
ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯ ಕರುಣಾಪುರಂನಲ್ಲಿ ಕಳ್ಳಭಟ್ಟಿ ಸೇವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ತಮಿಳುನಾಡು ಸರ್ಕಾರ ಕಳವಳ ವ್ಯಕ್ತಪಡಿಸಿದೆ.
ಕೆ. ಕನ್ನುಕುಟ್ಟಿ ಎಂಬ ವ್ಯಕ್ತಿಯನ್ನು ಕಳ್ಳಭಟ್ಟಿ ದುರಂತದಲ್ಲಿ ಬಂಧಿಸಲಾಗಿದ್ದು, ಆತನಿಂದ ಸುಮಾರು 200 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ. ಇನ್ನು ಈ ಪ್ರಕರಣನ್ನು ಗಂಭೀರವಾಗಿ ಪರಿಗಣಿಸಿರುವ ತನಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಕಳ್ಳಭಟ್ಟಿ ದುರಂತದ ಹೊಣೆಯನ್ನು ಜಿಲ್ಲಾಡಳಿತದ ನಿರ್ಲಕ್ಷ್ಯ ಎಂದು ಪರಿಗಣಿಸಿದ್ದು, ಅವಘಡಕ್ಕೆ ಸಂಬಂಧಿಸಿದಂತೆ ಕಲ್ಲಕುರುಚ್ಚಿ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಕೆಲವು ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶ ಮಾಡಿದ್ದಾರೆ.