ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಬೆಳಗ್ಗೆ 6:30ಕ್ಕೆ ನಿಧನರಾಗಿದ್ದು, ಪತ್ನಿ, ಓವ೯ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಹೃದಯ ಬೇನೆಯಿಂದ ಬಳಲಿ, ಚಿಕಿತ್ಸೆ ಪಡೆದಿದ್ದರು. ಇಂದು ಬೆಳಗ್ಗೆ ಮತ್ತೇ ಲಘು ಹೃದಯಾಘಾತವಗುತ್ತಲೇ ಆಸ್ಪತ್ರೆಗೆ ಕರೆದೊಯ್ದರು ಚಿಕತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ನಾಡಿನೆಲ್ಲೆಡೆ ಪ್ರವಚನ ನೀಡಿ ಭಾವೈಕ್ಯತೆ ಸಂದೇಶ ಸಾರುವ ಮೂಲಕ ಹೆಸರು ಇಬ್ರಾಹಿಂ ಸುತಾರ್ ವಾಸಿಯಾಗಿದ್ದರು. ಹಿಂದೂ ಮುಸ್ಲಿಂ ಭಾವೈಕ್ಯತೆ ಶ್ರೇಷ್ಠ ಪ್ರವಚಕ, ಸೂಫಿ ಸಂತರಾಗಿದ್ದ ಸುತಾರ್ ಅವರು ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.
ಇಬ್ರಾಹಿಂ ಸುತಾರ್ ಅವರ ಇಚ್ಚೆಯಂತೆ ಅವರ ತೋಟದಲ್ಲೇ ಅಂತ್ಯಕ್ರಿಯೆ ನಡೆಸಲು ನಿಧ೯ರಿಸಿದ್ದು ಅಂತ್ಯಕ್ರಿಯೆಗೂ ಮುನ್ನ ಸಾವ೯ಜನಿಕ ದರ್ಶನ ಕ್ಕೆ ಕುಟುಂಬ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.
ಇಂದು ಸಂಜೆ 5 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಸಕಲ ಸಕಾ೯ರಿ ಗೌರವದೊಂದಿಗೆ ಸುತಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ.