• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲಲಿದೆ ಎಂದು ಹೇಳಿದರೆ ಬಿಜೆಪಿಯವರು ಈಗಲೇ 20 ಚೆಕ್ ಬರೆದಿಡ್ತಾರೆ: ಮಧು ಬಂಗಾರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
March 2, 2023
in ರಾಜಕೀಯ
0
ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲಲಿದೆ ಎಂದು ಹೇಳಿದರೆ ಬಿಜೆಪಿಯವರು ಈಗಲೇ 20 ಚೆಕ್ ಬರೆದಿಡ್ತಾರೆ: ಮಧು ಬಂಗಾರಪ್ಪ
Share on WhatsAppShare on FacebookShare on Telegram

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸುಲಭವಾಗಿ ಅಧಿಕಾರಕ್ಕೆ ಬರಲಿದೆ. ಎಷ್ಟು ಸೀಟ್ ಗೇಲ್ತೇವೆ ಎಂದು ನಾನು ಹೇಳಲ್ಲ. ಈಗ ಹೇಳಿದರೆ ಬಿಜೆಪಿಯವರು 20 ಚೆಕ್ ಈಗಲೇ ಬರೆದಿಡ್ತಾರೆ  ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ವ್ಯಂಗ್ಯವಾಡಿದರು.

ADVERTISEMENT

ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಇಲ್ಲವಾಗಿದೆ. ಸೊರಬದಲ್ಲಂತೂ ಸ್ಮಶಾನ ಸೇರಿದೆ. ಸೊರಬದಲ್ಲಿ ಕಾಂಗ್ರೆಸ್ ಪರ ವಾತವರಣ ತುಂಬಾ ಚೆನ್ನಾಗಿದೆ. ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಪಕ್ಷದ ಕೊಡುಗೆಯನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡ್ತಾ ಇದ್ದೇವೆ. ರಾಜ್ಯದ ದಿಕ್ಕು ಬದಲಿಸುವ ಹಕ್ಕು ಜನರಿಗಿದೆ. ಜನ ಬದಲಾವಣೆ ಬಯಸುತ್ತಿದ್ದಾರೆ. ಪಕ್ಷ ಹಲವು ಜವಾಬ್ದಾರಿ ನೀಡಿದ್ದು, ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಮಾಡ್ತಿದ್ದೇನೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ ಜನರ ತೆರಿಗೆ ದುಡ್ಡಲ್ಲಿ ಏರ್ಫೊರ್ಟ್ ಕಟ್ಟಿದ್ದಾರೆ. ಪ್ರಧಾನಿಯವರೇ ಬಂದು ಉದ್ಘಾಟಿಸಿದ್ದು, ಸ್ವಾಗತ ಮಾಡ್ತೇನೆ. ಕೆಲವೇ ವರ್ಷದಲ್ಲಿ ಏರ್ಪೋರ್ಟ್ ಅನ್ನು ಅದಾನಿಗೆ ಪ್ರಧಾನಿಯವರು ಕೊಟ್ಟರು ಕೊಡಬಹುದು ಎಂದ ಅವರು, ವಿಮಾನ ನಿಲ್ದಾಣಕ್ಕೆ ಜಾಗ ಕೊಟ್ಟ ರೈತರಿಗೆ ಇನ್ನೂ ಪರಿಹಾರ ಕೊಟ್ಟಿಲ್ಲ ಎಂದು ಕಿಡಿಕಾರಿದರು.

ಪ್ರಧಾನಿ ನರೇಂದ್ರ ಮೋದಿ ಶರಾವತಿ ಮುಳುಗಡೆ ಸಂತ್ರಸ್ತರ ವಿಚಾರ ಪ್ರಸ್ತಾಪಿಸಲಿಲ್ಲ. ಶರಾವತಿ ಸಂತ್ರಸ್ತರ ತ್ಯಾಗದ ಕರೆಂಟ್ ಬಳಸಿ, ಮೈಕ್’ನಲ್ಲಿ ಮಾತನಾಡಿ, ಚಕಾರ ಎತ್ತಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಸಮಸ್ಯೆ ಬಗೆಹರಿಸುವ ವಾಗ್ದಾನ ಮಾಡಿದ್ದಾರೆ. ಈ ಹಿಂದೆ ಕಾಗೋಡು ತಿಮ್ಮಪ್ಪ ಆ ಪ್ರಯತ್ನ ಮಾಡಿದ್ದರು. ಮುಂದೆ ನಾವು ಬಗೆಹರಿಸುತ್ತೇವೆ ಎಂದರು.

ಜಾತಿ, ಧರ್ಮ, ಸಾವಿನಲ್ಲಿ ರಾಜಕೀಯ ಮಾಡ್ತಾರೆ

ಬಿಜೆಪಿ ಕಾರ್ಯಕರ್ತ ಮಲ್ಲಿಕಾರ್ಜುನ್ ಅಸುನೀಗಿದ್ದು, ಏರ್ಫೊರ್ಟ್ ಕಾರ್ಯಕ್ರಮದಲ್ಲಿ ಅವರಿಗೆ ಪರಿಹಾರ ನೀಡಲಿಲ್ಲ. ಕೊನೆಪಕ್ಷ ಸಾಂತ್ವಾನ ಹೇಳಿಲ್ಲ. ಜಾತಿ, ಧರ್ಮ, ಸಾವು ಹಾಗೂ ಪರ್ಸೆಂಟೇಜ್ ವಿಚಾರದಲ್ಲಿ ರಾಜಕೀಯ ಮಾಡ್ತಾರೆ ಎಂದು ಕಿಡಿಕಾರಿದರು.

ಶಿವಮೊಗ್ಗ- ಶಿಕಾರಿಪುರ- ರಾಣೆಬೇನ್ನೂರು ರೈಲ್ವೆ ಯೋಜನೆ ಮಾಡ್ತಿದ್ದಾರೆ. ರೈತರ ಜಮೀನಿನಲ್ಲಿ ಕೆಲಸ ಮಾಡುವ ಮುನ್ನ ಅವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ವಿಐಎಸ್’ಎಲ್ ಎಂಪಿಎಂ ಎರಡು ಕಣ್ಣುಗಳಂತಿವೆ

ವಿಐಎಸ್ಎಲ್ ಜಿಲ್ಲೆಗೆ ಒಂದು ಕಿರೀಟದ ರೀತಿ ಇತ್ತು. ಅದಕ್ಕೂ ಕೊನೆ ಮೊಳೆ ಹೊಡೆದಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ನಾಯಕರು. ಕಾರ್ಖಾನೆ ಭೂಮಿ ಮಾರಾಟಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. ವಿಐಎಸ್’ಎಲ್ ಮತ್ತು ಎಂಪಿಎಂ ಎರಡು ಕಣ್ಣುಗಳಂತೆ ಇವೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗಣಿಯನ್ನು ನೀಡಲಾಗಿತ್ತು.. ಅದರೇ, ಇವರು ಏನು ಮಾಡಲಿಲ್ಲ ಎಂದು ಕಿಡಿ ಕಾರಿದರು.

ಮಾ.4ರಿಂದ ಅಭಿಯಾನ ಆರಂಭ

ಕಾಂಗ್ರೆಸ್ ಪಕ್ಷದಿಂದ ಮನೆ ಮನೆಗೆ ಹೋಗಿ ಹೊಸ ಘೋಷಣೆಗಳ ಬಗ್ಗೆ ಮಾಹಿತಿ‌ ನೀಡುತ್ತಿದ್ದೇವೆ. ಮಾರ್ಚ್ 4 ರಿಂದಲೇ ಈ ಅಭಿಯಾನ ಆರಂಭವಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ 2000 ರೂ., 10 ಕೆ.ಜಿ ಅಕ್ಕಿ ವಿತರಣೆ ಯೋಜನೆ ಜಾರಿಗೆ ತರುತ್ತೇವೆ ಎಂದು ತಿಳಿಸಿದರು.

Tags: Congress PartyMadhu BangarappaShivamoggaಬಿಜೆಪಿ
Previous Post

ಕನ್ನಡಿಗರ ಪಾಲಿಕೆ ಬಕಾಸುರರಾದ 40% ಸರ್ಕಾರ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ  ವಾಗ್ದಾಳಿ

Next Post

ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧು ಕೋಕಿಲ ನೇಮಕ: ಡಿಕೆಶಿ ಅಭಿನಂದನೆ

Related Posts

ಮೌನ ಮುರಿದ ಡಿಕೆ ಶಿವಕುಮಾರ್; ಸಿಎಂ ರಾಜೀನಾಮೆ ಬಳಿಕ ಭಾವನಾತ್ಮಕ ಸಂದೇಶ
ರಾಜಕೀಯ

ಮೌನ ಮುರಿದ ಡಿಕೆ ಶಿವಕುಮಾರ್; ಸಿಎಂ ರಾಜೀನಾಮೆ ಬಳಿಕ ಭಾವನಾತ್ಮಕ ಸಂದೇಶ

by ಪ್ರತಿಧ್ವನಿ
May 29, 2026
0

ಕಳೆದ ಮೂರು-ನಾಲ್ಕು ದಿನಗಳಿಂದ ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಗಳ ಬಗ್ಗೆ ಮೌನವಾಗಿದ್ದ ಡಿ‌ಕೆ‌‌ ಶಿವಕುಮಾರ್ ಇದೀಗ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ...

Read moreDetails
ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!

May 29, 2026
ಡಿಕೆಶಿಗೆ ಪಟ್ಟಾಭಿಷೇಕ: ಸೋಮವಾರವೇ ನೂತನ ಸಿಎಂ ಪ್ರಮಾಣವಚನ?

ಡಿಕೆಶಿಗೆ ಪಟ್ಟಾಭಿಷೇಕ: ಸೋಮವಾರವೇ ನೂತನ ಸಿಎಂ ಪ್ರಮಾಣವಚನ?

May 29, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧು ಕೋಕಿಲ ನೇಮಕ: ಡಿಕೆಶಿ ಅಭಿನಂದನೆ

ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧು ಕೋಕಿಲ ನೇಮಕ: ಡಿಕೆಶಿ ಅಭಿನಂದನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada