ಕೋಲಾರ :ಏ.೦೨: ರಾಜ್ಯ ರಾಜಕಾರಣದಲ್ಲಿ ಬಿಗ್ ರಾಜಕೀಯ ಸ್ಪೋಟಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ. ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ರಮೇಶ್ ಕುಮಾರ್ ರವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿಯೇ ಬೆಂಕಿ ಬಿದ್ದಂತಾಗಿದೆ. ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರನ್ನ ಮೂಲೆ ಗುಂಪು ಮಾಡಲು ನಡೆದಿದ್ಯಾ ಹುನ್ನಾರ? ಕಾಂಗ್ರೆಸ್ ಹೈಕಮಾಂಡ್ ಗೆ ಎಚ್ಚರಿಕೆ ಕೊಟ್ಟ ಸಿದ್ದರಾಮಯ್ಯ ಆಪ್ತ ಶಾಸಕ ರಮೇಶ್ ಕುಮಾರ್. ಸಿದ್ದರಾಮಯ್ಯರನ್ನ ಕಾಂಗ್ರೆಸ್ ಪಕ್ಷದಲ್ಲಿ ಮೂಲೆ ಗುಂಪು ಮಾಡಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಇರೋದಿಲ್ಲ.

ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ಮುನಿಸಿಕೊಂಡು ಪಕ್ಕಕ್ಕೆ ಹೋದರೆ, ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ಗೆ ಬಂದಿರುವ ಗತಿ ಕರ್ನಾಟಕದ ಕಾಂಗ್ರೆಸ್ ಗೆ ಬರುತ್ತದೆ. ಸಿದ್ದರಾಮಯ್ಯ ಕೋಲಾರಕ್ಕೆ ಬಾರದೆ ಹೋದರೆ ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಳುಗಿ ಹೋಗುತ್ತದೆ. ಮತ್ತೆ ಮತ್ತೆ ಕಸರತ್ತು ಮಾಡಿ ರಾಹುಲ್ ಗಾಂಧಿ ಮನಸ್ಸು ಪರಿವರ್ತನೆ ಮಾಡಿಸಿ, ಸಿದ್ದರಾಮಯ್ಯರನ್ನ ಕರ್ನಾಟಕದಲ್ಲಿ ಮತ್ತೆ ವಿರೋಧ ಪಕ್ಷದಲ್ಲಿ ಕೂರಿಸಬೇಕಾಗುತ್ತದೆ, ಕೋಲಾರದ ಶ್ರೀನಿವಾಸಪುರದಲ್ಲಿ ನಡೆದ ಕುರುಬರ ಸಂಘದ ಸಭೆಯಲ್ಲಿ ಶಾಸಕ ಕೆ.ಆರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.






