ಮಂಡ್ಯ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿ ಬಿಟ್ಟರೆ ನಾಲಿಗೆ ಕತ್ತರಿಸ್ತೇವೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿಗೆ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನ ಆಯ್ಕೆ ಮಾಡಿದ್ದಾರೆ. 5 ವರ್ಷ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕುಂಠಿತದ ಬಗ್ಗೆ ರಾಜ್ಯದ ಜನತೆಗೆ ಗೊತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಡಿಕೆ ಶಿವಕುಮಾರ್ ಸಿಎಂ ಆಗಿದ್ದಾರೆ. ಕೆಲವು ಕಿಡಿಗೇಡಿಗಳು ಯಾರನ್ನೋ ಮೆಚ್ಚಿಸಲು ನಮ್ಮ ನಾಯಕರ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಬಂದಿದೆ ಎಂದು ಹೇಳಿದ್ದಾರೆ. ಸಾವಿನ ಸಂದರ್ಭದಲ್ಲಿ ಮಾತ್ರ ಸೂತಕ ಬರುತ್ತದೆ. ಚೆಲುವರಾಯಸ್ವಾಮಿ ಯಾರ ಸಾವನ್ನು ಬಯಸ್ತಿದ್ದಾರೆ? ಚೆಲುವರಾಯಸ್ವಾಮಿ ಅವರೇ ನಮಗೆ ಶಾಸಕರು.
ಚಲುವರಾಯಸ್ವಾಮಿ ಗೆ ಯಾವ ರೀತಿ ಬುದ್ದಿ ಹೇಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : ನ್ಯಾಯವಾದಿ ಮೇಲೆ ಖಾಕಿ ದೌರ್ಜನ್ಯ : ಅಥಣಿ ಪಿಎಸ್ಐ ಸೇರಿ ಸಿಬ್ಬಂದಿ ವಿರುದ್ಧ ದೂರು ದಾಖಲು..
ದೇವೇಗೌಡ್ರು ಇತಿಹಾಸ ನಿಮಗೆ ಏನು ಗೊತ್ತು? ಎಸ್. ಎಂ. ಕೃಷ್ಣ ಅವರನ್ನು ಸಿಎಂ ಮಾಡಿದ್ದು ಯಾರು? ಈಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ದೇವೇಗೌಡರಿಗೆ ಹೊಟ್ಟೆ ಉರಿನಾ? ಜೆಡಿಎಸ್ ಜೊತೆ ಎನ್ಡಿಎ ಸರ್ಕಾರ ಇದೆ.
ಕಾಂಗ್ರೆಸ್ ಪಕ್ಷದಿಂದ ಯಾರೇ ಸಿಎಂ ಆದರೂ ನಾವು ವಿರೋಧ ಪಕ್ಷದ ಕೆಲಸವನ್ನೇ ಮಾಡುತ್ತೇವೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ಕನ್ನಡನಾಡಿನಲ್ಲಿ ಪ್ರಧಾನಿಯಾದ ಒಬ್ಬ ಕನ್ನಡಿಗ ದೇವೇಗೌಡರು, ಇಂತವರ ಕುಟುಂಬದ ಬಗ್ಗೆ ಕೇಡು ಬಯಸಿ ಕೇರಳಕ್ಕೆ ಮಾಟ-ಮಂತ್ರ ಮಾಡಿಸೋಕೆ ಹೋಗಿದ್ರಾ? ಚೆಲುವರಾಯಸ್ವಾಮಿ ಅಧಿಕಾರ -ಹಣ ಮದ, ದುರಹಂಕಾರದಿಂದ ಬಹಳ ತಪ್ಪು ಮಾಡುತ್ತಿದ್ದಾರೆ. ಅಧಿಕಾರ ಶಾಶ್ವತ ಅಲ್ಲ, ಚುನಾವಣೆಯಲ್ಲಿ ಜನರು ಬುದ್ದಿ ಕಲಿಸುತ್ತಾರೆ ಎಂದು ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.
ಚೆಲುವರಾಯಸ್ವಾಮಿ ದೇವೇಗೌಡರ ಬಗ್ಗೆ ಮಾತನಾಡಿ ದೊಡ್ಡ ಲೀಡರ್ ಆಗ್ತಿನಿ ಎನ್ನುವ ಭ್ರಮೆಯಲ್ಲಿದ್ದಾರೆ. ಇನ್ನು ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿ ಬಿಟ್ಟರೆ ನಾಲಿಗೆಯನ್ನು ಎಲ್ಲೆಲ್ಲಿ ಅಲ್ಲಲ್ಲಿ ಕತ್ತರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಿನ್ನ ಬಳಿ ಅಧಿಕಾರ ಇರಬಹುದು, ಆದರೆ ನಮ್ಮ ಹತ್ತಿರ ಜನಶಕ್ತಿ ಇದೆ. ಚೆಲುವರಾಯಸ್ವಾಮಿ ಗೆ ಯಾರ ಮನೆಯಲ್ಲಿ ಸಾಯ್ತಾರೆ ಎನ್ನುವ ಮುನ್ಸೂಚನೆ ಗೊತ್ತಾಗುತ್ತದೆ. ಇವರೆಲ್ಲ ಮಾಟ ಮಂತ್ರ ಮಾಡಿಸುವುದರಲ್ಲಿ ಎತ್ತಿದ ಕೈ. ಆದರೆ ನನ್ನ ಜೀವನದಲ್ಲಿ ಅಡ್ಜಸಟ್ಮೆಂಟ್ ರಾಜಕೀಯ ಇಲ್ಲ. ಕಾಂಗ್ರೆಸ್ ಸರ್ಕಾರ ಈ ರಾಜ್ಯದ ಲೂಟಿ ಮಾಡುತ್ತಿದೆ. ದೇವೇಗೌಡರ ಮನೆಗೆ ಏನೋ ಮಾಡಿಸಿದ್ದಾರೆ. ನನಗೂ ಮಾಟ ಮಂತ್ರ ಮಾಡಿಸಿದ್ದಾರೆ, ಆದರೆ ನಾನು ನಂಬಲ್ಲ. ಆದರೆ ನಾವು ನಮ್ಮ ಶತ್ರುಗಳಿಗೂ ಕೆಟ್ಟದ್ದನ್ನು ಬಯಸುವುದಿಲ್ಲ ಎಂದು ಸುರೇಶ್ ಗೌಡ ಚೆಲುವರಾಯಸ್ವಾಮಿ ವಿರುದ್ಧ ಗುಡುಗಿದ್ದಾರೆ.






