ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವನೆ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದ್ದು ಈ ಮಧ್ಯೆ ಅಭ್ಯರ್ಥಿಗಳ ರೇಸ್ನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಮುಖವಾಗಿ ಕೇಳಿ ಬರುತ್ತಿದೆ.
ಪಕ್ಷದ ಅದ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದರೆ ತಾವು ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುವುದಿಲ್ಲ ಎಂದು ಅವರ ಅತ್ಯಾಪ್ತ ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಇರುವುದರಿಂದ ಖರ್ಗೆ ಯಾವ ಕ್ಷಣದಲ್ಲಿ ಬೇಕಾದರೂ ತಮ್ಮ ಉಮೇದುವಾರಿಕೆ ಸಲ್ಲಿಸಬಹುದು ಎಂದು ಹೇಳಲಾಗುತ್ತಿದೆ.
ಗಾಂಧಿ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಖರ್ಗೆ ಹಾಗೂ ಸೋನಿಯಾ ನಡುವೆ ಈಗಾಗಲೇ ಎಒಂದು ಸುತ್ತಿನ ಮಾತುಕತೆ ನಡೆದಿದ್ದು ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದರಾಗಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಅಲ್ಲದೆ ವಿರೋಧ ಪಕ್ಷಗಳ ಜೊತೆ ಖರ್ಗೆ ಉತ್ತಮ ಭಾಂದವ್ಯ ಹೊಂದಿದ್ದು ಒಂದು ವೇಳೆ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದರೆ ಅದು ಉಪಯುಕ್ತವಾಗಲಿದೆ ಎಂದು ಹೆಸರೇಳಲು ಇಚ್ಚಿಸದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಕರ್ನಾಟಕ ಮಾತ್ರವಲ್ಲದೆ ಹೊರರಾಜ್ಯಗಳಲ್ಲು ಖರ್ಗೆ ತಮ್ಮದೇ ಆದ ಅಭಿಮಾನಿ ಬಳಗವನ್ನ ಹೊಂದಿದ್ದು ಅವರು ಎಂದಿನಂತೆ ತೀಕ್ಷ್ಣರಾಗಿದ್ದಾರೆ ಎಂದಿದ್ದಾರೆ.
ಇನ್ನೆರಡು ವರ್ಷಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ದೇಶಾದ್ಯಂತ ಪ್ರವಾಸ ಮಾಡಿ ಪಕ್ಷವನ್ನ ಮುನ್ನಡೆಸುವುದು ಅತಿ ದೊಡ್ಡ ಕೆಲಸ ಎಂದು ಖರ್ಗೆ ಪಕ್ಷದ ಆಂತರಿಕ ಸಭೆಯಲ್ಲಿ ಹೇಳಿದ್ದಾಗಿ ತಿಳಿದು ಬಂದಿದೆ.
ಪಕ್ಷದ ನಿರ್ಧಾರಕ್ಕೆ ಖರ್ಗೆ ಯಾವತ್ತು ಇಲ್ಲ ಎಂದು ಹೇಳಿಲ್ಲ ಪಕ್ಷ ಏನು ತೀರ್ಮಾಣ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಅವರು ಬದ್ದರಾಗಿರುತ್ತಾರೆ ಏಂದು ಹೇಳಲಾಗಿದೆ.