾಗಿದೆ ಎಂದರು.

ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲಕ್ಕೂ ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ ಎಂದರು.

ಬೇರೆ ಧರ್ಮ ಮತ್ತು ಇತರೆ ಭಾಷೆಗಳ ಬಗ್ಗೆ ಸಹಿಷ್ಣತೆ ಇರಬೇಕು. ನಮ್ಮ ಭಾಷೆ ಬಗ್ಗೆ ಅಭಿಮಾನ ಹೆಚ್ಚಾಗಿರಬೇಕು. ತಾಯಿ ಭಾಷೆ, ತಾಯಿ ನೆಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.

ಸಾ.ರಾ.ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಕನ್ನಡ ಪರವಾದ ಹೋರಾಟಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದಾರೆ. ಇವರ ಹೋರಾಟದ ಫಲವಾಗಿ ಕನ್ನಡ ಚಿತ್ರರಂಗದ ಅಡಿಪಾಯ ಗಟ್ಟಿ ಆಯಿತು ಎಂದು ಶ್ಲಾಘಿಸಿದರು.

ಹಿರಿಯ ಸಾಹಿತಿ ಹಂಪನಾ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋ.ರು.ಚನ್ನಬಸಪ್ಪ, ನಾಡೋಜ ಬರಗೂರು ರಾಮಚಂದ್ರಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಹಿರಿಯ ಪತ್ರಕರ್ತರಾದ ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags: CM Siddaramaiahcm siddaramaiah newskannada latest newskannada livekannada live newskannada newskannada news channelkannada news livelatest kannada newslive kannada tvnews18 kannadanews1st kannadanewsfirst kannadanewsfirst kannada channelnewsfirst kannada livesiddaramaiahsiddaramaiah latest newssiddaramaiah muda scamsiddaramaiah newstop kannada newstv9 kannadatv9 kannada news
Previous Post

ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತದನಾ ಪ್ರತಿಜ್ಞಾ *ರಾಷ್ಟ್ರೀಯ ಮತದಾರರ ದಿನಾಚರಣೆ

Next Post

ಗಣತಂತ್ರದ ಆಶಯವೂ ಪ್ರಜಾತಂತ್ರದ ಅಡಿಪಾಯವೂ

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post
ಗಣತಂತ್ರದ ಆಶಯವೂ ಪ್ರಜಾತಂತ್ರದ ಅಡಿಪಾಯವೂ

ಗಣತಂತ್ರದ ಆಶಯವೂ ಪ್ರಜಾತಂತ್ರದ ಅಡಿಪಾಯವೂ

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada