• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್

ಪ್ರತಿಧ್ವನಿ by ಪ್ರತಿಧ್ವನಿ
March 25, 2024
in ಸಿನಿಮಾ
0
ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್
Share on WhatsAppShare on FacebookShare on Telegram


ADVERTISEMENT

“ರಾಜಕುಮಾರ”, “ಕೆಜಿಎಫ್”, ” ಕಾಂತಾರ” ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.

ಹೊಸಪೇಟೆಯ ಪುನೀತ್ ರಾಜಕುಮಾರ್ ಮೈದಾನದಲ್ಲಿ ಅದ್ದೂರಿಯಾಗಿ ಈ ವರ್ಣರಂಜಿತ ಸಮಾರಂಭ ನಡೆಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದರಾಮ್, ನಾಯಕ ಯುವ ರಾಜಕುಮಾರ್, ಚಿತ್ರದಲ್ಲಿ ನಟಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಹಿತ, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರು ಭಾಗವಹಿಸಿದ್ದರು. ಚಿತ್ರದ ಅನೇಕ ತಂತ್ರಜ್ಞರು ಸಹ ಉಪಸ್ಥಿತರಿದ್ದರು.

“ಯುವ” ಚಿತ್ರ ಆಗಲು ಅಶ್ವಿನಿ ಪುನೀತ್ ರಾಜಕುಮಾರ್ ಅವರೆ ಕಾರಣ.‌ ಅವರು ವಿಜಯ್ ಕಿರಗಂದೂರ್ ಅವರಿಗೆ ಫೋನ್ ಮಾಡಿ ನಮ್ಮ ಗುರು(ಯುವ ರಾಜಕುಮಾರ್)” ವನ್ನು ನಿಮ್ಮ ಸಂಸ್ಥೆಯ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸಿ ಎಂದರು. ವಿಜಯ್ ಕಿರಗಂದೂರ್ ಅವರು ಒಪ್ಪಿ ಈ ಚಿತ್ರ ನಿರ್ಮಾಣ ಮಾಡಿದರು. ಯುವ ರಾಜಕುಮಾರ್ ಕೂಡ ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ಯುವ ಅವರು ಓಡುವ ಸನ್ನಿವೇಶವನ್ನು ಚಿತ್ರದ ಮೊದಲ ಸನ್ನಿವೇಶವಾಗಿ ಚಿತ್ರಿಸಿಕೊಳ್ಳಲಾಗಿದೆ. ಕಾರಣ, ಯುವ ಅವರು ಯಾವಾಗಲೂ ಚಿತ್ರರಂಗದಲ್ಲಿ ಓಡುವ ಕುದುರೆಯಾಗಿರಲಿ ಎಂದು. ಇನ್ನು ನನ್ನ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ಇದೇ ಮಾರ್ಚ್ 29 ರಂದು ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಬಂದು ಚಿತ್ರ ನೋಡಿ ಪ್ರೋತ್ಸಾಹಿಸಿ. ಈ ಸಂದರ್ಭದಲ್ಲಿ ನಾನು ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ, ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ, ನನ್ನ ತಂಡಕ್ಕೆ ಹಾಗೂ ವಿಶೇಷವಾಗಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

ನಾನು ಮೊದಲು ನನ್ನ‌ ಚಿಕ್ಕಪ್ಪ ಪುನೀತ್ ರಾಜಕುಮಾರ್ ಹಾಗೂ ಚಿಕ್ಕಮ್ಮ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಮಾತನಾಡಿದ ಯುವ ರಾಜಕುಮಾರ್, ಏಕೆಂದರೆ ನನ್ನನ್ನು ನಾಯಕನನ್ನಾಗಿ ಮಾಡಿ ಎಂದು ಅವರಿಬ್ಬರು ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಸರ್ ಗೆ ಹೇಳಿದ್ದಾರೆ. ಅವರಿಂದಲೇ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರದಲ್ಲಿ ನಟಿಸಲು ಸಾಧ್ಯವಾಗಿದೆ. ನಿರ್ಮಾಪಕರಾದ ವಿಜಯ್ ಕಿರಗಂದೂರ್ ಹಾಗೂ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ನಾನು ಚಿರ ಋಣಿ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಹಿರಿಯ ನಟರಾದ ಅಚ್ಯುತಕುಮಾರ್, ಸುಧಾರಾಣಿ ಮುಂತಾದವರಿಂದ ಸಾಕಷ್ಟು ಕಲಿತಿದ್ದೇನೆ‌. ನಾಯಕಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಇಡೀ ತಂಡದ ಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.

ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್ ಮುಂತಾದವರು “ಯುವ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ಈ ಸಮಾರಂಭದಲ್ಲಿ ಕರ್ನಾಟಕದ ಹೆಸರಾಂತ ಕಲಾವಿದರ ಗಾಯನ, ನೃತ್ಯ ಮುಂತಾದ ಮನೋರಂಜನಾ ಕಾರ್ಯಕ್ರಮಗಳು ಸಹ ಅದ್ಭುತವಾಗಿ ಮೂಡಿಬಂತು.

Tags: @kANNADAMOVIESappupunithrajkumaryuva
Previous Post

ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್)ಚಿತ್ರ .

Next Post

ಕೆಲವೇ ದಿನಗಳಲ್ಲಿ ಜೆಡಿಎಸ್ ಕಣ್ಮರೆ : ಕೈ ಮುಖಂಡ ರಮೇಶ್ ಬಾಬು ತೀವ್ರ ವಾಗ್ದಾಳಿ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಕೆಲವೇ ದಿನಗಳಲ್ಲಿ ಜೆಡಿಎಸ್ ಕಣ್ಮರೆ : ಕೈ ಮುಖಂಡ ರಮೇಶ್ ಬಾಬು ತೀವ್ರ ವಾಗ್ದಾಳಿ

ಕೆಲವೇ ದಿನಗಳಲ್ಲಿ ಜೆಡಿಎಸ್ ಕಣ್ಮರೆ : ಕೈ ಮುಖಂಡ ರಮೇಶ್ ಬಾಬು ತೀವ್ರ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada