• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೊಘಲ್‌ ದೊರೆಗೆ ಪ್ರಶಂಸೆ: ಜಿ20 ಶೃಂಗಸಭೆಯಲ್ಲಿ ಮೋದಿ ಸರ್ಕಾರದ ಮತ್ತೊಂದು ಬೂಟಾಟಿಕೆ ಬಯಲು

ಫೈಝ್ by ಫೈಝ್
September 14, 2023
in Top Story, ಅಂಕಣ, ದೇಶ, ರಾಜಕೀಯ
0
ಮೊಘಲ್‌ ದೊರೆಗೆ ಪ್ರಶಂಸೆ: ಜಿ20 ಶೃಂಗಸಭೆಯಲ್ಲಿ ಮೋದಿ ಸರ್ಕಾರದ ಮತ್ತೊಂದು ಬೂಟಾಟಿಕೆ ಬಯಲು
Share on WhatsAppShare on FacebookShare on Telegram

ಮುಸ್ಲಿಮ್‌ ಅರಸರ ಮೇಲೆ ಅದರಲ್ಲೂ ವಿಶೇಷವಾಗಿ ಮೊಘಲರ ಬಗ್ಗೆ ಅಪಪ್ರಚಾರಗಳನ್ನು, ಮತೀಯ ದ್ವೇಷವನ್ನೂ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪ್ರಣೀತ ಬಲಪಂಥೀಯ ರಾಜಕಾರಣ ಹರಡುತ್ತಲೇ ಬಂದಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮೊಘಲ್‌ ಚಕ್ರವರ್ತಿ ಅಕ್ಬರ್ ನನ್ನು ಹೊಗಳಿ ಅಚ್ಚರಿ ಹುಟ್ಟಿಸಿದೆ.

ADVERTISEMENT

ಇತ್ತೀಚೆಗೆ ನಡೆದ ಜಿ20 ಶೃಂಗಸಭೆ ಅಂಗವಾಗಿ ಬಿಡುಗಡೆಗೊಳಿಸಿರುವ ಮ್ಯಾಗಝೀನ್‌ನಲ್ಲಿ ಮೊಘಲ್‌ ದೊರೆ ಅಕ್ಬರ್‌ ಓರ್ವ ಪ್ರಜಾಪ್ರಭುತ್ವ ಚಿಂತನೆಯಿದ್ದ ದೊರೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

ಸೆಪ್ಟೆಂಬರ್ 09 ಮತ್ತು 10 ರಂದು ದೆಹಲಿಯಲ್ಲಿ ನಡೆದ G20 ಶೃಂಗಸಭೆ 2023 ರ ಸಂದರ್ಭದಲ್ಲಿ ಜಾಗತಿಕ ನಾಯಕರ ಎದುರು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಮ್ಯಾಗಝೀನ್‌ನಲ್ಲಿ ಮೊಘಲ್ ಚಕ್ರವರ್ತಿ ಅಕ್ಬರ್ ನ ಒಳ್ಳೆಯ ಗುಣಗಳನ್ನು ಜಗತ್ತಿಗೆ ಪರಿಚಯಿಸಿದೆ .  

  ಮೊಘಲ್ ಚಕ್ರವರ್ತಿ ಅಕ್ಬರ್ ಶಾಂತಿ ಮತ್ತು ಪ್ರಜಾಪ್ರಭುತ್ವದ ಪ್ರತಿಪಾದಕ ಎಂದು ಮೋದಿ ಸರ್ಕಾರವು ಕರೆದಿದೆ. ಅಕ್ಬರ್‌ನ ಪ್ರಜಾಪ್ರಭುತ್ವದ ಚಿಂತನೆಯು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಸಾಕಷ್ಟು ಮುಂದೆ ಇತ್ತು ಎಂದು ಹೇಳಿದೆ.

ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪ್ರತಿಯೊಬ್ಬರ ಹಿತಾಸಕ್ತಿಯು ನಿರತವಾಗಿರುವುದು ಉತ್ತಮ ಆಡಳಿತವಾಗಿದೆ. ಮೂರನೇ ಮೊಘಲ್ ಬಾದ್‌ ಷಾ ಅಕ್ಬರ್ ಕೂಡ ಇದೇ ರೀತಿಯ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದ್ದರು. ಧರ್ಮದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಕ್ರಮಗಳನ್ನು ಕೈಗೊಂಡ ಅವರು ಸುಲ್-ಎ-ಕುಲ್ ಅಂದರೆ ವಿಶ್ವ ಶಾಂತಿಯ ತತ್ವವನ್ನು ಪರಿಚಯಿಸಿದರು ಎಂದು ಕೇಂದ್ರ ಸರ್ಕಾರ ಅಕ್ಬರ್‌ ಬಗ್ಗೆ ವಿವರಣೆಯನ್ನು ನೀಡಿದೆ.

ಸಾಮರಸ್ಯ ಮತ್ತು ಸಹಿಷ್ಣು ಸಮಾಜವನ್ನು ರಚಿಸಲು ಅವರು ದೀನ್-ಇ-ಇಲಾಹಿ ಧರ್ಮವನ್ನು ಪ್ರತಿಪಾದಿಸಿ ಆಚರಿಸಿದರು. ಅಕ್ಬರ್‌ ಸ್ಥಾಪಿಸಿದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಪಂಗಡಗಳ ಬುದ್ಧಿಜೀವಿಗಳು ಮತ್ತು ಧಾರ್ಮಿಕ ಮುಖಂಡರು ಅಕ್ಬರ್‌ ನೇತೃತ್ವದಲ್ಲಿ ಸಭೆ ಸೇರಿ ಚರ್ಚೆ ನಡೆಸುತ್ತಿದ್ದರು ಎಂದು ಅಕ್ಬರ್‌ ಗುಣಗಾನ ಮಾಡಲಾಗಿದೆ.

ಅಕ್ಬರ್ ಆಡಳಿತದ ಬಗ್ಗೆಯೂ ಬೆಳಕು ಚೆಲ್ಲಿರುವ ಮೋದಿ ಸರ್ಕಾರ ನವರತ್ನ ಎಂಬ ತನ್ನ ಪರಿಷತ್ತಿನ ಒಂಬತ್ತು ವಿದ್ವಾಂಸರೊಂದಿಗೆ ಸಮಾಲೋಚಿಸಿ ತನ್ನ ಸಾರ್ವಜನಿಕ ಕಲ್ಯಾಣ ನೀತಿಗಳನ್ನು ಅಕ್ಬರ್ ಜಾರಿಗೆ ತರುತ್ತಿದ್ದರು. ಅಕ್ಬರನ ಪ್ರಜಾಸತ್ತಾತ್ಮಕ ಮೌಲ್ಯವು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಬಹಳ ಮುಂದಿತ್ತು ಎಂದು ಹೇಳಿದೆ.

ಭಾರತವು ಇಂದು ಹೊಂದಿರುವ ಎಲ್ಲಾ ತಪ್ಪುಗಳಿಗಾಗಿ ಮೊಘಲ್ ಆಡಳಿತಗಾರರನ್ನು ಆಗಾಗ ನಿಂದಿಸುವುದು ಮತ್ತು ಅವರನ್ನು  ವಿದೇಶಿ ದಾಳಿಕೋರರು ಎಂದು ಆರ್ಎಸ್ಎಸ್, ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ನಾಯಕರು ಕರೆಯುತ್ತಿರುವುದು ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಸಾಮಾನ್ಯವಾಗಿದೆ. 2014 ರ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿಯವರು ಮೊಘಲರ ಅಥವಾ ಇಸ್ಲಾಂ ರಾಜರ ಆಡಳಿತವನ್ನು ಉಲ್ಲೇಖಿಸಿ “1,200 ವರ್ಷಗಳ ಗುಲಾಮ ಮನಸ್ಥಿತಿ” ಎಂಬುದರ ಬಗ್ಗೆಯೂ ಮಾತನಾಡಿದ್ದಾರೆ.

ಅದಾಗ್ಯೂ, ಅವರ ಸರ್ಕಾರವು ಚಕ್ರವರ್ತಿ ಅಕ್ಬರನ ಮೊಘಲ್ ಯುಗವನ್ನು  “ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಉತ್ತಮ ಆಡಳಿತ” ದ ಉದಾಹರಣೆಯನ್ನು ವಿವರಿಸಿದೆ.

 ಮೋದಿ ಸರಕಾರದ ಬೂಟಾಟಿಕೆ

ಜಿ 20 ಮ್ಯಾಗಜೀನ್‌ನ ವಿವರಗಳು ಸಾರ್ವಜನಿಕವಾಗಿ ಬಹಿರಂಗವಾದಾಗಿನಿಂದ ಸಾಮಾಜಿಕ ಮಾಧ್ಯಮ ಬಳಕೆದಾರರು ಬಿಜೆಪಿ ಮತ್ತು ಮೋದಿ ಸರ್ಕಾರದ ಬೂಟಾಟಿಕೆ ಮತ್ತು ದ್ವಂದ್ವ ನೀತಿಯನ್ನು ಎತ್ತಿ ತೋರಿಸಲು ಆರಂಭಿಸಿದ್ದಾರೆ.

ಭಾರತದ ಇತಿಹಾಸದಿಂದ ಮುಸ್ಲಿಂ ದೊರೆಗಳನ್ನು ಅಳಿಸುವುದು, ಅವರ ಇತಿಹಾಸವನ್ನು ತಿರುಚುವುದು ಮಾಡುತ್ತಲೇ ಬಂದಿರುವ ಬಿಜೆಪಿ ಮತ್ತು ಅದರ ರಾಜಕಾರಣವು, ವರ್ತಮಾನದಲ್ಲಿ ಮುಸ್ಲಿಂ ದೊರೆಗಳ ಹೆಸರಿನಲ್ಲಿರುವ ಸ್ಮಾರಕ, ರಸ್ತೆ, ನಗರಗಳನ್ನೂ ಬಿಟ್ಟಿಲ್ಲ. ಮುಸ್ಲಿಂ ದೊರೆಗಳ ಹೆಸರುಗಳನ್ನು, ಸಾಂಸ್ಕೃತಿಕ ಪರಂಪರೆಯನ್ನು ಬದಲಾಯಿಸುವುದರ ಮೂಲಕ ಸಾರ್ವಜನಿಕ ಮುಸ್ಲಿಂ ಗುರುತನ್ನು ಹಂತ ಹಂತವಾಗಿ ಅಳಿಸುತ್ತಲೇ ಬಂದಿರುವ ಬಿಜೆಪಿ ಇದೀಗ ಮೊಘಲ್‌ ದೊರೆಯನ್ನು ಹೊಗಳಿ ಜಾಗತಿಕ ನಾಯಕರೆದುರು ತನ್ನನ್ನು ಸಾಬೀತುಪಡಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಜಿ20 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರ ಸರ್ಕಾರದ ಮತ್ತೊಂದು ಬೂಟಾಟಿಕೆಯೂ ಇದೇ ರೀತಿ ಚರ್ಚೆಗೆ ಒಳಗಾಗಿತ್ತು. ಪ್ರಧಾನಿ ಮೋದಿಯವರು ಸೆಪ್ಟೆಂಬರ್ 10, 2023 ರಂದು ಜಿ20 ಶೃಂಗಸಭೆಗಾಗಿ ನವದೆಹಲಿಯಲ್ಲಿದ್ದ ವಿಶ್ವ ನಾಯಕರನ್ನು ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸಲು ರಾಜ್‌ಘಾಟ್‌ಗೆ ಕರೆದೊಯ್ದ ನಂತರ ಬಿಜೆಪಿ ಸರ್ಕಾರವನ್ನು ಇದೇ ರೀತಿ ಟೀಕಿಸಲಾಯಿತು.

ಜಗತ್ತಿನ ಮುಂದೆ ಗಾಂಧಿಯನ್ನು ಹೊಗಳಿ, ಮತ್ತು ದೇಶೀಯ ಮಟ್ಟದಲ್ಲಿ ಗೋಡ್ಸೆಯನ್ನು ಹೀರೋ ಮಾಡುವ ಬಿಜೆಪಿಯ ಭಂಡತನದ ರಾಜಕಾರಣದ ಬಗ್ಗೆಯೂ ನೆಟ್ಟಿಗರು ಟೀಕಿಸಿದ್ದರು.

Tags: AkbarBJPEmperorG20 SummitModi GovtMughalmuslimNarendra Modiನರೇಂದ್ರ ಮೋದಿಬಿಜೆಪಿ
Previous Post

ಹೊರಗಡೆ ಹಿಂದುತ್ವ.. ಮುಸ್ಲಿಂ ಜೊತೆ ವಾಸ್ತವ್ಯ.. ಅರ್ಥವಾಗದ ಜನರಷ್ಟೇ ಮಂಗ್ಯಾ ಆಗ್ತಿದ್ದಾರಾ..?

Next Post

ರಾಜ್ಯದ 195 ತಾಲ್ಲೂಕುಗಳು ಬರಪೀಡಿತ: ಸರ್ಕಾರದ ಅಧಿಕೃತ ಘೋಷಣೆ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ರಾಜ್ಯದ 195 ತಾಲ್ಲೂಕುಗಳು ಬರಪೀಡಿತ: ಸರ್ಕಾರದ ಅಧಿಕೃತ ಘೋಷಣೆ

ರಾಜ್ಯದ 195 ತಾಲ್ಲೂಕುಗಳು ಬರಪೀಡಿತ: ಸರ್ಕಾರದ ಅಧಿಕೃತ ಘೋಷಣೆ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada