• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗ್ರಾಮೀಣ ಪ್ರದೇಶಗಳನ್ನೂ ಭಾದಿಸುತ್ತಿರುವ ಕರೋನಾ ಎರಡನೇ ಅಲೆ: ಸಾವಿನ ಪ್ರಮಾಣ ನಾಲ್ಕು‌‌ ಪಟ್ಟು ಹೆಚ್ಚು

ಫಾತಿಮಾ by ಫಾತಿಮಾ
May 9, 2021
in ದೇಶ
0
ಗ್ರಾಮೀಣ ಪ್ರದೇಶಗಳನ್ನೂ ಭಾದಿಸುತ್ತಿರುವ ಕರೋನಾ  ಎರಡನೇ ಅಲೆ: ಸಾವಿನ ಪ್ರಮಾಣ ನಾಲ್ಕು‌‌ ಪಟ್ಟು ಹೆಚ್ಚು
Share on WhatsAppShare on FacebookShare on Telegram

ಕೋವಿಡ್ -19 ರ ಎರಡನೇ ಅಲೆಯ ಒಂದು‌‌ ಪ್ರಮುಖ ಲಕ್ಷಣವೆಂದರೆ   ಗ್ರಾಮೀಣ ಭಾರತದಲ್ಲಾದ ಪ್ರಕರಣಗಳಲ್ಲಿನ ಹೆಚ್ಚಳ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ಮೊದಲ ಅಲೆಯ ಗರಿಷ್ಠ ಮಟ್ಟಕ್ಕೆ ಹೋಲಿಸಿದರೆ ಭಾರತದ ಒಳನಾಡು ಅಥವಾ ಹಿಂದುಳಿದ ಪ್ರದೇಶಗಳಲ್ಲಿನ ಪ್ರಕರಣಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಮತ್ತು ಸತ್ತವರ ಸಂಖ್ಯೆಯೂ ಹೆಚ್ಚಾಗಿದೆ.

ADVERTISEMENT


ಡೇಟಾ ಲಭ್ಯವಿರುವ 272 ಹಿಂದುಳಿದ ಪ್ರದೇಶ ಅನುದಾನ ನಿಧಿ (ಬಿಆರ್‌ಜಿಎಫ್) ವ್ಯಾಪ್ತಿಗೆ ಒಳಪಟ್ಟಿರುವ ಜಿಲ್ಲೆಗಳಲ್ಲಿ 243  ಜಿಲ್ಲೆಗಳಲ್ಲಿ ಮೇ 5 ರ ಹೊತ್ತಿಗೆ 39.16 ಲಕ್ಷಕ್ಕೂ ಹೆಚ್ಚು ಜನರು ಈ ಸೋಂಕಿಗೆ ಒಳಗಾಗಿದ್ದಾರೆ. ಇದು ಸೆಪ್ಟೆಂಬರ್ 16, 2020 ರಂದು ಮೊದಲ ಅಲೆಯ ಗರಿಷ್ಠ. 9.5 ಲಕ್ಷ ಸೋಂಕುಗಳಿಗಿಂತ ನಾಲ್ಕು ಪಟ್ಟು ಹೆಚ್ಚು.


ಈ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಹೊರೆ ಎರಡನೆ ಅಲೆಯಲ್ಲಿ ಹೆಚ್ಚಾಗಿದೆ. ಆತಂಕಕಾರಿ ಸಂಗತಿ ಎಂದರೆ ಎರಡನೇ ಅಲೆ ಇನ್ನೂ ಗರಿಷ್ಠ ಮಟ್ಟ ತಲುಪಿಲ್ಲ. ಸಕ್ರಿಯ ಪ್ರಕರಣಗಳು ಈಗಾಗಲೇ ಮೊದಲ ಅಲೆಯ ಗರಿಷ್ಠ ಸಕ್ರಿಯ ಪ್ರಕರಣಗಳಿಗಿಂತ 4.2 ಪಟ್ಟು ಹೆಚ್ಚು.  ಈ ಜಿಲ್ಲೆಗಳಲ್ಲಿ ಪ್ರಸ್ತುತ 7.15 ಲಕ್ಷಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ, ಇದು ಗ್ರಾಮೀಣ ಜಿಲ್ಲೆಗಳಲ್ಲಿ  ಹೆಲ್ತ್‌ಕೇರ್ ಮೂಲಸೌಕರ್ಯವನ್ನು ತೀವ್ರ ಒತ್ತಡಕ್ಕೆ ಒಳಪಡಿಸುತ್ತದೆ.


ಇದು ಬಹುಶಃ ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳಿಗೆ ಕಾರಣವಾಗಬಹುದು.  ಮೇ 5 ರ ಹೊತ್ತಿಗೆ‌‌ ಒಇ‌243 ಜಿಲ್ಲೆಗಳು ಒಟ್ಟಾಗಿ 36,523 ಸಾವುಗಳನ್ನು ದಾಖಲಿಸಿವೆ. ಕಳೆದ ವರ್ಷ ಮೊದಲ ಅಲೆಯ ಉತ್ತುಂಗದಲ್ಲಿ ಸತ್ತವರ ಸಂಖ್ಯೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಅಂದರೆ ಸೆಪ್ಟೆಂಬರ್ 16, 2020 ರ ಹೊತ್ತಿಗೆ ಈ ಜಿಲ್ಲೆಗಳಲ್ಲಿ ಸತ್ತವರ ಒಟ್ಟು ಸಂಖ್ಯೆ 9,555.


ಬಿಆರ್‌ಜಿಎಫ್ ಅಡಿಯಲ್ಲಿರುವ 272 ಜಿಲ್ಲೆಗಳಲ್ಲಿ ಸುಮಾರು 54 ಪ್ರತಿಶತ ಕೇವಲ ಐದು ರಾಜ್ಯಗಳಿಗೆ ಸೇರಿದೆ. ಬಿಹಾರ – 38, ಉತ್ತರ ಪ್ರದೇಶ – 35, ಮಧ್ಯಪ್ರದೇಶ – 30, ಜಾರ್ಖಂಡ್ – 23 ಮತ್ತು ಒಡಿಶಾ – 20. ಈ ರಾಜ್ಯಗಳು ದೇಶದ ನಗರ ಕೇಂದ್ರಗಳಿಗೆ ಹೆಚ್ಚಿನ ಕಾರ್ಮಿಕ ಶಕ್ತಿ ಅಥವಾ ವಲಸೆ ಕಾರ್ಮಿಕರನ್ನು ಸಹ ಒದಗಿಸುತ್ತವೆ.


ಕರೊನಾವೈರಸ್ ಪ್ರಕರಣಗಳ ನಗರ ಮತ್ತು ಗ್ರಾಮೀಣ ವಿಭಜನವಾರು ಪ್ರಕರಣಗಳು ನೇರವಾಗಿ ಲಭ್ಯವಿಲ್ಲದಿದ್ದರೂ, ಬಿಆರ್‌ಜಿಎಫ್ ಜಿಲ್ಲೆಗಳಲ್ಲಿನ ಪ್ರಕರಣಗಳು ಮತ್ತು ಸಾವುಗಳ ವಿಶ್ಲೇಷಣೆಯು ಗ್ರಾಮೀಣ ಮತ್ತು ಕಡಿಮೆ ಅಭಿವೃದ್ಧಿ ಹೊಂದಿದ 272 ಜಿಲ್ಲೆಗಳಲ್ಲಿ  ಸಾಂಕ್ರಾಮಿಕ ರೋಗವು ಹರಡಿರುವುದನ್ನು ಆ ಮೂಲಕ ಗ್ರಾಮೀಣ ಪ್ರದೇಶಗಳಲ್ಲೂ ಹರಡಿರುವುದನ್ನು ಸೂಚಿಸುತ್ತದೆ.

ಈ 272 ಜಿಲ್ಲೆಗಳಲ್ಲಿ ಹೆಚ್ಚಿನವು ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಮಾತ್ರ ಹೊಂದಿವೆ.  ರಾಜ್ಯಗಳ ಸರ್ಕಾರಗಳು‌ ಕಲ್ಪಿಸುತ್ತಿರುವ  ಮೂಲಸೌಕರ್ಯಗಳು ಹೆಚ್ಚಾಗಿ ದೊಡ್ಡ ಪಟ್ಟಣಗಳು ​​ಮತ್ತು ನಗರಗಳಲ್ಲಿವೆ.  ಇದರ ಪರಿಣಾಮವಾಗಿ ಈ ಜಿಲ್ಲೆಗಳಿಂದ ಹತ್ತಿರದ ದೊಡ್ಡ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ, ಇದು ಪಟ್ಟಣಗಳು ​​ಮತ್ತು ನಗರಗಳಲ್ಲಿ ಈಗಾಗಲೇ ಒತ್ತಡಕ್ಕೊಳಗಾದ ಮೂಲಸೌಕರ್ಯಗಳ ಮೇಲೆ ಮತ್ತಷ್ಟು ಹೊರೆ ಹೊರೆಸುತ್ತದೆ.

Previous Post

ಕರೋನಾ ಸಂಕಷ್ಟದ ಹೊತ್ತಲ್ಲಿ ಬಿಜೆಪಿ ಸೆಲೆಬ್ರಿಟಿ ನಾಯಕರ ಅಸಲೀ ಕಾಳಜಿ ಏನು..?

Next Post

ಅಮ್ಮಾ…ಎಂದರೆ ಅನುಭಾವದ ಗಣಿ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಅಮ್ಮಾ…ಎಂದರೆ ಅನುಭಾವದ ಗಣಿ

ಅಮ್ಮಾ...ಎಂದರೆ ಅನುಭಾವದ ಗಣಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada