• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಲಸಿಕೆ ನೀಡದಿರುವುದಕ್ಕೆ ಕಾಲುಬಾಯಿ ಜ್ವರದಿಂದ ಸಾವಿಗೀಡಾಗುತ್ತಿವೆ ಜಾನುವಾರುಗಳು

Any Mind by Any Mind
June 9, 2021
in ಕರ್ನಾಟಕ
0
ಲಸಿಕೆ ನೀಡದಿರುವುದಕ್ಕೆ  ಕಾಲುಬಾಯಿ ಜ್ವರದಿಂದ ಸಾವಿಗೀಡಾಗುತ್ತಿವೆ ಜಾನುವಾರುಗಳು
Share on WhatsAppShare on FacebookShare on Telegram

 

ADVERTISEMENT

ಇಡೀ ದೇಶದಲ್ಲಿ ಕೋವಿಡ್‌ ಎಂಬ ಮಹಾಮಾರಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ತೀವ್ರ ನಿರ್ಲಕ್ಷ್ಯದಿಂದಾಗಿ  ನೂರಾರು ಜನರು  ಸಾವನ್ನಪ್ಪಿದರು. ಎರಡನೇ ಅಲೆಯು ಬರಲಿದೆ ಎಂದು ಗೊತ್ತಿದ್ದರೂ ಸರ್ಕಾರಗಳು ಏನೂ ಮಾಡದೇ ಸುಮ್ಮನೇ ಕುಳಿತವು. ಜನತೆಗೆ ಸೋಂಕಿಗೆ ತುತ್ತಾಗುವವರಿಗೆ ಕನಿಷ್ಟ  ಬೆಡ್‌ ವ್ಯವಸ್ಥೆ ಆಕ್ಸಿಜನ್‌ ವ್ಯವಸ್ಥೆಯನ್ನಾದರೂ ಕಲ್ಪಿಸಬಹುದಿತ್ತು. ಆದರೆ ನಮ್ಮ ಸರ್ಕಾರಗಳು ಮಾಡಿದ್ದೇನು ?  ಸರ್ಕಾರ ನಡೆದುಕೊಂಡಿದ್ದು ಅಪ್ಪಟ ಹೊಣೆಗೇಡಿತನ.  ಶವಾಗಾರಗಳ ಮುಂದೆ  ಕ್ಯೂ ನಿಂತು ಜನರು ಶವ ಸಂಸ್ಕಾರ ಮಾಡಿದರು. ಇದೀಗ ಜಾನುವಾರುಗಳ ಸರದಿ ಆಗಿದೆ. ರಾಜ್ಯದ ಹಿಂದುಳಿದ ಜಿಲ್ಲೆ ಎಂದು ಹೆಸರಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಜಾನುವಾರುಗಳು ಕಾಲು ಬಾಯಿ ಜ್ವರದಿಂದ  ಮೃತಪಟ್ಟಿವೆ. 

 ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ವಿವಿಧ ಗ್ರಾಮಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, ಹಲವು ಜಾನುವಾರುಗಳು ಮೃತಪಟ್ಟಿವೆ. ಇದು ಹೈನುಗಾರಿಕೆ ಮಾಡುವ ರೈತರಲ್ಲಿ ಆತಂಕ ಸೃಷ್ಟಿಸಿದೆ.ಬೇಗೂರು ಭಾಗದ ಹೆಗ್ಗಡಹಳ್ಳಿ, ಕೋಟೆಕೆರೆ, ಭೋಗಯ್ಯನಹುಂಡಿ, ನೇನೆಕಟ್ಟೆ ಸೇರಿದಂತೆ ಹಂಗಳ ಭಾಗದ ಶಿವಪುರ, ಬಾಚಹಳ್ಳಿ, ಕಾಡಂಚಿನ ಗ್ರಾಮಗಳಾದ ಮಂಗಲ, ಯಲಚೆಟ್ಟಿ ಭಾಗದಲ್ಲಿ ಹೆಚ್ಚು ಜಾನುವಾರುಗಳು ಈ ಕಾಯಿಲೆಗೆ ತುತ್ತಾಗಿವೆ. ನವೆಂಬರ್, ಡಿಸೆಂಬರ್ನಲ್ಲಿ ಕಾಲು ಬಾಯಿ ಜ್ವರಕ್ಕೆ ಲಸಿಕೆ ಹಾಕಲಾಗಿತ್ತು. ಆರು ತಿಂಗಳಿಗೊಮ್ಮೆ ಲಸಿಕೆ ಹಾಕಲಾಗುತ್ತಿದೆ. ಕೋವಿಡ್ 2ನೇ ಅಲೆಯ ಕಾರಣದಿಂದ ಲಸಿಕೆ ಅಭಿಯಾನ ನಡೆದಿಲ್ಲ. ‘ಆರು ತಿಂಗಳಿಗೊಮ್ಮೆ ಲಸಿಕೆ ಹಾಕಿಸದೆ ಇರುವುದರಿಂದ ಇಂತಹ ರೋಗಗಳು ಹರಡುತ್ತವೆ. ರೈತರು ಮುಂಜಾಗ್ರತಾ ಕ್ರಮವಾಗಿ ಮುಂಗಾರು ಆರಂಭವಾಗುತ್ತಿದ್ದಂತೆ ಜಾನುವಾರುಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು’ ಎಂಬುದು ಪಶು ವೈದ್ಯರ ಸಲಹೆ.ಕೆಲವು ರೈತರು ಲಸಿಕೆ ಹಾಕಿಸಿದರೆ ಜಾನುವಾರುಗಳಿಗೆ ತೊಂದರೆಯಾಗುತ್ತದೆ. ಹಾಲಿನ ಪ್ರಮಾಣ ಕಡಿಮೆಯಾಗುತ್ತದೆ ಎಂಬ ಭಯದಲ್ಲಿ ಲಸಿಕೆ ಹಾಕಿಸಲು ಹಿಂದೇಟು ಹಾಕುತ್ತಾರೆ. ಇದರಿಂದಾಗಿ ರಾಸುಗಳು ಬೇಗ ಸೋಂಕಿಗೆ ತುತ್ತಾಗುತ್ತವೆ ಎಂದು ಹೇಳುತ್ತಾರೆ ಅವರು. ‘ಸಣ್ಣ ಕರುಗಳಿಗೆ ಈ ರೋಗ ತಗಲಿದರೆ ಬೇಗ ಮೃತಪಡುತ್ತವೆ. ದನದ ಕೊಟ್ಟಿಗೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಜಾನುವಾರುಗಳನ್ನು ಶುಚಿಯಾಗಿ ತೊಳೆಯಬೇಕು. ಜಾನುವಾರುಗಳು ಮೃತಪಟ್ಟಾಗ ಪಶು ಇಲಾಖೆಗೆ ತಿಳಿಸಿದರೆ ಶವಪರೀಕ್ಷೆ ನಡೆಸಿ ಕಾರಣ ಕಂಡುಹಿಡಿಯಬಹುದು’ ಎಂದು ಪಶು ವೈದ್ಯ ಮಾದೇಶ್ ಅವರು   ತಿಳಿಸಿದರು. ‘

ರೋಗ ಕಾಣಿಸಿಕೊಂಡ ಗ್ರಾಮಗಳಲ್ಲಿ ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಿಂಗಳ ಹಿಂದೆ ಸಹ ಕೆಲ ಭಾಗಗಳಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿ ಈಗ ನಿಯಂತ್ರಣಕ್ಕೆ ಬಂದಿದೆ’ ಎಂದು ಅವರು ಹೇಳಿದರು.  ‘ಕಾಲುಬಾಯಿ ಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ವೇಗವಾಗಿ ಹರಡುತ್ತದೆ. ರೋಗ ಕಾಣಿಸಿಕೊಂಡ ತಕ್ಷಣವೇ ಬಾಧಿತ ಹಸುವನ್ನು ಉಳಿದವುಗಳಿಂದ ಬೇರ್ಪಡಿಸಬೇಕು. ಸೋಡಿಯಂ ಕಾರ್ಬೊನೇಟ್ (ಅಡುಗೆ ಸೋಡಾ) ದ್ರಾವಣದಿಂದ ಕಾಲು ಮತ್ತು ಬಾಯಿಯನ್ನು ನಾಲ್ಕೈದು ಬಾರಿ  ಶುದ್ಧಗೊಳಿಸಬೇಕು. ವಿಟಮಿನ್ ಎ ಚುಚ್ಚುಮದ್ದು ಕೊಡಿಸಬೇಕು. ರೋಗದಿಂದ ಮೃತಪಟ್ಟ ಜಾನುವಾರುಗಳನ್ನು ಆಳವಾದ ಗುಂಡಿ ತೆಗೆದು ಸುಣ್ಣ ಹಾಕಿ ಮತ್ತೆ ಕಳೆಬರದ ಮೇಲೆ ಸುಣ್ಣ ಸುರಿದು ಮುಚ್ಚಬೇಕು’ ಎಂದು ವೈದ್ಯರು ಸಲಹೆ ನೀಡಿದರು.  ಲಸಿಕೆ ನೀಡಿ: ‘ತಾಲ್ಲೂಕಿನಲ್ಲಿ ಕಾಲು ಬಾಯಿ ಜ್ವರದಿಂದ ಜಾನುವಾರುಗಳು ಸಾಯುತ್ತಿವೆ. ಇದರಿಂದ ಹೈನುಗಾರಿಕೆ ನಂಬಿಕೊಂಡು ಜೀವನ ಮಾಡುವ ರೈತರಿಗೆ ತೊಂದರೆ ಆಗುತ್ತದೆ. ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಶೀಘ್ರವಾಗಿ ಲಸಿಕೆ ನೀಡಿ ಜಾನುವಾರುಗಳನ್ನು ಉಳಿಸದಿದ್ದಲ್ಲಿ ತಾಲ್ಲೂಕಿನ ಕಚೇರಿ ಮುಂಬಾಗ ಜಾನುವಾರುಗಳ ಜೊತೆಗೆ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ರೈತ ಮುಖಂಡ ಮಹದೇವಪ್ಪ  ಹೇಳುತ್ತಾರೆ.  

ಗೋವುಗಳನ್ನು ಸಾವಿನ ದವಡೆಗೆ ದೂಡಿದ ಇದೆಂಥ ಗೋರಕ್ಷಣೆ? ಹೆಚ್‌.ಡಿ ಕುಮಾರಸ್ವಾಮಿ ಪ್ರಶ್ನೆ

 ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆ ಇಲಾಖೆ ಉಪನಿರ್ದೇಶಕ ಡಾ.ಸಿ.ವೀರಭದ್ರಯ್ಯ ಅವರು, ‘ಮೇ ತಿಂಗಳ ಕೊನೆಯವಾರದಲ್ಲಿ ಕಾಲು ಬಾಯಿ ಜ್ವರದ ಪ್ರಕರಣಗಳು ಹೆಚ್ಚು ಕಾಣಿಸಿಕೊಂಡಿದ್ದವು. ತಕ್ಷಣವೇ ಎಲ್ಲ ಕಡೆ ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಹೇಳಿದರು.‘ಪ್ರತಿ ಆರು ತಿಂಗಳಿಗೊಮ್ಮೆ ಕಾಲುಬಾಯಿ ಜ್ವರದ ಲಸಿಕೆ ನೀಡಲಾಗುತ್ತದೆ. ಕಳೆದ ವರ್ಷ ನವೆಂಬರ್–ಡಿಸೆಂಬರ್ ಅವಧಿಯಲ್ಲಿ ನೀಡಿದ್ದೆವು. ಈಗ ಮತ್ತೆ ನೀಡಬೇಕಿತ್ತು. ಆದರೆ, ಕೋವಿಡ್ ಎರಡನೇ ಅಲೆಯಿಂದಾಗಿ ಅದು ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರದಿಂದ ಯಾವ ಸೂಚನೆಯೂ ಬಂದಿಲ್ಲ. ಹಾಗಾಗಿ, ಸದ್ಯಕ್ಕೆ ರೋಗ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು. 

ಹಿಂದುಳಿದ ಜಿಲ್ಲೆ ಚಾಮರಾಜನಗರದಲ್ಲಿ ಬಡ ಮತ್ತು ಅತೀ ಸಣ್ಣ ರೈತರು , ಭೂ ರಹಿತ ಕುಟುಂಬಗಳು ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿವೆ. ಇಂದು ಒಂದು ಹಾಲು ಕೊಡುವ  ಹಸುವಿಗೆ 30 ರಿಂದ 50 ಸಾವಿರ ರೂಪಾಯಿ ದರವಿದೆ.  ಇಂದು ಹಸು ಮೃತಪಟ್ಟರೆ ಅದು ನಿಜಕ್ಕೂ ಆ ಬಡ ಕುಟುಂಬಕ್ಕೆ  ದೊಡ್ಡ ನಷ್ಟವೇ. ಮನೆ ಮಗನನ್ನು ಕಳೆದುಕೊಡಂತೆ. ಆದರೆ ರಾಜ್ಯ ಸರ್ಕಾರಕ್ಕೆ ಇದೆಲ್ಲ ಅರ್ಥವಾಗುವುದಿಲ್ಲ. ಜನರು ಪ್ರತಿಭಟನೆಗಿಳಿದಾಗ ಮಾತ್ರ ಸರ್ಕಾರ ಎಚ್ಚತ್ತುಕೊಳ್ಳುತ್ತದೆ. ರಾಜ್ಯ ಸರ್ಕಾರ ಕೂಡಲೇ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ತಗುಲದಂತೆ ಲಸಿಕೆ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.

Previous Post

ಮೋದಿ ಸರ್ಕಾರದ ಕಳ್ಳನಿದ್ದೆಗೆ ಬೆಚ್ಚಿಬೀಳುವ ಲಸಿಕೆ ನೀಡಿದ ನ್ಯಾ.ಚಂದ್ರಚೂಡ್!

Next Post

ಕೋವಿಡ್‌ ಎರಡನೇ ಅಲೆ ಮುಗಿದೇ ಹೋಯಿತೇ?

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಕೋವಿಡ್‌ ಎರಡನೇ ಅಲೆ ಮುಗಿದೇ ಹೋಯಿತೇ?

ಕೋವಿಡ್‌ ಎರಡನೇ ಅಲೆ ಮುಗಿದೇ ಹೋಯಿತೇ?

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada