• Home
  • About Us
  • ಕರ್ನಾಟಕ
Friday, July 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವೀರಶೈವ ಲಿಂಗಾಯತ ಸಮುದಾಯ ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಖಚಿತ

ಪ್ರತಿಧ್ವನಿ by ಪ್ರತಿಧ್ವನಿ
July 24, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ವೀರಶೈವ ಲಿಂಗಾಯತ ಸಮುದಾಯ ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಖಚಿತ
Share on WhatsAppShare on FacebookShare on Telegram

ವೀರಶೈವ ಲಿಂಗಾಯತ ಸಮುದಾಯವು ಇದುವರೆಗೆ ಯಾಕೆ ಒಗ್ಗಟ್ಟಾಗಿಲ್ಲ . ಸಮಾಜದ ಸಂಘಟನೆಯಾಗದ ಭವಿಷ್ಯದಲ್ಲಿ ಆಪತ್ತು ಖಚಿತ
ಎಲ್ಲಾಒಗ್ಗಟ್ಟಿನ ಮಂತ್ರ ಜಪಿಸ ಬೇಕು ವೀರಶೈವ ಲಿಂಗಾಯತ ನಾಯಕರು ಜಾತಿಗಣತಿಗೆ ವಿರೋಧ
ಮಾಡಬೇಕು

ADVERTISEMENT

ಎಲ್ಲಾ ವೀರಶೈವ ಲಿಂಗಾಯಿತ ರಾಜಕಾರಣಿಗಳು, ಎಲ್ಲಾ ವೀರಶೈವ ಮುಖಂಡರುಗಳು ಎಲ್ಲಾ ಮಠ ಮಾನ್ಯಗಳು ಎಲ್ಲಾ ಒಳಪಂಗಡಗಳು ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ
ಹಾಗೂ ರಾಜಕೀಯವಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ

Siddaramaiah : ಕೆಜೆ ಜಾರ್ಜ್ ಅವರನ್ನು ಮನಸಾರೆ ಹೊಗಳಿದ ಸಿಎಂ ಸಿದ್ದರಾಮಯ್ಯ #pratidhvani

ಇಂದು ಧರ್ಮದ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಧರ್ಮೋ ರಕ್ಷಿತಿ ರಕ್ಷಿತಃ ಎಂಬಂತೆ ಧರ್ಮ ರಕ್ಷಿಸಿದರೆ ನಮ್ಮನ್ನು ರಕ್ಷಿಸುತ್ತದೆ. ಧರ್ಮದ ರಕ್ಷಣೆಗೆ ಹೋರಾಡಬೇಕಾಗಿ ಬಂದಿರುವುದು ವಿಪರ್ಯಾಸದ ಸಂಗತಿ. ಐತಿಹಾಸಿಕ, ಸಾಮಾಜಿಕ ಅನೇಕ ಸವಾಲುಗಳ ಜೊತೆಗೆ ರಾಜಕೀಯ ಸವಾಲು ಸಮಾಜಕ್ಕೆ ದೊಡ್ಡದಿದೆ. ರಾಜ್ಯ ಸರ್ಕಾರವು ವೀರಶೈವ ಲಿಂಗಾಯತರನ್ನು ಒಡೆಯಲು ನಡೆಸುತ್ತಿರುವ ತಂತ್ರ, ಕುತಂತ್ರ ತಿರಸ್ಕರಿಸಿ ನಡೆಯಬೇಕಿದೆ. ಜಾತಿಗಣತಿ ಈಗಾಗಲೇ ತಿರಸ್ಕರಿಸಲಾಗಿದೆ. ಅವೈಜ್ಞಾನಿಕ, ಅಪೂರ್ಣ ಅನೇಕ ಜಾತಿಗಳನ್ನು ಬೇರ್ಪಡಿಸಲಾಗಿದೆ. ಬೇರೆ ಜಾತಿ, ಧರ್ಮಗಳಿಗೆ ಅನ್ವಯವಾಗದ್ದು ವೀರಶೈವ ಲಿಂಗಾಯತ ಸಮಾಜಕ್ಕೆ ಮಾತ್ರ ಆಗಿದೆ. ಇಂಥದ್ದಕ್ಕೆ ತಕ್ಕ ಪ್ರತಿಕ್ರಿಯೆ ನೀಡೋಣ. ಭವಿಷ್ಯ ದೃಷ್ಟಿಯಿಂದ ನಾವೆಲ್ಲರೂ ಜಾಗೃತರಾಗರೋಣ .

ಮೀಸಲಾತಿ ಬಗ್ಗೆ ಈ ಸಮಾಗಮದಲ್ಲಿ ಸಮಗ್ರ ಚಿಂತನೆಯಾಗಲಿ. ಏಕರೂಪತೆ, ಸಂಘಟನೆ ಸೇರಿದಂತೆ ಸಮಾಜದ ಒಳಿತಿಗಾಗಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಿ. ಆಚಾರ, ವಿಚಾರ ವಿಷಯದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಸಮುದಾಯದ ಚೌಕಟ್ಟಿನಿಂದ ದೂರ ಸರಿಯದಂತೆ ನೋಡಿಕೊಳ್ಳಬೇಕು. ನಮ್ಮ ಆಚಾರ, ವಿಚಾರಗಳು ಹೆಮ್ಮೆ ಎಂಬ ನಿಟ್ಟಿನಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಮಠ, ಧಾರ್ಮಿಕತೆ ಯಾವುದೇ ಇರಲಿ ವ್ಯಾಪಕವಾಗಿ ನಡೆಯುವಂತಾಗಬೇಕು. ನಾವೆಲ್ಲರೂ ಒಂದಾಗಿದ್ದರೆ ಎಂಥ ಸವಾಲುಗಳನ್ನು ಬೇಕಾದರೂ ಎದುರಿಸಬಹುದು.


ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಹಿಯೂ ಒಗ್ಗಟ್ಟು ಪ್ರದರ್ಶಿಸಬೇಕಾಗಿದ್ದು, ಶಿವಶರಣರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಒಂದಾಗಿ ಮುನ್ನಡೆಯೋಣ
ಎಲ್ಲರನ್ನೂ ಸಮಾನವಾಗಿ ಕಾಣುವ ಧರ್ಮ ಇದ್ದರೆ ಅದು ವೀರಶೈವ ಲಿಂಗಾಯತ ಮಾತ್ರ. 2026ರಲ್ಲಿ ಜಾತಿಗಣತಿ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜಾತಿಗಣತಿ ನಡೆಸುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ, ರಾಜ್ಯ ಸರ್ಕಾರಕ್ಕಿಲ್ಲ. ಕೇಂದ್ರದ ಜಾತಿ ಗಣತಿ ಮಹತ್ವದ್ದು. ಈ ನಿಟ್ಟಿನಲ್ಲಿ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರಾಧ್ಯಕ್ಷರು, ಪದಾಧಿಕಾರಿಗಳು, ಪೀಠಾಧ್ಯಕ್ಷರು ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಿ. ಜಾತಿಗಣತಿಯಲ್ಲಿ ವೀರಶೈವ ಲಿಂಗಾಯತ ಸಮುದಾಯ ಎಂದು ನಮೂದು ಮಾಡಬೇಕು. ನೂರಾರು ಉಪಪಂಗಡಗಳಿಗೆ ಮೀಸಲಾತಿ, ಸೌಲಭ್ಯ ತೊಂದರೆ ಆಗದ ರೀತಿಯಲ್ಲಿ ಸಿಗುವಂತಾಗಬೇಕು. ಮಹಾಸಭಾ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು .

ಕಾನೂನು ವಿಚಾರ ತಿಳಿದುಕೊಂಡು ಮೀಸಲಾತಿ, ಜನಸಂಖ್ಯೆ, ಜಾತಿಗಣತಿ ಸೇರಿದಂತೆ ಬೇರೆ ಬೇರೆ ವಿಚಾರಗಳ ಕುರಿತಂತೆ ಸಮಗ್ರವಾಗಿ ಚರ್ಸಿಚಿ ನಿರ್ಧಾರಕ್ಕೆ ಬರುವಂತಾಗಬೇಕು. ವೀರಶೈವ ಲಿಂಗಾಯತ ಸಮಾಜ ಒಡೆಯುವ ಪ್ರಯತ್ನ ಈ ಹಿಂದೆ ನಡೆದಿತ್ತು. ವೀರಶೈವ, ಲಿಂಗಾಯತವೇ ಬೇರೆ ಬೇರೆ. ಹಾಗಾಗಿ ಪ್ರತ್ಯೇಕ ಧರ್ಮಕ್ಕೆ ಹೋರಾಟ ಶುರುವಾಗಿತ್ತು. ಆಗ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಪಂಚಪೀಠಾಧ್ಯಕ್ಷರು ಎರಡೂ ಬೇರೆ ಅಲ್ಲ. ಒಂದೇ ಎಂಬ ತತ್ವಕ್ಕೆ ಅಂಟಿಕೊಂಡಿದ್ದ ಪರಿಣಾಮ ಸಮಾಜ ಈಗಲೂ ಗಟ್ಟಿಯಾಗಿದೆ..

ಭಾರತೀಯ ಪರಂಪರೆಗೆ ಮಠ-ಮಾನ್ಯಗಳ ಕೊಡುಗೆ ಬಹುದೊಡ್ಡದು, ಅದರಲ್ಲೂ ಕರ್ನಾಟಕದ ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ವ್ಯವಸ್ಥೆಯಲ್ಲಿ ಬಹುದೊಡ್ಡ ಕ್ರಾಂತಿ ಮಾಡಿ ಶತ-ಶತಮಾನಗಳಿಂದಲೂ ಸಮಾಜದ ಕಣ್ಣಾಗಿ ಭಕ್ತರ ಪಾಲಿನ ಬೆಳಕಾಗಿ ಮಠಮಾನ್ಯಗಳು ಉತ್ತಮ ಸಮಾಜ ಕಟ್ಟಲು ಬಹುದೊಡ್ಡ ಸಮರ್ಪಣೆ ಮಾಡಿವೆ .

ಸಕಲ ಜೀವಾತ್ಮರಿಗೂ ಸದಾ ಒಳಿತನ್ನೇ ಬೋಧಿಸಿದ ಧರ್ಮ ವೀರಶೈವ ಲಿಂಗಾಯತ ಸಮಾಜ, ಅಂತರಂಗ ಮತ್ತು ಬಹಿರಂಗ ಶುದ್ಧಿಗೆ ಈ ಧರ್ಮ ಆದ್ಯತೆ ನೀಡಿದ್ದು ಶ್ರೀ ಜಗದ್ಗುರು ಪಂಚಾಚಾರ್ಯರ ತತ್ವಸಿದ್ಧಾಂತಗಳು, 12ನೇ ಶತಮಾನದ ಬಸವಾದಿ ಶರಣರ ಸಾಮಾಜಿಕ ಚಿಂತನೆಗಳು ಬದುಕಿ ಬಾಳುವ ಜನಾಂಗಕ್ಕೆ ಬೆಳಕಿನ ದಾರಿ ತೋರಿಸುತ್ತವೆ.

Adithya : ದರ್ಶನ್ ನಂಗೆ ಹೇಳದೆ ಮಾತು ಕೊಟ್ಟ ಅವತ್ತು..!  #pratidhvani

ಕ್ರಿಶ್ಚಿಯನ್ ಸೇರಿದಂತೆ ಬೇರೆ ಬೇರೆ ಧರ್ಮಗಳಲ್ಲಿ ತಾವು ದುಡಿದ ಹಣದಲ್ಲಿ ಶೇಕಡಾ 10ರಷ್ಟು ಹಣವನ್ನು ಸಮಾಜದ ಅಭಿವೃದ್ಧಿಗೆ ನೀಡುತ್ತಾರೆ. ಅದೇ ರೀತಿಯಲ್ಲಿ ವೀರಶೈವ ಲಿಂಗಾಯತ ಸಮಾಜದವರು ತಾವು ದುಡಿದ ಶೇಕಡಾ 2ರಷ್ಟನ್ನು ಸಮಾಜದ ಉದ್ಧಾರಕ್ಕೆ ನೀಡಿ

ಸಾಮಾಜಿಕ, ಧಾರ್ಮಿಕ ಪ್ರಜ್ಞೆ ಕಡಿಮೆಯಾಗುತ್ತಿದೆ. ಸಮಾಜದ ಕಳಕಳಿಯೂ ಹಾಗೆಯೇ ಇದೆ . ನಮ್ಮ ವೀರಶೈವ ಅಥವಾ ಲಿಂಗಾಯತ ಉಪಪಂಗಡಗಳ ಕುಟುಂಬವು ಪ್ರತಿ ವರ್ಷ ವಾರ್ಷಿಕ ಆದಾಯದ ಶೇಕಡಾ 2ರಷ್ಟು ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಮುಕ್ತ ಮನಸ್ಸಿನಿಂದ ನೀಡಿ. ಇಲ್ಲದಿದ್ದರೆ ಸಮಾಜದ ಅಭಿವೃದ್ಧಿ ಬಹಳ ಕಷ್ಟ ಆಗುತ್ತದೆ.

ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ. 2017ರಲ್ಲಿ ಒಕ್ಕೊರಲನಿಂದ ವೀರಶೈವ ಲಿಂಗಾಯತ ಮಹಾಸಭಾ ಒಪ್ಪಿದೆ. ಸೂರ್ಯ ಚಂದ್ರ ಇರುವವರೆಗೂ ಲಿಂಗಾಯತ ಮತ್ತು ವೀರಶೈವ ಒಂದೇ ಎಂದು ನಾವು ಒಪ್ಪುತ್ತೇವೆ, ಇದೇ ರೀತಿಯಲ್ಲಿ ನಡೆದುಕೊಂಡು ಹೋಗುತ್ತೇವೆ. ಇದರಲ್ಲಿ ಯಾವುದೇ ಸಂಶಯ ಬೇಡ. ರಾಜ್ಯ ಸರ್ಕಾರದ ಜಾತಿಗಣತಿಯು ಪುನರ್ ವಿಮರ್ಶೆಗೆ ಒಳಪಡುವ ಅವಶ್ಯಕತೆಯೇ ಇಲ್ಲ ಎಂದು ನನ್ನ ವಾದ

ಸಂವಿಧಾನದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರಿಗೆ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ಹಿಂದೂ ಸಮಾಜದವರು ಮತ್ತು ಕನ್ನಡ ಭಾಷಿಕರು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ರಿಯಾಯಿತಿ ಇಲ್ಲ. ಅಲ್ಪಸಂಖ್ಯಾತರ ಧಾರ್ಮಿಕ, ಖರ್ಚು ವೆಚ್ಚ ಒಂದೇ ಇರುತ್ತದೆ. ಆದ್ದರಿಂದ ಭಾಷಾ, ಧಾರ್ಮಿಕ ಒಳಗೊಂಡ ಶಿಕ್ಷಣ ಸಂಸ್ಥೆಗಳಿಗೆ ಬೇಧ ಭಾವ ಮಾಡದೇ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಏಕರೂಪದ ರಿಯಾಯಿತಿ ನೀಡುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗಮನಕ್ಕೆ ಸಮಾಜದ ಸಂಸದರು ಮನವರಿಕೆ ಮಾಡಿಕೊಡಬೇಕು

ನಾವೆಲ್ಲಾ ಶಿವನ ಆರಾಧಕರು. ಶಿವನ ಭಕ್ತರು. ಪಂಚಪೀಠಾಧ್ಯಕ್ಷರು ನಾಡಿಗೆ ಆಗಮಿಸಿ ಪಾವನಗೊಳಿಸುತ್ತಾರೆ. ಸಾಂಘಿಕ ಪರಿಕಲ್ಪನೆ, ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರುವ ಪಟ್ಟಭದ್ರಾ ಹಿತಾಸಕ್ತಿಗಳು ಒಡೆದಾಳಲು ಹೊರಟಿವೆ. ನಾವೆಲ್ಲರೂ ವೀರಶೈವ ಲಿಂಗಾಯತರು ಎಂದು ಎದೆತಟ್ಟಿಕೊಳ್ಳುವುದಷ್ಟೇ ಅಲ್ಲ. ನುಡಿದಂತೆ ನಡೆಯುವಂತರಾಗಬೇಕು. ಹೋಗಬಾರದಂತಾಗಬಾರದು. ಜಾತಿಗಣತಿ, ಮೀಸಲಾತಿ ಸೇರಿದಂತೆ ಅನೇಕ ವಿಚಾರಗಳ ಗೊಂದಲ ಕರ್ನಾಟಕದಲ್ಲಿ ಆಗುತ್ತಿದೆ. ಭಾರತ ದೇಶದ ಮೂಲೆ ಮೂಲೆಯಲ್ಲಿ ವೀರಶೈವರು, ಲಿಂಗಾಯತರಿದ್ದಾರೆ. ಒಂದೇ ವೇದಿಕೆಯಲ್ಲಿ ತರುವ ಕೆಲಸ ಆಗಬೇಕು. ಗೊಂದಲ ಕಾರಣಕ್ಕೆ ಒಳಪಂಗಡಗಳಾಗಿವೆ. ಕಾಯಕದ ನಂತರ ಒಂದಾಗುವಂಥ ಕೆಲಸ ಆಗಬೇಕು

ವೀರಶೈವ ಲಿಂಗಾಯತ ನಾಯಕರು,ವೀರಶೈವ ಲಿಂಗಾಯತ ಮಹಾಸಭಾ,ವೀರಶೈವ ಲಿಂಗಾಯತ ಸಂಕಲ್ಪ,ವೀರಶೈವ ಲಿಂಗಾಯತರ ಒಗ್ಗಟ್ಟಿನ ಮಂತ್ರ ಮಾಡಬೇಕು

ಒಟ್ಟಾಗಿ ನಿಂತು ಗಟ್ಟಿಯಾಗಿ ‘ವೀರಶೈವ ಲಿಂಗಾಯತ’ ಅಸ್ಮಿತೆ ಪ್ರತಿಪಾದಿಸಬೇಕಿದೆ:

ಒಗ್ಗಟ್ಟಿನ ಮಂತ್ರ ಜಪಿಸಬೆಕು ವೀರಶೈವ ಲಿಂಗಾಯತ ನಾಯಕರು: ಜಾತಿಗಣತಿಗೆ ವಿರೋಧ ಮಾಡುತ್ತಿರುವುದು ಒಳ್ಳೆಯದೆ

ಒಟ್ಟಾಗಿ ನಿಂತು ಗಟ್ಟಿಯಾಗಿ ‘ವೀರಶೈವ ಲಿಂಗಾಯತ’ ಅಸ್ಮಿತೆ ಪ್ರತಿಪಾದಿಸಬೇಕಿದೆ

ನವೀನ ಹೆಚ್ ಎ
ಹನುಮನಹಳ್ಳಿ ಕೆ ಆರ್ ನಗರ
ಅಂಕಣಕಾರ

Tags: 5 years cm siddaramaiahCM Siddaramaiahcm siddaramaiah newscm siddaramaiah press meetcm siddaramaiah speechcm siddaramaiah today newscm siddaramaiah'skarnataka cm siddaramaiahNew CM Siddaramaiahsiddaramaiahsiddaramaiah aboutsiddaramaiah castSiddaramaiah CMsiddaramaiah congresssiddaramaiah interviewsiddaramaiah karnataka cmsiddaramaiah newssiddaramaiah on cm chairsiddaramaiah press meetsiddaramaiah slap rowYathindra Siddaramaiah
Previous Post

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

DCM DK: ಮಹಾದಾಯಿ ವಿಚಾರವಾಗಿ ರಾಜ್ಯದ ಗೌರವ ಉಳಿಸಲು ಎಲ್ಲಾ ಸಂಸದರು ಒಟ್ಟಾಗಿ ಹೋರಾಡಬೇಕು..

Related Posts

ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ
ಕರ್ನಾಟಕ

ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

by ಪ್ರತಿಧ್ವನಿ
July 25, 2025
0

ಸರ್ವಜ್ಞನಗರ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ: ಅಧಿಕಾರಿಗಳೊಂದಿಗೆ ಸಭೆ-* ಕ್ಷೇತ್ರದಲ್ಲಿ ಎಲ್ಲಾ ಸಮುದಾಯಗಳಿಗೂ ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದಾಗಿ ಭರವಸೆ* ಬೆಂಗಳೂರು, ಜು. 25: ಇಂಧನ...

Read moreDetails

DK Suresh: ರಾಷ್ಟ್ರೀಯ ಜಲ ನೀತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಆದ್ಯತೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

July 25, 2025

ಕೆಕೆಆರ್‌ಡಿಬಿ 2025- 26 ನೇ ಸಾಲಿನ 5 ಸಾವಿರ ಕೋಟಿ ರು ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ

July 25, 2025

Shivaganga: ಹಾಡುಗಳ ಮೂಲಕ ಜನಮನ ಸೆಳೆಯುತ್ತಿದೆ “ಶಿವಗಂಗ” .

July 25, 2025

ಸದ್ಯದಲ್ಲೇ ಬಿಡುಗಡೆಯಾಗಲಿದೆ “ಕಾದಲ್ ಚಿತ್ರದ ಮೊದಲ ಹಾಡು .

July 25, 2025
Next Post

DCM DK: ಮಹಾದಾಯಿ ವಿಚಾರವಾಗಿ ರಾಜ್ಯದ ಗೌರವ ಉಳಿಸಲು ಎಲ್ಲಾ ಸಂಸದರು ಒಟ್ಟಾಗಿ ಹೋರಾಡಬೇಕು..

Recent News

Top Story

DK Suresh: ರಾಷ್ಟ್ರೀಯ ಜಲ ನೀತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಆದ್ಯತೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

by ಪ್ರತಿಧ್ವನಿ
July 25, 2025
Top Story

ಕೆಕೆಆರ್‌ಡಿಬಿ 2025- 26 ನೇ ಸಾಲಿನ 5 ಸಾವಿರ ಕೋಟಿ ರು ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ

by ಪ್ರತಿಧ್ವನಿ
July 25, 2025
Top Story

Shivaganga: ಹಾಡುಗಳ ಮೂಲಕ ಜನಮನ ಸೆಳೆಯುತ್ತಿದೆ “ಶಿವಗಂಗ” .

by ಪ್ರತಿಧ್ವನಿ
July 25, 2025
Top Story

ಸದ್ಯದಲ್ಲೇ ಬಿಡುಗಡೆಯಾಗಲಿದೆ “ಕಾದಲ್ ಚಿತ್ರದ ಮೊದಲ ಹಾಡು .

by ಪ್ರತಿಧ್ವನಿ
July 25, 2025
SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?
Top Story

SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

by Chetan
July 25, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

July 25, 2025

DK Suresh: ರಾಷ್ಟ್ರೀಯ ಜಲ ನೀತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಆದ್ಯತೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

July 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada