• Home
  • About Us
  • ಕರ್ನಾಟಕ
Friday, July 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು..!!

ಪ್ರತಿಧ್ವನಿ by ಪ್ರತಿಧ್ವನಿ
July 17, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

· ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.

ADVERTISEMENT

· ಕರ್ನಾಟಕ ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ತಾತ್ವಿಕ ಅನುಮೋದನೆ ಹಾಗೂ ಎನ್ ಟಿಪಿಸಿ ಸಂಸ್ಥೆಯು ಕರ್ನಾಟಕದಲ್ಲಿ ಪರಮಾಣು ವಿದ್ಯುತ್ ಸ್ಥಾಪನೆಗೆ ಗುರುತಿಸಿರುವ ಸಂಭಾವ್ಯ ಸ್ಥಳಗಳ್ಲಿ ಪ್ರಾಥಮಿಕ ಅಧ್ಯಯನ ನಡೆಸಲು ಅನುಮತಿ ನೀಡಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

· ಆಯುಷ್ ಇಲಾಖೆಯ ಆಯುರ್ವೇದ, ಸಿದ್ದ ಮತ್ತು ಯುನಾನಿ ಔಷಧಗಳ ಅಮಲುಜಾರಿ ವಿಭಾಗ ಹಾಗೂ ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಜೊತೆಗೆ ವಿಲೀನಗೊಳಿಸಲು ನಿರ್ಣಯಿಸಲಾಯಿತು.

· ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಯಳವಟ್ಟಿ ಗ್ರಾಮದಲ್ಲಿ 28.3 ಎಕರೆ ಪ್ರದೇಶದಲ್ಲಿ ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಳ ಬಹು ಉತ್ಪನ್ನಗಳ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮತ್ತು ಸಂರಕ್ಷಣಾ ಘಟಕವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಡಿ ರೂ.35.07 ಕೋಟಿಗಳ ಮೊತ್ತದಲ್ಲಿ Common Infrastructure for Industrial Parks (Food Park) ಮಾದರಿಯಲ್ಲಿ ಸ್ಥಾಪಿಸಲು ಅನುಮೋದನೆ ¤Ãಡಲಾಗಿದೆ.

· ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದ ಪರಂಪೋಕ ಸರ್ಕಾರಿ ಸರ್ವೆ ನಂ.124/*/1/ಪಿ2 ನಲ್ಲಿನ 194-33 ಎಕರೆ ಜಮೀನಿನಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿ ರೂ.83.79 ಕೋಟಿ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುವುದು.

· ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ತಾಲ್ಲೂಕು, ಮಂಡಿಕಲ್ಲು ಹೋಬಳಿ, ಯರಮಾರೇನಹಳ್ಳಿ ಗ್ರಾಮದಲ್ಲಿ 5-23 ಎಕರೆ / ಗುಂಟೆ ಸರ್ಕಾರಿ ಬೀಳು ಜಮೀನನ್ನು ಅಕ್ಷಯ ಪಾತ್ರೆ ಅಡುಗೆ ಮನೆ ಮತ್ತು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಗ್ರಾಮೀಣ ಮಕ್ಕಳಿಗೆ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ, ಇಸ್ಕಾನ್ ಬೆಂಗಳೂರು ಇವರಿಗೆ ಮಂಜೂರು ಮಾಡಲು ಸಚಿವ ಸಂಪುಟವು ನಿರ್ಧರಿಸಿದೆ.

· ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ವೀರಭದ್ರನ ಪಾಳ್ಯ ಗ್ರಾಮದ ಸ.ನಂ.66ರಲ್ಲಿ 15 ಗುಂಟೆ ಖರಾಬು ಜಮೀನನ್ನು ಕಾಂಗ್ರೆಸ್ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್ ಇವರಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

· ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೆಮ್ಮಿಂಜೆ ಗ್ರಾಮದ ಸ.ನಂ.138/4 ರಲ್ಲಿ 3.00 ಎಕರೆ ಗೋಮಾಳ ಜಮೀನನ್ನು ಬಂಟರ ಸಂಘ, ಪುತ್ತೂರು ತಾಲ್ಲೂಕುಮಂಜೂರು ಮಾಡಲಾಗಿದೆ.

· ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವತಿಯಿಂದ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಳವಡಿಸಲಾಗಿರುವ ಸಮರ್ಪಕವಾಗಿ ಕಾರ್ಯನಿರ್ವಹಿಸದ 1,530 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳ ಉಪಕರಣಗಳನ್ನು ರೂ.19.89 ಕೋಟಿಗಳ ಅಂದಾಜು ಮೊತ್ತದಲ್ಲಿ ಬದಲಿಸಿ ಹೊಸದಾಗಿ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

· ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನ ಪೀಠವನ್ನು ರೂ.10.00 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

· ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಒಳಗೊಂಡAತೆ ಉತ್ತರ ಕರ್ನಾಟಕ ಪ್ರವಾಸಿ ವೃತ್ತವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ DBFOT ಮಾದರಿಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಗಮದ ಮೂಲಕ ರೂ.166.22 ಕೋಟಿಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

· ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ “ಎ” ಮತ್ತು “ಬಿ” ಖಾತಾ ನೀಡುವುದನ್ನು ನಿಯಂತ್ರಿಸಲು ಸಚಿವ ಸಂಪುಟ ನಿರ್ಣಯವನ್ನು ಕೈಗೊಂಡಿತು.

· ಮಲಪ್ರಭಾ ನದಿಗೆ ಅಡ್ಡಲಾಗಿರುವ ಮುನವಳ್ಳಿ ಆರ್‌ಬಿಸಿಗೆ ನವಿಲುತೀರ್ಥ ಆಣೆಕಟ್ಟಿನ ಚೈನೇಜ್. 0+098 ರಿಂದ ಚೈನೇಜ್ 0+433 ವರೆಗೆ ಅಕ್ವಾಡಕ್ಟ್ ಅನ್ನು ಎಂಎಸ್ ಪೈಪ್‌ನೊಂದಿಗೆ ನಿರ್ಮಿಸುವ ಕಾಮಗಾರಿಯನ್ನು ರೂ.19.05 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ನೀಡುವ ಸಂಬAಧ ಕೇಂದ್ರಿಯ ಅಂತರ್ಜಲ ಪ್ರಾಧಿಕಾರ ಇವರು ಹೊರಡಿಸಿರುವ ಮಾರ್ಗಸೂಚಿಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು.

· ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳದಲ್ಲಿ ಅಲ್ಪಸಂಖ್ಯಾತರ ವಿದ್ಯಾಥಿನಿಯರಿಗಾಗಿ ವಸತಿ ಸಹಿತ ಪದವಿ ಪೂರ್ವ ಕಾಲೇಜನ್ನು ರೂ.17.09 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಿ 400 ವಿದ್ಯಾರ್ಥಿನಿಯರ ಸಂಖ್ಯಾ ಬಲದೊಂದಿಗೆ ಪ್ರಾರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು

· ಚಿಕ್ಕಮಗಳೂರು ಜಿಲ್ಲೆ, ನರಸಿಂಹರಾಜಪುರ ಪಟ್ಟಣದ ರಸ್ತೆಯನ್ನು ರೂ.60.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅಗಲೀಕರಣ ಮಾಡುವ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

· ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನಲ್ಲಿ ತಾಲ್ಲೂಕು ಪ್ರಜಾಸೌಧ ಕಟ್ಟಡ ಕಾಮಗಾರಿಯನ್ನು ರೂ.16.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಒಟ್ಟು 126 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯ 5 ವರ್ಷಗಳ ಪೋಷಣೆ ಮತ್ತು ನಿರ್ವಹಣೆ (O&M) ಕಾಮಗಾರಿಯನ್ನು ರೂ.128.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

· ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣದ 4 ಕಾಮಗಾರಿಗಳನ್ನು ಒಟ್ಟು ರೂ.64.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

· ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ರೂ.30.00 ಕೋಟಿ ವೆಚ್ಚದ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

· ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂಸ್ವಾಧೀನಪಡಿಸಿಕೊಂಡಿದ್ದ ಜಮೀನಗಳನ್ನು ಭೂಸ್ವಾಧೀನ ಕಾಯ್ದೆ 1894ರ ಕಲಂ48(1)ರಡಿ ಭೂಸ್ವಾಧೀನದಿಂದ ಕೈಬಿಟ್ಟಿರುವ 29 ಪ್ರಕರಣಗಳಲ್ಲಿ, ಸಂಬAಧಪಟ್ಟ ಎಲ್ಲಾ ಬಾಧಿತ ವ್ಯಕ್ತಿಗಳಿಗೆ ನೋಟೀಸ್ ನೀಡಿ, ವಿವರಣೆ ಪಡೆದು, ನಿಯಮಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಟ್ಟಿರುವ ಅಧಿಸೂಚನೆಗಳನ್ನು ಹಿಂಪಡೆಯಲು ಹಾಗೂ ಇದಕ್ಕೆ ಕಾರಣಕರ್ತರಾಗಿರುವ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು; ಸಚಿವ ಸಂಪುಟ ನಿರ್ಧರಿಸಿದೆ.

· ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ಹುಲುಗುಂದ ಗ್ರಾಮದ ಬಳಿ ಕಮಾನು ಸೇತುವೆ (Arch Bridge) ಯನ್ನು ರೂ.36.50 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಸಚಿವ ಸಂಪುಟ ನಿರ್ಣಯಿಸಿದೆ.

· ಹೇಮಾವತಿ ಯೋಜನೆಯಡಿಯಲ್ಲಿನ ನಾಗಮಂಗಲ ಶಾಖಾ ನಾಲೆಯ ಸರಪಳಿ 0.00 ಕಿ.ಮೀ ನಿಂದ 78.46 ಕಿ.ಮೀ ವರೆಗೆ ಅಭಿವೃದ್ಧಿಪಡಿಸುವ ರೂ.560.00 ಕೋಟಿಗಳ ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

· ದಿನಾಂಕ: 04.06.2025 ರಂದು ಆರ್.ಸಿ.ಬಿ ಕ್ರಿಕೆಟ್ ತಂಡದ ವಿಜಯೋತ್ಸವ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬAಧಿಸಿದAತೆ ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಜಾನ್ ಮೈಕಲ್ ಕುನ್ಹಾ ರವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯನ್ನು ಅಧ್ಯಯನ ಮಾಡಲಾಗುತ್ತದೆ.ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.

Tags: c m siddaramaiah danceCM Siddaramaiahcm siddaramaiah budgetcm siddaramaiah dancecm siddaramaiah livecm siddaramaiah newscm siddaramaiah on iplcm siddaramaiah speechcm siddaramaiah statuscm siddaramaiah videoCMSiddaramaiahsiddaramaiahSiddaramaiah CMsiddaramaiah cm newssiddaramaiah cm racesiddaramaiah congresssiddaramaiah dancesiddaramaiah new dancesiddaramaiah newssiddaramaiah orders sitsiddaramaiah speechsiddaramaiah today news
Previous Post

Hrutika Srinivas: “ಜಾಕಿ-42” ಚಿತ್ರದಲ್ಲಿ ಕಿರಣ್ ರಾಜ್ ಗೆ ಹೃತಿಕಾ ಶ್ರೀನಿವಾಸ್ ನಾಯಕಿ .

Next Post

CM Siddaramaiah: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ..!!

Related Posts

Top Story

CM Siddaramaiah: ಕಾಂಗ್ರೆಸ್ ಸಿದ್ಧಾಂತದಲ್ಲಿ ರಾಜಿ ಮಾಡಿಕೊಳ್ಳದ ಎಲ್ಲರೂ ರಾಜಕೀಯವಾಗಿ ಗೆದ್ದಿದ್ದಾರೆ..!!

by ಪ್ರತಿಧ್ವನಿ
July 18, 2025
0

ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ "ಸಮಾಜವಾದ" ಮತ್ತು "ಜಾತ್ಯತೀತ" ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ : ಸಿ.ಎಂ.ಸಿದ್ದರಾಮಯ್ಯ. ಸಿದ್ಧಾಂತವೇ ನಿಮ್ಮ ನಾಯಕ. ಸೈದ್ಧಾಂತಿಕ ನಾಯಕತ್ವದ ಜೊತೆ ನೀವಿರಿ:...

Read moreDetails

Gym Ravi: 101ಜನರೊಂದಿಗೆ ಯಶಸ್ವಿಯಾಗಿ ಕಾಶಿಯಾತ್ರೆ ಮಾಡಿದ ಎ.ವಿ.ರವಿ

July 18, 2025
ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

July 18, 2025
ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

July 18, 2025
ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

July 18, 2025
Next Post

CM Siddaramaiah: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ..!!

Recent News

Top Story

CM Siddaramaiah: ಕಾಂಗ್ರೆಸ್ ಸಿದ್ಧಾಂತದಲ್ಲಿ ರಾಜಿ ಮಾಡಿಕೊಳ್ಳದ ಎಲ್ಲರೂ ರಾಜಕೀಯವಾಗಿ ಗೆದ್ದಿದ್ದಾರೆ..!!

by ಪ್ರತಿಧ್ವನಿ
July 18, 2025
Top Story

Gym Ravi: 101ಜನರೊಂದಿಗೆ ಯಶಸ್ವಿಯಾಗಿ ಕಾಶಿಯಾತ್ರೆ ಮಾಡಿದ ಎ.ವಿ.ರವಿ

by ಪ್ರತಿಧ್ವನಿ
July 18, 2025
ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 
Top Story

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

by Chetan
July 18, 2025
ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 
Top Story

ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

by Chetan
July 18, 2025
ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 
Top Story

ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

by Chetan
July 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾಂಗ್ರೆಸ್ ಸಿದ್ಧಾಂತದಲ್ಲಿ ರಾಜಿ ಮಾಡಿಕೊಳ್ಳದ ಎಲ್ಲರೂ ರಾಜಕೀಯವಾಗಿ ಗೆದ್ದಿದ್ದಾರೆ..!!

July 18, 2025

Gym Ravi: 101ಜನರೊಂದಿಗೆ ಯಶಸ್ವಿಯಾಗಿ ಕಾಶಿಯಾತ್ರೆ ಮಾಡಿದ ಎ.ವಿ.ರವಿ

July 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada