• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Implementation of our guarantee scheme | ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
May 20, 2023
in Top Story, ಇದೀಗ, ಕರ್ನಾಟಕ
0
ಮಣಿಪುರ
Share on WhatsAppShare on FacebookShare on Telegram

ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ. ಇದರ ಜತೆಗೆ ನಾವು ನೀಡಿರುವ ಇತರೆ ಭರವಸೆಗಳನ್ನು ಜಾರಿ ಮಾಡುತ್ತೇವೆ. ಕಳೆದ ಬಾರಿಯ ಸರ್ಕಾರ ಇದ್ದಾಗಲೂ ನಾವು ಹೇಳಿದ್ದನ್ನು ಮಾಡಿ ತೋರಿಸಿದ್ದೇವೆ. ನಾವು ಬಿಜೆಪಿಯವರ ರೀತಿ ಹೇಳುವುದೊಂದು ಮಾಡುವುದು ಮತ್ತೊಂದು ರೀತಿ ಆಡಳಿತ ಮಾಡುವುದಿಲ್ಲ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ.

ADVERTISEMENT

ಪ್ರಧಾನಿ ಮೋದಿ ಅವರು ಈಗ ಮತ್ತೊಂದು ಆದೇಶ ಹೊರಡಿಸಿದ್ದಾರೆ. ಅವರು ಜಪಾನ್ ಗೆ ತೆರಳಿದಾಗಲೆಲ್ಲಾ ನೋಟು ರದ್ದು ತೀರ್ಮಾನ ಪ್ರಕಟಿಸುತ್ತಾರೆ. ಕಳೆದ ಬಾರಿ ಜಪಾನ್ ಗೆ ತೆರಳಿದಾಗ ಒಂದು ಸಾವಿರ ರೂ. ಮುಖಬೆಲೆ ನೋಟು ರದ್ದು ಮಾಡಿದ್ದರು. ಈ ಬಾರಿ 2 ಸಾವಿರ ಮುಖಬೆಲೆಯ ನೋಟು ರದ್ದು ಮಾಡಿದ್ದಾರೆ. ಇದರರ್ಥ ಇದರಿಂದ ದೇಶಕ್ಕೆ ಲಾಭವೋ, ನಷ್ಟವೋ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವುದಿಲ್ಲ. ಮೋದಿ ಅವರ ಈ ಕೆಲಸ ದೇಶದ ಜನರಿಗೆ ತೊಂದರೆ ಆಗುತ್ತಿದೆ. ನಮ್ಮ ಸರ್ಕಾರ ರಾಜ್ಯದಲ್ಲಿ ದ್ವೇಷವನ್ನು ಕಿತ್ತೊಗೆದು, ಪ್ರೀತಿ, ಸೌಹಾರ್ದತೆ, ಸಾಮರಸ್ಯದ ಸರ್ಕಾರವಾಗಿದೆ. ನಾವು ನುಡಿದಂತೆ ನಡೆಯುತ್ತೇವೆ. ನಮ್ಮ ಭರವಸೆ ಈಡೇರಿಸುತ್ತೇವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ ರಾಜ್ಯದ ಜನರಿಗೆ ಸಿಕ್ಕಿರುವ ಗೆಲುವು. ಜನರ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಪ್ರಚಾರ ಆರಂಭವಾಗಿದ್ದು, ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಮೂಲಕ. ಇದರ ಜತೆಗೆ ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಗಾಂಧಿ ಹಾಗೂ ಅನೇಕ ನಾಯಕರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದು ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಇದರ ಜತೆಗೆ ಸಾಹಿತಿಗಳು, ಚಿಂತಕರು, ಸಂಘಟನೆ ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದು, ಧನ್ಯವಾದ ಅರ್ಪಿಸುತ್ತೇನೆ. ರಾಜ್ಯದ ಯುವಕರು, ರೈತರು, ಕಾರ್ಮಿಕರು, ಮಹಿಳೆಯರಿಗೂ ಧನ್ಯವಾದ ತಿಳಿಸುತ್ತೇನೆ.

ಈ ಕಾರ್ಯಕ್ರಮಕ್ಕೆ ಬಂದು ನಮಗೆ ಶುಭ ಕೋರಿ ಆಶೀರ್ವಾದ ಮಾಡಲು ಬಂದಿರುವ ಎಲ್ಲಾ ಪ್ರಮುಖ ನಾಯಕರು ಹಾಗೂ ಗಣ್ಯರಿಗೆ ಧನ್ಯವಾದ ತಿಳಿಸುತ್ತೇನೆ. ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ. ಜನ ಬದಲಾವಣೆ ಬಯಸಿದ್ದು, ನಾವು ಜನರಿಗೆ ಕೊಟ್ಟಿರುವ ಭರವಸೆ, ಗ್ಯಾರಂಟಿ ಯೋಜನೆಗಳನ್ನು ಇವತ್ತೇ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ ಆದೇಶ ಹೊರಡಿಸಿ ಜಾರಿಗೆ ತರುತ್ತೇವೆ. ಇದು ಕನ್ನಡನಾಡಿನ ಜನತೆಗೆ ನೂತನ ಸರ್ಕಾರದ ಕೊಡುಗೆಯಾಗಿದೆ. ನಮ್ಮ ಪ್ರಮಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ ಎಂದರು.

Tags: BJPCongress PartyDKShivakumarMallikarjun Khargesiddaramaiahಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

DK Sivakumar took oath as DCM | ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್

Next Post

CM Siddaramaiah Name Board | ಸಿಎಂ ಕಚೇರಿಗೆ ಹೊಸ ನಾಮಫಲಕ ಅಳವಡಿಸಿದ ಸಿಬ್ಬಂದಿ #CMSiddaramaiah #Congress

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post

CM Siddaramaiah Name Board | ಸಿಎಂ ಕಚೇರಿಗೆ ಹೊಸ ನಾಮಫಲಕ ಅಳವಡಿಸಿದ ಸಿಬ್ಬಂದಿ #CMSiddaramaiah #Congress

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada