• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಿದ್ದರೆ, ಅದು ದೇಶದ ಭದ್ರತೆಗೆ ಅಪಾಯಕಾರಿ – ಅಮಿತ್ ಶಾ

by
April 3, 2021
in Uncategorized
0
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗದಿದ್ದರೆ, ಅದು ದೇಶದ ಭದ್ರತೆಗೆ ಅಪಾಯಕಾರಿ – ಅಮಿತ್ ಶಾ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಂದಿನ ಹಂತಗಳಿಗಾಗಿ ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಈ ಬಾರಿ ಹೇಗಾದರೂ ಸರಿ, ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿಯಲೇ ಬೇಕು ಎಂಬ ಹಠದೊಂದಿಗೆ ಬಿಜೆಪಿ ತನ್ನ ಪಕ್ಷದ ಅತಿರಥ ಮಹಾರಥರನ್ನು ಪ್ರಚಾರದ ಕಣಕ್ಕಿಳಿಸಿದೆ. ಪ್ರತೀ ಪ್ರಚಾರದಲ್ಲಿಯೂ ಆಡಳಿತರೂಢ ತೃಣಮೂಲ ಕಾಂಗ್ರೆಸ್‌ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ದ ಟೀಕೆಗಳ ಸುರಿಮಳೆಗೈಯಲಾಗುತ್ತಿದೆ.

ADVERTISEMENT

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದೇ ಇದ್ದರೆ, ಅದು ರಾಷ್ಟ್ರೀಯ ಭದ್ರತೆಗೆ ಅಪಾಯ ತಂದೊಡ್ಡುತ್ತದೆ ಎಂದು ಹೇಳಿದ್ದಾರೆ.

“ಈಶಾನ್ಯ ರಾಜ್ಯಗಳಿಗೆ ಪಶ್ಚಿಮ ಬಂಗಾಳ ರಹದಾರಿಯಾಗಿದೆ. ಅಲ್ಲದೇ, ದೇಶದ ಗಡಿಗಳಿಗೆ ಈ ರಾಜ್ಯವು ಹೊಂದಿಕೊಂಡಿದೆ. ನಾವು ಅಲ್ಲಿ ಅಕ್ರಮ ಒಳನುಸುಳುವಿಕೆ ತಡೆಯುವ ಸರ್ಕಾರ ರಚನೆ ಮಾಡಿಲ್ಲವೆಂದರೆ, ದೇಶದ ಭದ್ರತೆಗೆ ಅಪಾಯವಾಗಲಿದೆ,” ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದ ಅಮಿತ್‌ ಶಾ ಅವರು, ಅಲ್ಲಿಯೂ ಅಕ್ರಮ ಒಳನುಸುಳುವಿಕೆಯನ್ನೇ ಪ್ರಮುಖ ವಿಚಾರವಾಗಿಟ್ಟುಕೊಂಡು ಬಿಜೆಪಿ ಪರ ಪ್ರಚಾರ ನಡೆಸಿದ್ದಾರೆ.

“ಪಶ್ಚಿಮ ಬಂಗಾಳದ ನಾಯಕರು ನಾಲ್ಕು ದಿನಗಳಿಗೊಮ್ಮೆ ನನ್ನ ಬಳಿ ಬಂದು ಹೇಳುತ್ತಾರೆ ಒಳನುಸುಳುವಿಕೆಯ ಕುರಿತು ಯೋಚನೆ ಮಾಡಿ ಎಂದು. ನೀವು ಅಕ್ರಮ ಒಳನುಸುಳುವಿಕೆಯಿಂದ ತೊಂದರೆಗೆ ಒಳಗಾಗಿದ್ದೀರೋ ಇಲ್ಲವೋ? ದೀದಿ ಸಿಎಂ ಆದರೆ, ಇದನ್ನು ನಿಲ್ಲಿಸುತ್ತಾರೆಯೇ? ಬಿಜೆಪಿಯಿಂದ ಮಾತ್ರ ಈ ಅಕ್ರಮ ಒಳನುಸುಳುವಿಕೆಯನ್ನು ತಡೆಯಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.

ಕೊಲ್ಕತ್ತಾ ಮತ್ತು ದೆಹಲಿಯ ನಡುವೆ ದೀದಿ ಯುದ್ದದ ಸನ್ನಿವೇಶ ಸೃಷ್ಟಿಸಿದ್ದಾರೆ. ಕೇಂದ್ರ ಸರ್ಕಾರ ಯಾವ ಯೋಜನೆಗಳನ್ನು ಬಿಡುಗಡೆ ಮಾಡಿದರೂ, ಅದು ಇಲ್ಲಿನ ಫಲಾನುಭವಿಗಳಿಗೆ ಸಿಗಲಿಲ್ಲ. ಏಕೆಂದರೆ, ಇಲ್ಲಿನ ರಾಜ್ಯ ಸರ್ಕಾರ ಅದರ ಕುರಿತಾಗಿ ಗಮನ ಹರಿಸಲಿಲ್ಲ, ಎಂದು ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಸರ್ಕಾರ ರೈತರಿಗೆ ರೂ. 6000 ನೀಡಿತ್ತು. ಆದರೆ, ಪಶ್ಚಿಮ ಬಂಗಾಳದ ಸರ್ಕಾರ ರೈತರ ಪಟ್ಟಿ ಕಳುಹಿಸದ ಕಾರಣ ಇಲ್ಲಿ ಯಾರಿಗೂ ಆ ಹಣ ಸಿಗಲಿಲ್ಲ. 60 ಕೋಟಿ ಬಡ ಕುಟುಂಬಗಳಿಗೆ 5 ಲಕ್ಷ ರೂ. ವರೆಗೆ ಆರೋಗ್ಯ ವಿಮೆಯನ್ನು ನೀಡಲು ಸರ್ಕಾರ ಯೋಜನೆ ಹಾಕಿಕೊಂಡಿತ್ತು. ಆದರೆ, ಅದನ್ನು ಪಶ್ಚಿಮ ಬಂಗಾಳದಲ್ಲಿ ಅನುಷ್ಟಾನ ಮಾಡಲು ಸಾಧ್ಯವಾಗಲಿಲ್ಲ. ಸರ್ಕಾರ ಆ ಯೋಜನೆಯನ್ನೇ ವಿರೋಧಿಸಿತ್ತು,” ಎಂದು ಮಮತಾ ಬ್ಯಾನರ್ಜಿ ವಿರುದ್ದ ಕಿಡಿ ಕಾರಿದ್ದಾರೆ.

Previous Post

ದೆಹಲಿ: ರೈತ ಆಂದೋಲನದ ವಿರುದ್ಧ ಇಷ್ಟೊಂದು ಸುಳ್ಳು ಸುದ್ದಿಗಳು ಹುಟ್ಟಿಕೊಂಡಿದ್ದೇಕೆ?

Next Post

ರೈತ ಹೋರಾಟ: ದೆಹಲಿಯಲ್ಲಿ ಜ. 31ರವರೆಗೆ ಇಂಟರ್ನೆಟ್ ಸೇವೆಗೆ ನಿರ್ಬಂಧ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ರೈತ ಹೋರಾಟ: ದೆಹಲಿಯಲ್ಲಿ ಜ. 31ರವರೆಗೆ ಇಂಟರ್ನೆಟ್ ಸೇವೆಗೆ ನಿರ್ಬಂಧ

ರೈತ ಹೋರಾಟ: ದೆಹಲಿಯಲ್ಲಿ ಜ. 31ರವರೆಗೆ ಇಂಟರ್ನೆಟ್ ಸೇವೆಗೆ ನಿರ್ಬಂಧ

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada