ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ನಿನ್ನೆ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಮ್ಮಿಕೊಂಡಿದ್ದ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದರು.
ಚುನಾವಣಾ ಪ್ರಚಾರ ನಡೆಸಲು ಶಿವಮೊಗ್ಗಕ್ಕೆ ತೆರಳಿದಾಗ ಅದ್ಧೂರಿ ಸ್ವಾಗತದಿಂದ ಸಚಿವರನ್ನು ಬರಮಾಡಿಕೊಂಡರು. ಪ್ರಚಾರ ಸಭೆಯಲ್ಲಿ ಭಾಗವಹಿಸಲು ಭೇಟಿ ನೀಡಿದ್ದ ವೇಳೆ ಜಿಲ್ಲಾ ಕಾಂಗ್ರೆಸ್ನ ಚುನಾವಣಾ ವಾರ್ರೂಮ್ಗೆ ಭೇಟಿ ನೀಡಿದ್ದ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಹಿತ್ತಲದ ರಂಗಮಂದಿರ, ಈಸೂರು ಹಾಗೂ ಮುಡುಬ ಸಿದ್ದಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಟರಾದ ಡಾ. ಶಿವರಾಜ್ ಕುಮಾರ್, ದುನಿಯಾ ವಿಜಿ, ಪಕ್ಷದ ಮುಖಂಡರಾದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.