• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು.

ಪ್ರತಿಧ್ವನಿ by ಪ್ರತಿಧ್ವನಿ
October 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ನುಡಿ ಕುರುಬರನ್ನು ST ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ. ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಇದ್ದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು: ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದ ಸಿಎಂ

ADVERTISEMENT


ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು. ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ST ಗೆ ಸೇರಿಸಿದರು. ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದರು.

ಈಗ ಕುರುಬರನ್ನು ST ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಸ್ಪಷ್ಟಪಡಿಸಿದರು.

ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿಎಂ

ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸ್ಪಷ್ಟಪಡಿಸಿದರು.

ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ST ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಹೋಗಿದೆ. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದರು.‌

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠವಾದ ರಾಮಾಯಣ ಮಹಾ ಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ಸಮುದಾಯಕ್ಕೆ ಬೇಕಾದ ಹಕ್ಕು, ಅವಕಾಶಗಳನ್ನು ಸಂಘಟನೆ, ಹೋರಾಟದ ಮೂಲಕ ಪಡೆದುಕೊಳ್ಳುವುದು ತಪ್ಪಲ್ಲ. ಹೋರಾಟ ಮಾಡಲೇಬೇಕು.‌ ಇದನ್ನೇ ಅಂಬೇಡ್ಕರ್, ಬುದ್ದ, ಬಸವಣ್ಣ ಕೂಡ ಹೇಳಿದ್ದಾರೆ ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

Tags: 2025 valmiki jayantic m siddaramaiahvalmiki jayantiCM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dasaracm siddaramaiah latest newscm siddaramaiah livecm siddaramaiah newscm siddaramaiah patriotic momentcm siddaramaiah press meetcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah videocm yogi on valmiki jayantihappy valmiki jayantikarnataka cm siddaramaiahkarnataka next cm siddaramaiahmaharshi valmiki jayantiSiddaramaiah CMsiddaramaiah karnataka cmvalmiki jayanti 2022Valmiki Jayanti 2023valmiki jayanti 2024valmiki jayanti 2025valmiki jayanti devoteesvalmiki jayanti gathavalmiki jayanti historyvalmiki jayanti kathavalmiki jayanti reelsvalmiki jayanti shortsvalmiki jayanti specialvalmiki jayanti speechvalmiki jayanti statusvalmiki status jayantiwhy valmiki jayanti 2025
Previous Post

BY Vijayendra: ಭಾರತದ ಸಂಸ್ಕøತಿ, ಪರಂಪರೆಯನ್ನು ಜಗತ್ತಿಗೇ ಪರಿಚಯಿಸಿದ ಶ್ರೇóಷ್ಠ ಕವಿ: ವಿಜಯೇಂದ್ರ

Next Post

DCC ಬ್ಯಾಂಕ್ ನಿಂದ ದೂರವಿಡೋಕೆ ಅವನ್ಯಾವನೋ-ಕತ್ತಿ ಗುಡುಗು

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
Next Post

DCC ಬ್ಯಾಂಕ್ ನಿಂದ ದೂರವಿಡೋಕೆ ಅವನ್ಯಾವನೋ-ಕತ್ತಿ ಗುಡುಗು

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada