• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!

ಹಿಂದುಳಿದ ವ̧ರ್ಗ ದಲಿತರು, ಅಲ್ಪಸಂಖ್ಯಾತ, ರೈತರು, ಕಾರ್ಮಿಕ, ಮಹಿಳೆಯ̧ರ ಯುವಜನರ ಆಶೋತ್ತರಗಳನ್ನು ನಾನು ಅರ್ಥಮಾಡಿಕೊಂಡಿದ್ದೇನೆ : ಹರಿಪ್ರಸಾದ್.. 

ಪ್ರತಿಧ್ವನಿ by ಪ್ರತಿಧ್ವನಿ
June 4, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!
Share on WhatsAppShare on FacebookShare on Telegram

ಬೆಂಗಳೂರು : ಕಾಂಗ್ರೆಸ್ ನ ಕೇಂದ್ರ ನಾಯಕತ್ವದ ಈ ನಿರ್ಧಾರವು ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ. ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನವಾದ ಮತ್ತು ದುರ್ಬಲ ವರ್ಗಗಳ ಸಬಲೀಕರಣದ ಪರವಾಗಿ ನೀಡಿರುವ ಸ್ಪಷ್ಟ ಸಂದೇಶವಾಗಿದೆ ಅಂತ ನಾನು ಭಾವಿಸುತ್ತೇನೆ‌ ಎಂದು ನೂತನ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಪಕ್ಷದ ಹೈಕಮಾಂಡ್‌ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ADVERTISEMENT
C M DKShivakumar Political Life Story :ಬಂಡೆ ಹಾಗೆ ರೂಪತಾಳಿಲ್ಲ, ಕೈ ಕಟ್ಟಾಳು ನಡೆದು ಬಂದ ಹಾದಿ ಸುಲಭವಿರಲಿಲ್ಲ!

ದೀರ್ಘಕಾಲದಿಂದ ಪಕ್ಷದ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿರುವ ನಾನು ಯಾವುದೇ ಅಧಿಕಾರದ ಹುದ್ದೆಗಳಿಗಾಗಿ ರಾಜಕೀಯ ಮಾಡದೇ, ನನ್ನ ಜೀವನ ಪೂರ್ತಿ ಕಾಂಗ್ರೆಸ್ ತತ್ವಗಳ ಜಾರಿಗೆ  ಮೀಸಲಿಟ್ಟಿದ್ದೇನೆ. ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ ಎಂಬ ನಿಲುವಿನಂತೆ ನಾನು ರಾಜಕೀಯ ಬದುಕನ್ನು ಕಟ್ಟಿಕೊಂಡಿದ್ದೇನೆ. ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ಎಂಬ ಪಕ್ಷ ಕಟ್ಟುವ ಕಾಯಕವನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ದ್ವೇಷದ ರಾಜಕಾರಣ, ಧರ್ಮದ ಹೆಸರಿನ ಧ್ರುವೀಕರಣ ಮತ್ತು ಸಂವಿಧಾನ ವಿರೋಧಿ ಪ್ರವೃತ್ತಿಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಸಾಮಾಜಿಕ ಸಾಮರಸ್ಯ ಮತ್ತು ಜಾತ್ಯತೀತ ಮೌಲ್ಯಗಳನ್ನು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿರುವ ನನಗೆ,  ದೇಶದ ದುರಿತ ಕಾಲದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ನೇತೃತ್ವ ಸಿಕ್ಕಿರುವುದು ಹೊಸ ಜವಾಬ್ದಾರಿ, ಸವಾಲು ನೀಡಿದಂತಾಗಿದೆ‌. ಈ ಸವಾಲು ಮತ್ತು ಜವಾಬ್ದಾರಿಯನ್ನು ಪಕ್ಷದ ಸೈದ್ದಾಂತಿಕ ಕಾರ್ಯಕರ್ತರ ಬಲದಿಂದ ಯಶಸ್ವಿಯಾಗಿ ಪೂರೈಸುತ್ತೇನೆ ಎಂಬ ಅಚಲ ನಂಬಿಕೆ ನನಗಿದೆ‌ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮೊದಲ ಸಚಿವ ಸಂಪುಟದಲ್ಲೇ ದೊಡ್ಡ ಘೋಷಣೆಗಳ ಸುರಿಮಳೆ; ಡಿಕೆಶಿ ಸರ್ಕಾರದ ಹೊಸ ಅಜೆಂಡಾ

ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಜನರ ಆಶೋತ್ತರಗಳನ್ನು ನಾನು ಅರ್ಥಮಾಡಿಕೊಂಡಿದ್ದೇನೆ.  ಹಾಗಾಗಿ ಈ ನಿಟ್ಟಿನಲ್ಲೇ ನಾನು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬೂತ್ ಮಟ್ಟದಿಂದ ಸಂಘಟಿಸಿ, ಸೈದ್ಧಾಂತಿಕವಾಗಿ ಬಲಪಡಿಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ರಾಜ್ಯದಲ್ಲಿರುವ ಸಮರ್ಥ ಸೈದ್ದಾಂತಿಕ ನಾಯಕರು, ಕಾರ್ಯಕರ್ತರು ಈ ನಿಟ್ಟಿನಲ್ಲಿ ನನ್ನ ಕೈಜೋಡಿಸಲಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತುವವರು, ಕೋಮುವಾದದ ವಿರುದ್ಧ ಹೋರಾಡುವವರು, ಸಂವಿಧಾನವನ್ನು ರಕ್ಷಿಸುವ ಹೋರಾಟಗಾರರು ಮತ್ತು ಪ್ರಗತಿಪರ ಚಿಂತನೆ ಹೊಂದಿರುವ ಕೋಟ್ಯಾಂತರ ಕಾಂಗ್ರೆಸ್ಸೇತರ ಕಾರ್ಯಕರ್ತರೂ ನಮ್ಮ ದೇಶದ ಈ ದುರಿತ ಕಾಲದಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕಿದೆ ಎಂದು ಹರಿಪ್ರಸಾದ್‌ ಮನವಿ ಮಾಡಿದ್ದಾರೆ.

ಕಾಂಗ್ರೆಸ್ಸಿಗರಾದ ನಾವೂ ಕೂಡಾ ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಜಾತ್ಯಾತೀತ ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಹೋಗಬೇಕಿದೆ ಎಂಬ ಅರಿವು ನನಗಿದೆ. ಸಂವಿಧಾನವೇ ನಮ್ಮ ದಾರಿ, ಸಾಮಾಜಿಕ ನ್ಯಾಯವೇ ನಮ್ಮ ಗುರಿ ಎಂದು ಪ್ರತಿಪಾದಿಸಿದ್ದಾರೆ.

Eshwara Khandre : ಮಂತ್ರಿಗಿರಿ ಒಲಿದಕ್ಕಾಗಿ ಖಂಡ್ರೆ ಖುಷ್..! #dkshivakumar #siddaramaiah #pratidhvani

ಜಾತ್ಯತೀತತೆಯೇ ನಮ್ಮ ಶಕ್ತಿ ಎಂಬ ಕಾಂಗ್ರೆಸ್‌ನ ಮೂಲ ಸಂದೇಶವನ್ನು ಬಲಪಡಿಸುವ ಈ ನಿರ್ಧಾರದ ಜೊತೆ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು, ಜಾತ್ಯಾತೀತ ಯುವ ಸಮುದಾಯ, ಕಾಂಗ್ರೆಸ್ಸೇತರ ಜಾತ್ಯಾತೀತ ಪಕ್ಷ, ಸಂಘಟನೆಗಳು ನನ್ನ ಜೊತೆ ಕೈ ಜೋಡಿಸುತ್ತದೆ ಎಂಬ ಭರವಸೆಯಲ್ಲಿ ಎಐಸಿಸಿ ನೀಡಿದ ಜವಾಬ್ದಾರಿಯನ್ನು ಒಪ್ಪಿ ನಿರ್ವಹಿಸುತ್ತೇನೆ ಎಂದು ಬಿ.ಕೆ. ಹರಿಪ್ರಸಾದ್‌ ಪ್ರತಿಜ್ಞೆ ಮಾಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನನ್ನ ಮೇಲೆ ಪ್ರೀತಿ ವಿಶ್ವಾಸ ನಂಬಿಕೆ ಇರಿಸಿ ಜವಾಬ್ದಾರಿ ವಹಿಸಿದ ನನ್ನ ಅಚ್ಚುಮೆಚ್ಚಿನ ನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರಿಗೆ, ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ಅವರಿಗೆ ಹರಿಪ್ರಸಾದ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Tags: B K Hariprasadcongress highcommandcongress karnatakaideologyK C VenugopalKarnataka GovernmentKPCC presidentMallikarjun Khargepraiyanka gandhiPratidhvanirandeep singh surjewalasocial JusticeSonia Gandhi
Previous Post

ದಕ್ಷಿಣ ದೆಹಲಿ ಅಗ್ನಿದುರಂತ: 21 ಸಾವು; ಹೋಟೆಲ್ ಮಾಲೀಕನ ವಿರುದ್ಧ ಲುಕ್‌ಔಟ್ ನೋಟಿಸ್

Next Post

ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

Related Posts

ಜೈಲಿನಲ್ಲಿದ್ದ ದರ್ಶನ್  ವೈರಲ್ ವಿಡಿಯೋ ನೋಡಿ ಭಾವುಕರಾದ ಅಭಿಮಾನಿಗಳು!
Top Story

ಜೈಲಿನಲ್ಲಿದ್ದ ದರ್ಶನ್  ವೈರಲ್ ವಿಡಿಯೋ ನೋಡಿ ಭಾವುಕರಾದ ಅಭಿಮಾನಿಗಳು!

by ಪ್ರತಿಧ್ವನಿ
June 4, 2026
0

ನಟ ದರ್ಶನ್ ಜೈಲಿನಲ್ಲಿರುವ ನಡುವೆಯೂ ಅವರ ಅಭಿಮಾನಿಗಳ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. "ನಮ್ಮ ಬಾಸ್ ಎಲ್ಲಿದ್ದರೂ ಬಾಸೇ" ಎಂಬ ಅಭಿಯಾನದ ಮೂಲಕ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ತಾಯಿಯ ಆಶಯದಿಂದ ಮುಖ್ಯಮಂತ್ರಿ ಹುದ್ದೆಯವರೆಗೆ; ಡಿಕೆಶಿಯ ಭಾವನಾತ್ಮಕ ಕಥೆ ಇಲ್ಲಿದೆ

ತಾಯಿಯ ಆಶಯದಿಂದ ಮುಖ್ಯಮಂತ್ರಿ ಹುದ್ದೆಯವರೆಗೆ; ಡಿಕೆಶಿಯ ಭಾವನಾತ್ಮಕ ಕಥೆ ಇಲ್ಲಿದೆ

June 4, 2026
ವಂದೇ ಭಾರತ್ ಪ್ರಾಯೋಗಿಕ ಸಂಚಾರ ರದ್ದು; ಕಾರಣವೇನು ?

ವಂದೇ ಭಾರತ್ ಪ್ರಾಯೋಗಿಕ ಸಂಚಾರ ರದ್ದು; ಕಾರಣವೇನು ?

June 4, 2026
ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

June 4, 2026
ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

June 4, 2026
Next Post
ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada