• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

ಪ್ರತಿಧ್ವನಿ by ಪ್ರತಿಧ್ವನಿ
May 9, 2026
in ಕ್ರೀಡೆ
0
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!
Share on WhatsAppShare on FacebookShare on Telegram

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬಳಿಕ ಇದೀಗ ಹೊಸ ರಾಜಕೀಯ ಚರ್ಚೆ ಶುರುವಾಗಿದೆ. ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಆ ಸಮಯದಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರೆ, ಇಂದು ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗುವ ಅವಕಾಶ ಪಡೆಯುತ್ತಿದ್ರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ADVERTISEMENT

 

ಪಶ್ಚಿಮ ಬಂಗಾಳದಲ್ಲಿ ಆಡಳಿತ ಹಿಡಿಯುವ ಉದ್ದೇಶದಿಂದ ಬಿಜೆಪಿ ಕಳೆದ ಕೆಲವು ವರ್ಷಗಳಿಂದಲೇ ಭಾರಿ ತಂತ್ರ ರೂಪಿಸಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯ ಚುನಾವಣೆಯ ಹೊಣೆ ಹೊತ್ತುಕೊಂಡು ನಿರಂತರ ಸಭೆಗಳು, ಪ್ರವಾಸಗಳು ಮತ್ತು ಸಂಘಟನಾ ಚಟುವಟಿಕೆಗಳನ್ನು ನಡೆಸಿದ್ದರು. ಇದೇ ಅವಧಿಯಲ್ಲಿ ಅಮಿತ್ ಶಾ ಕೋಲ್ಕತ್ತಾದಲ್ಲಿರುವ ಸೌರವ್ ಗಂಗೂಲಿ ನಿವಾಸಕ್ಕೆ ಭೇಟಿ ನೀಡಿದ್ದ ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು.

 

ಅಧಿಕೃತವಾಗಿ ಅದು ಸೌಹಾರ್ದಯುತ ಭೇಟಿ ಎಂದು ಹೇಳಲಾಗಿದ್ದರೂ, ರಾಜಕೀಯ ವಲಯದಲ್ಲಿ ಮಾತ್ರ ಬೇರೆ ರೀತಿಯ ಚರ್ಚೆ ನಡೆದಿತ್ತು. ಬಿಜೆಪಿ ನಾಯಕತ್ವ ಗಂಗೂಲಿಯನ್ನು ಪಕ್ಷಕ್ಕೆ ಕರೆತಂದು, ಮಮತಾ ಬ್ಯಾನರ್ಜಿ ವಿರುದ್ಧ ಸ್ವಚ್ಛ ಇಮೇಜ್ ಹೊಂದಿರುವ ಜನಪ್ರಿಯ ಬೆಂಗಾಲಿ ಮುಖವಾಗಿ ಪ್ರೋಜೆಕ್ಟ್ ಮಾಡಲು ಯತ್ನಿಸಿತ್ತು ಎನ್ನಲಾಗಿದೆ.ಕ್ರಿಕೆಟ್ ಕ್ಷೇತ್ರದಲ್ಲಿ ಅಪಾರ ಜನಬೆಂಬಲ ಹೊಂದಿರುವ ಗಂಗೂಲಿ ಯುವಕರು ಹಾಗೂ ಮಧ್ಯಮ ವರ್ಗದ ಮತದಾರರನ್ನು ಸೆಳೆಯಬಲ್ಲ ನಾಯಕ ಎಂದು ಬಿಜೆಪಿ ಅಂದಾಜಿಸಿತ್ತು.

 

ವಿಶೇಷವಾಗಿ ಬೆಂಗಾಲಿ ಅಸ್ಮಿತೆ, ಸ್ಥಳೀಯ ನಾಯಕತ್ವ ಮತ್ತು ರಾಷ್ಟ್ರೀಯ ರಾಜಕೀಯದ ಸಮನ್ವಯ ಸಾಧಿಸಲು ಗಂಗೂಲಿ ಸೂಕ್ತ ಆಯ್ಕೆ ಎಂದು ಪಕ್ಷದ ಒಳವಲಯದಲ್ಲಿ ಚರ್ಚೆಯಾಗಿತ್ತು ಎಂಬ ಮಾತುಗಳು ಕೇಳಿಬಂದಿದ್ದವು.ಆದರೆ ಆ ಸಂದರ್ಭದಲ್ಲಿ ಸೌರವ್ ಗಂಗೂಲಿ ರಾಜಕೀಯ ಪ್ರವೇಶದ ಬಗ್ಗೆ ಆಸಕ್ತಿ ತೋರಲಿಲ್ಲ ಎಂದು ಹೇಳಲಾಗುತ್ತಿದೆ. ರಾಜಕೀಯಕ್ಕಿಂತ ಕ್ರಿಕೆಟ್ ಆಡಳಿತ ಮತ್ತು ವೈಯಕ್ತಿಕ ಬದುಕಿನತ್ತ ಹೆಚ್ಚು ಗಮನಹರಿಸಲು ಅವರು ಮುಂದಾಗಿದ್ದರು ಎನ್ನಲಾಗಿದೆ.

 

ಇದೀಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ದೊಡ್ಡ ಮಟ್ಟದ ರಾಜಕೀಯ ಯಶಸ್ಸು ಸಾಧಿಸಿರುವ ಬೆನ್ನಲ್ಲೇ, “ಗಂಗೂಲಿ ಅಂದು ಬಿಜೆಪಿ ಸೇರಿದ್ದರೆ ಇಂದು ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಮುಖವಾಗುತ್ತಿದ್ರಾ?” ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ.ಇತ್ತ ಕೆಲ ರಾಜಕೀಯ ವಿಶ್ಲೇಷಕರು, ಗಂಗೂಲಿ ಅವರಂತಹ ಜನಪ್ರಿಯ ವ್ಯಕ್ತಿತ್ವ ಬಿಜೆಪಿ ಪರ ದೊಡ್ಡ ಮಟ್ಟದ ಪರಿಣಾಮ ಬೀರುವ ಸಾಧ್ಯತೆ ಇತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

 

ಮತ್ತೊಂದೆಡೆ, ರಾಜಕೀಯ ಮತ್ತು ಕ್ರಿಕೆಟ್ ಎರಡೂ ವಿಭಿನ್ನ ಕ್ಷೇತ್ರಗಳು. ಜನಪ್ರಿಯತೆ ಮಾತ್ರ ಸಾಕಾಗುವುದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ. ಸೌರವ್ ಗಂಗೂಲಿ ರಾಜಕೀಯಕ್ಕೆ ಬರದ ನಿರ್ಧಾರ ಸರಿಯಿತ್ತಾ ಅಥವಾ ಅವರು ಒಂದು ದೊಡ್ಡ ರಾಜಕೀಯ ಅವಕಾಶ ಮಿಸ್ ಮಾಡಿಕೊಂಡರಾ ಎಂಬ ಚರ್ಚೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Tags: #CMDiscussion#CricketLegend#Dada#GangulyFans#PoliticalSpeculation#PoliticsDebate#SouravGanguly#trendingnews#WestBengalPoliticsIndianCricket
Previous Post

“ವಿಜಯ್ ಗ್ಯಾರಂಟಿಗಳಿಗೆ ವರ್ಷಕ್ಕೆ 7 ಲಕ್ಷ ಕೋಟಿ ಬೇಕು!”: ನಟನ ರಾಜಕೀಯ ಭರವಸೆಗಳ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

Next Post

ಜನಮತ – ಆಯ್ಕೆ ಆದ್ಯತೆ ಮತ್ತು ಪರ್ಯಾಯ

Related Posts

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
ಕ್ರೀಡೆ

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

by ಪ್ರತಿಧ್ವನಿ
May 11, 2026
0

2026ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ವಿರುದ್ಧದ ಸೋಲಿನೊಂದಿಗೆ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ...

Read moreDetails
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇಸ್ ಬೆದರಿಕೆ: ವೈಭವ್ ಸೂರ್ಯವಂಶಿ ವಿಚಾರಕ್ಕೆ ಹೊಸ ತಿರುವು

May 2, 2026
Next Post
ಜನಮತ – ಆಯ್ಕೆ ಆದ್ಯತೆ ಮತ್ತು ಪರ್ಯಾಯ

ಜನಮತ – ಆಯ್ಕೆ ಆದ್ಯತೆ ಮತ್ತು ಪರ್ಯಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada