ಶಾಸಕರು, ಸಚಿವರು ಸದನಕ್ಕೆ ಗೌರವ ಬರುವಂತೆ ನಡೆದುಕೊಳ್ಳುವುದು ಬಿಟ್ಟು, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮಹಿಳೆಯರ ಬಗ್ಗೆ ಬಾಯಿಗೆ ಬಂದಾಗೆ ಮಾತಾಡಿ ಅಗೌರ ತೋರುತ್ತಿದ್ದಾರೆ. ‘ಒಂದು ವೇಳೆ ನಾನು ಸದನದಲ್ಲಿ ಇದ್ದಿದ್ದರೆ ಮೆಟ್ಟು ತಗೊಂಡು ಹೊಡೀತಿದ್ದೆ’ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ.

ಬುಧವಾರ ಬಳ್ಳಾರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ, ಸಚಿವರಾದವರು ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡುವುದು ಸರಿಯೇ? ಅಂಥ ಸಂದರ್ಭದಲ್ಲಿ ನಾನೇನಾದರೂ ಸದನದಲ್ಲಿ ಇದ್ದಿದ್ದರೆ ಪರಿಸ್ಥಿತಿಯೇ ಬೇರೆಯಾಗಿರುತ್ತಿತ್ತು. ಮಹಿಳೆಯರ ಬಗ್ಗೆ ಅಗೌರವವಾಗಿ ಮಾತನಾಡುವವರ ವಿರುದ್ಧ ಕ್ರಮವಾಗಬೇಕು. ಪ್ರತಿಪಕ್ಷದ ಸದಸ್ಯರು ಮೌನದಿಂದ ಹೊರ ಬರಬೇಕು. ಇಂತಹ ಹೇಳಿಕೆಗಳಿಗೆ ಆಸ್ಪದವಾಗದಂತೆ ಪ್ರತಿಭಟಿಸಬೇಕು ಎಂದಿದ್ದಾರೆ.