• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಮಲಾ ಹ್ಯಾರಿಸ್ US ಉಪಾಧ್ಯಕ್ಷೆ ಆಗಬಹುದಾದರೆ, ಸೋನಿಯಾ ಗಾಂಧಿ ಪ್ರಧಾನಮಂತ್ರಿ ಯಾಕಾಗಬಾರದು? ಕೇಂದ್ರ ಸಚಿವ ‌ಅಠಾವಳೆ

Any Mind by Any Mind
September 26, 2021
in ದೇಶ, ರಾಜಕೀಯ
0
ಕಮಲಾ ಹ್ಯಾರಿಸ್ US ಉಪಾಧ್ಯಕ್ಷೆ ಆಗಬಹುದಾದರೆ, ಸೋನಿಯಾ ಗಾಂಧಿ ಪ್ರಧಾನಮಂತ್ರಿ ಯಾಕಾಗಬಾರದು? ಕೇಂದ್ರ ಸಚಿವ ‌ಅಠಾವಳೆ
Share on WhatsAppShare on FacebookShare on Telegram

ಯುಪಿಎ ಮೊದಲ ಅವಧಿಗೆ ಅಧಿಕಾರಕ್ಕೆ ಬಂದಾಗ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi)  ಪ್ರಧಾನಮಂತ್ರಿ ಆಗಬೇಕಿತ್ತು ಎಂದು ಕೇಂದ್ರ ಸಚಿವ ರಾಮದಾಸ್‌ ಅಠಾವಳೆ ಹೇಳಿದ್ದಾರೆ.

ADVERTISEMENT

ಸೋನಿಯಾ ಗಾಂಧಿ ಭಾರತದ ಪ್ರಜೆ ಹಾಗೂ ಲೋಕಸಭಾ ಸದಸ್ಯಾರಾಗಿರುವಾಗ ಅವರ (ಸೋನಿಯಾ ಗಾಂಧಿಯ) ʼವಿದೇಶಿ ಮೂಲʼವನ್ನು ಉಲ್ಲೇಖಿಸಿ ಅವರಿಗೆ ಪ್ರಧಾನಮಂತ್ರಿ ಸ್ಥಾನವನ್ನು ನಿರಾಕರಿಸುವುದು “ಅರ್ಥಹೀನ” ಎಂದು ಅವರು ಹೇಳಿದ್ದಾರೆ.

ಶನಿವಾರ ಇಂದೋರ್‌ನಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ʼ2004 ರಲ್ಲಿ ಯುಪಿಎ ಬಹುಮತ ಗೆದ್ದಾಗ, ಸೋನಿಯಾ ಗಾಂಧಿ ಪ್ರಧಾನಿಯಾಗಲೆಂದು ನಾನು ಸಲಹೆ ನೀಡಿದ್ದೆ. ಅವರ ವಿದೇಶಿ ಮೂಲವನ್ನು ಉಲ್ಲೇಖಿಸಿ ಸ್ಥಾನ ನಿರಾಕರಿಸುವುದು ಅರ್ಥಹೀನ ಎಂದು ನಾನು ಭಾವಿಸಿದ್ದೆ. ಕಮಲಾ ಹ್ಯಾರಿಸ್‌ ಅಮೆರಿಕಾದ ಉಪಾಧ್ಯಕ್ಷೆ ಆಗಬಹುದಾದರೆ ಭಾರತದ ಪ್ರಜೆಯಾಗಿರುವ ಸೋನಿಯಾ ಗಾಂಧಿ ಯಾಕೆ ಭಾರತದ ಪ್ರಧಾನಿಯಾಗಬಾರದು? ಮಾಜಿ ಪ್ರಧಾನಮಂತ್ರಿ ರಾಜಿವ್‌ ಗಾಂಧಿ ಪತ್ನಿ ಹಾಗೂ ಲೋಕಸಭಾ ಸದಸ್ಯೆ ಸೋನಿಯಾ ಗಾಂಧಿ ಭಾರತದ ಪ್ರಧಾನಿ ಆಗಬಾರದೆಂದರೆ ಏನರ್ಥ? ಎಂದು ಮೋದಿ ಸಂಪುಟದ ಸಚಿವರು ಕೇಳಿದ್ದಾರೆ.  

ಅದಾಗ್ಯೂ, ಸೋನಿಯಾ ಗಾಂಧಿಯವರಿಗೆ ಪ್ರಧಾನಿ ಆಗುವ ಇಚ್ಛೆ ಇಲ್ಲದಿದ್ದರೆ, ಮನಮೋಹನ ಸಿಂಗ್‌ ಅವರ ಬದಲಾಗಿ ಹಿರಿಯ ರಾಜಕಾರಣಿ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಬೇಕಿತ್ತು ಎಂದು ಅವರು ಹೇಳಿದ್ದಾರೆ.

ಶರದ್‌ ಪವಾರ್‌ ಅವರನ್ನು ಸಾರ್ವಜನಿಕ ನಾಯಕ ಎಂದು ವಿಶೇಷಿಸಿದ ಅಠಾವಳೆ,  ಮನಮೋಹನ್‌ ಸಿಂಗ್‌ ಬದಲು ಪವಾರ್‌ ಪ್ರಧಾನ ಮಂತ್ರಿ ಹುದ್ದೆಗೆ ಸೂಕ್ತ ವ್ಯಕ್ತಿಯಾಗಿದ್ದರು ಎಂದು ಹೇಳಿದ್ದಾರೆ.

Sonia Gandhi should have been the PM when UPA came to power. If Kamala Harris can become US Vice President why can't Sonia Gandhi become PM, who is an Indian citizen, wife of former PM Rajiv Gandhi and member of Lok Sabha: Union Minister & RPI leader Ramdas Athawale (25.09) pic.twitter.com/BDOT7NcRf6

— ANI (@ANI) September 26, 2021

ವಿಶೇಷವೆಂದರೆ, 1999 ರಲ್ಲೇ ಸೋನಿಯಾ ಗಾಂಧಿ ಅವರ ವಿದೇಶಿ ಮೂಲವನ್ನು ಪ್ರಶ್ನಿಸಿದ್ದಕ್ಕೆ ಶರದ್‌ ಪವಾರ್‌ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು.  ಆ ಬಳಿಕ ಅವರು ತಮ್ಮದೆ ಸ್ವಂತ ಪಕ್ಷ ಎನ್‌ಸಿಪಿಯನ್ನು ಕಟ್ಟಿದ್ದರು. ಪ್ರಸ್ತುತ, ಎನ್‌ಸಿಪಿಯು ಮಹಾರಾಷ್ಟ್ರದಲ್ಲಿ ಶಿವಸೇನಾ ಹಾಗೂ ಕಾಂಗ್ರೆಸ್‌ ಪಕ್ಷದೊಂದಿಗೆ ಮೈತ್ರಿ ರಚಿಸಿಕೊಂಡು ಸರ್ಕಾರ ನಿರ್ಮಿಸಿದೆ.

2004 ರಲ್ಲಿ ಶರದ್‌ ಪವಾರ್‌ ಕಾಂಗ್ರೆಸ್‌ನಿಂದ ಪ್ರಧಾನಿಯಾಗಿದ್ದಿದ್ದರೆ ಕಾಂಗ್ರೆಸ್‌ನ ಇಂದಿನ ಪರಿಸ್ಥಿತಿಯೇ ಬೇರೆ ರೀತಿ ಇರುತ್ತಿತ್ತು. ಕಾಂಗ್ರೆಸ್‌ ಇಂದು ಇಷ್ಟು ಅನಿಶ್ಚಿತತೆಯಿಂದ ಇರಬೇಕಾದ ಪ್ರಮೇಯವೇ ಬರುತ್ತಿರಲಿಲ್ಲ. ಕಾಂಗ್ರೆಸ್‌ ಬಲ ಸಂವರ್ಧನೆ ಮಾಡಬಹುದಿತ್ತು ಎಂದು ಅಠಾವಳೆ ಹೇಳಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್‌ ಒಳ ಜಗಳದಿಂದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರುವ ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಅವರನ್ನು ಬಿಜೆಪಿ ಅಥವಾ ಎನ್‌ಡಿಎ ಜೊತೆ ಸೇರುವಂತೆ ಕರೆ ನೀಡಿರುವ ಅಠಾವಳೆ, ಸಿಂಗ್‌ ಗಾದ ಅಪಮಾನಕ್ಕೆ ಪ್ರತ್ಯುತ್ತರ ನೀಡುವಂತೆ ಕೇಳಿದ್ದಾರೆ.

ಒಂದು ವೇಳೆ ಅಮರಿಂದರ್‌ ಸಿಂಗ್‌ ಬಿಜೆಪಿ ಸೇರ್ಪಡೆಗೊಂಡರೆ ಮುಂದಿನ ಪಂಜಾಬ್‌ ವಿಧಾನ ಸಭೆಯಲ್ಲಿ ಬಿಜೆಪಿ ಶಕ್ತಿ ಪಡೆಯುತ್ತದೆ ಎಂದು ಅವರು ಇದೇ ಸಂಧರ್ಭದಲ್ಲಿ ಹೇಳಿದ್ದಾರೆ.

Tags: ManmohanNCP chief Sharad PawarRamdas AthawaleSonia GandhiUPA
Previous Post

ಹುಬ್ಬಳ್ಳಿಯ ಮಕ್ಕಳಲ್ಲಿ ತೀವ್ರವಾದ ವೈರಲ್ ಜ್ವರ – ವೈದ್ಯರಿಗೆ ಆತಂಕ!

Next Post

ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada