ಮೈಸೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವಂತೆ ಸಂಸದ ಪ್ರತಾಪ್ ಸಿಂಗ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ. ಕಾಂಗ್ರೆಸ್ ನವರು ಹೇಳಿದ್ದೇಲ್ಲ ಸತ್ಯ. ನೀವು ಸತ್ಯ ಸಂಧರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.
ನಮ್ಮ ಪಕ್ಷದಲ್ಲೇ ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರಾ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ. ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸವನ್ನ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿ
ಗ್ಯಾರಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ. ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಿ. ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ, ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ. ಆ ಒತ್ತಡವನ್ನು ಅವರೇ ನಿಭಾಯಿಸಿಕೊಂಡು ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ ಆಗ್ರಹಿಸಿದ್ದಾರೆ.