ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದು, ಯಾರಿಗೆ ಟಿಕೆಟ್(Ticket) ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್(Srinivas Prasad) ಹೇಳಿದರು.
ಮೈಸೂರಿ(Mysore)ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಇಬ್ಬರು ಅಳಿಯಂದಿರ ಜತೆಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ನನಗೆ ನನ್ನ ಅಳಿಯ ಡಾ.ಮೋಹನ್(Dr Mohan) ಟಿಕೆಟ್ ಕೇಳಿದ್ದಾನೆ ಅಂತ ಗೊತ್ತಿತ್ತು, ಇದೀಗ ಹರ್ಷವರ್ಧನ್(Harshavardhan) ಕೂಡ ಟಿಕೆಟ್(Ticket) ಕೇಳಿದ್ದಾನೆ ಅಂತ ಗೊತ್ತಿರಲಿಲ್ಲ. ಹೀಗಾಗಿ ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದು, ಅವರಿಬ್ಬರೂ ತುಂಬಾ ಅನೋನ್ಯವಾಗಿದ್ದಾರೆ.
![](https://pratidhvani.com/wp-content/uploads/2024/02/WhatsApp-Image-2024-02-22-at-12.15.06-1024x712.webp)
ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ. ಚಾಮರಾಜನಗರ(Chamarajanagar) ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನು ವಿಜಯೇಂದ್ರ(Vijayendra)ಗೆ ಹೇಳಿದ್ದೇನೆ ಎಂದರು.
ಮಾರ್ಚ್ 17ರ ನಂತರ ಚುನಾವಣೆ(Election) ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಲೆ ಹೋಗಿವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ ಎಂದ ಅವರು, ಡಾ.ಮಹದೇವಪ್ಪ(Mahadevappa) ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಅವರು ನಮ್ಮ ವಿರೋಧಿಗಳು, ಅವರ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದು ಹೇಳಿದರು.
#Srinivasprasad #BJPKarnataka #BJPMP #Chamarajanagara #BYVijayendra