• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತೆರಿಗೆ ಹೆಸರಲ್ಲಿ ಬಿಬಿಎಂಪಿ ಅಧಿಕಾರಿಗಳಿಂದ ಮೀಟರ್ ಬಡ್ಡಿ ದಂಧೆ: ರಾಮಲಿಂಗಾ ರೆಡ್ಡಿ

ಪ್ರತಿಧ್ವನಿ by ಪ್ರತಿಧ್ವನಿ
August 8, 2021
in ಕರ್ನಾಟಕ
0
ತೆರಿಗೆ ಹೆಸರಲ್ಲಿ ಬಿಬಿಎಂಪಿ ಅಧಿಕಾರಿಗಳಿಂದ ಮೀಟರ್ ಬಡ್ಡಿ ದಂಧೆ: ರಾಮಲಿಂಗಾ ರೆಡ್ಡಿ
Share on WhatsAppShare on FacebookShare on Telegram

‘ಬೆಂಗಳೂರು ನಗರದಲ್ಲಿ 20 ಲಕ್ಷ ಆಸ್ತಿಗಳಿದ್ದು, ಅದರಲ್ಲಿ 18 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬರುತ್ತವೆ. ಈ ಪೈಕಿ ಪಾಲಿಕೆ ತಮ್ಮ ಅಧಿಕಾರಿಗಳ ತಪ್ಪಿನಿಂದ ಆಗಿರುವ ಅಚಾತುರ್ಯಕ್ಕೆ 78 ಸಾವಿರ ಆಸ್ತಿಗಳ ಮಾಲೀಕರಿಗೆ ತೆರಿಗೆ ಪಾವತಿ ಮಾಡಿಲ್ಲ ಎಂದು ಎರಡರಿಂದ ಮೂರು ಪಟ್ಟು ದುಬಾರಿ ದಂಡ ವಿಧಿಸಿದೆ. ಈ ಆಸ್ತಿ ಮಾಲೀಕರಿಂದ 120 ಕೋಟಿ ರೂ. ತೆರಿಗೆ ಬಾಕಿ ಬರಬೇಕಾಗಿದ್ದು, ಅದಕ್ಕೆ 240 ರೂ. ಕೋಟಿ ಬಡ್ಡಿ ಹಾಕಿದ್ದಾರೆ. ಆ ಮೂಲಕ ಪಾಲಿಕೆ ಅಧಿಕಾರಿಗಳು ತೆರಿಗೆ ಹೆಸರಿನಲ್ಲಿ ಮೀಟರ್ ಬಡ್ಡಿ ದಂಧೆ ನಡೆಸಲು ಮುಂದಾಗಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಕಿಡಿಕಾರಿದ್ದಾರೆ.

ADVERTISEMENT

ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಬೆಂಗಳೂರು ಮಹಾನಗರ ಪಾಲಿಕೆ ಜನರ ಮೇಲೆ ಅವೈಜ್ಞಾನಿಕ ರೀತಿಯಲ್ಲಿ ತೆರಿಗೆ ಹಾಕುತ್ತಿದೆ. ಅಧಿಕಾರಿಗಳು ಐದು ವರ್ಷಗಳ ಹಿಂದೆ ವಲಯ ವಿಂಗಡಣೆಯನ್ನು ಸರಿಯಾಗಿ ಮಾಡದೇ, ಜನರಲ್ಲಿ ಗೊಂದಲ ಮೂಡಿಸಿದೆ. ಅಧಿಕಾರಿಗಳು ನಿಗದಿ ಮಾಡಿದ ವಲಯದಲ್ಲಿ ತೆರಿಗೆ ಪಾವತಿಸಿದ್ದಾರೆ. ಆದರೆ ಈಗ ಅಧಿಕಾರಿಗಳು ನೀವು ಬೇರೆ ವಲಯಕ್ಕೆ ಅನ್ವಯವಾಗುವಂತೆ ತೆರಿಗೆ ಪಾವತಿ ಮಾಡುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಅಧಿಕಾರಿಗಳಿಗೆ ಆಡಳಿತ ವಿಚಾರದಲ್ಲಿ ಮೇಯರ್ ಅವರ ಅಧಿಕಾರವನ್ನು ನೀಡಿರಬಹುದು. ಆದರೆ ತೆರಿಗೆ ಹೆಚ್ಚಳ ವಿಚಾರದಲ್ಲಿ ಇದು ಮುಖ್ಯಮಂತ್ರಿಗಳ ಗಮನಕ್ಕೆ ಬರದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ.

ಈ ಹಿಂದೆ  ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರ ಗಮನಕ್ಕೆ ಈ ವಿಚಾರ ಬಂದಿರುತ್ತದೆ. ಹೀಗಾಗಿ ಈ ಮೀಟರ್ ಬಡ್ಡಿ ವ್ಯವಹಾರ ದಂಧೆಗೆ ಬಿಜೆಪಿ ಸರ್ಕಾರವೇ ಕಾರಣವಾಗಿದೆ. ಪಾಲಿಕೆ ಮೊದಲು ಈ ಬಡ್ಡಿ ದಂಧೆಯನ್ನು ನಿಲ್ಲಿಸಬೇಕು. ಪಾಲಿಕೆ ಅಧಿಕಾರಿಗಳು 2016ರಲ್ಲಿ ಸರಿಯಾಗಿ ವಲಯ ವರ್ಗಿಕರಣ ಮಾಡಿದ್ದರೆ ಜನರು ಅದೇ ವಲಯದಲ್ಲಿ ತೆರಿಗೆ ಕಟ್ಟುತ್ತಿದ್ದರು. ಆದರೆ ಇಂದು ಯಾವುದೇ ತಪ್ಪು ಮಾಡದ ಜನರಿಗೆ ಈ ರೀತಿಯಾಗಿ ಮೂರು ಪಟ್ಟು ತೆರಿಗೆ ಕಟ್ಟುವಂತೆ ನೋಟೀಸ್ ಜಾರಿ ಮಾಡಿರುವುದು ಸರಿಯಲ್ಲ. ಕೂಡಲೇ ಈ ನಿರ್ಧಾರವನ್ನು ಅಧಿಕಾರಿಗಳು ಹಿಂಪಡೆಯಬೇಕು. ಈ ನಿರ್ಧಾರ ಹಿಂಪಡೆಯದಿದ್ದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಹೋರಾಟ  ಮಾಡಬೇಕಾಗುತ್ತದೆ’ ಎಂದು ಆಗ್ರಹಿಸಿದ್ದಾರೆ.

‘ಅಧಿಕಾರಿಗಳು ಈ ಹಿಂದೆ ಜಾರಿಯಲ್ಲಿದ್ದ ಕಾಯ್ದೆ ಆಧಾರವಾಗಿ ಜನರಿಗೆ ನೋಟೀಸ್ ಜಾರಿ ಮಾಡಿದ್ದಾರೆ. ಹಳೇ ಕಾಯ್ದೆಯಲ್ಲಿ ನೋಟೀಸ್ ಜಾರಿ ಮಾಡಲು ಕೇವಲ 3 ವರ್ಷಗಳ ಕಾಲಾವಕಾಶವಿದೆ. 3 ವರ್ಷಗಳ ಒಳಗಾಗಿ ಅವರು ನೋಟೀಸ್ ನೀಡಬೇಕಾಗಿತ್ತು. ಆದರೆ ನೀಡಿಲ್ಲ. ನೂತನ ಕಾಯ್ದೆಯಲ್ಲಿ ಇದನ್ನು ಐದು ವರ್ಷಗಳಿಗೆ ವಿಸ್ತರಿಸಲಾಗಿದೆಯಾದರೂ, ಹಳೇಯ ಕಾಯ್ದೆ ಆಧಾರದ ಮೇಲೆ ನೋಟೀಸ್ ಅನ್ನು ನೀಡಲಾಗಿದೆ. ಪಾಲಿಕೆ ಅಧಿಕಾರಿಗಳ ಈ ನಿರ್ಧಾರ ಮಹಾ ಅಪರಾಧವಾಗಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಎಸ್.ಎಂ ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಪಾಲಿಕೆಯಲ್ಲೂ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆಗ ಮೊದಲ ಬಾರಿಗೆ ಭ್ರಷ್ಟಾಚಾರ  ನಿಯಂತ್ರಿಸಲು ಸ್ವಯಂ ಘೋಷಣಾ ಆಸ್ತಿ ತೆರಿಗೆ ಪದ್ಧತಿ ಜಾರಿಗೊಳಿಸಲಾಗಿತ್ತು. ಆಗ ಬೆಂಗಳೂರು ನಗರ ಪ್ರದೇಶವನ್ನು ತೆರಿಗೆ ಸಂಗ್ರಹಿಸಲು ಎ,ಬಿ,ಸಿ,ಡಿ,ಇ ಹಾಗೂ ಎಫ್ ವಲಯಗಳನ್ನಾಗಿ ವಿಂಗಡಿಸಲಾಗಿತ್ತು. 2016ರಲ್ಲಿ ಪಾಲಿಕೆಯು ಆಸ್ತಿ ತೆರಿಗೆ ಪರಿಷ್ಕರಿಸಿ ಯೂನಿಟ್ ದರಗಳನ್ನು ವಸತಿಗೆ ಶೇ.20ರಷ್ಟು ಹಾಗೂ ವಸತಿಯೇತರಕ್ಕೆ ಶೇ.25ರಷ್ಟು ಹೆಚ್ಚಳ ಮಾಡಿತ್ತು. ಆರಂಭದಲ್ಲಿ ಈ ತೆರಿಗೆ ಪಾವತಿ ಮಾಡುವ ತಂತ್ರಾಂಶಗಳಲ್ಲಿ ತೊಂದರೆ ಕಾಣಿಸಿಕೊಂಡಿದ್ದು, ಇದನ್ನು ಸರಿಪಡಿಸಲು ಅಲೇಕ ದಿನಗಳ ಸಮಯ ತೆಗೆದುಕೊಳ್ಳಲಾಯಿತು.

ಇದರಿಂದಾಗಿ 2016-17ನೇ ಸಸಾಲಿನಲ್ಲಿ ಕಡಿಮೆ ಆಸ್ತಿ ತೆರಿಗೆ ಮಾಡುವ ಮಾಲೀಕರು 2017-18ನೇ ಸಾಲಿನಲ್ಲಿ ಯಾವುದೇ ದಂಡ  ಅಥವಾ ಬಡ್ಡಿ ಅಲ್ಲದೇ ತೆರಿಗೆ ಪಾವತಿ ಮಾಡಿರುತ್ತಾರೆ. ಆಸ್ತಿ ಮಾಲೀಕರು ತಮ್ಮ ವಲಯ ಗುರುತಿಸಲು ತೊಂದರೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳ ನೆರವನ್ನು ಪಡೆದು ಆಸ್ತಿ ತೆರಿಗೆ ಪಾವತಿ  ಮಾಡಿರುತ್ತಾರೆ. ಈ ವೇಳೆ ಅಧಿಕಾರಿಗಳು ಮಾಡಿರುವ ತಪ್ಪಿನಿಂದಾಗಿ ತೆರಿಗೆ ಸಂಗ್ರಹದಲ್ಲಿ 120 ಕೋಟಿಯಷ್ಟು ವ್ಯತ್ಯಾಸ ಕಂಡು ಬಂದಿದೆ. ಕಳೆದ ಐದು ವರ್ಷಗಳಲ್ಲಿ ತಂತ್ರಾಂಶವನ್ನು ಸರಿಪಡಿಸಿಕೊಳ್ಳದ ಪಾಲಿಕೆ ಅಧಿಕಾರಿಗಳು 2021ರಲ್ಲಿ ತಂತ್ರಾಂಶ ಸರಿಪಡಿಸಿಕೊಂಡು ಈಗ ಕಡಿಮೆ ಆಸ್ತಿ ತೆರಿಗೆ ಪಾವತಿ ಮಾಡಿದವರಿಗೆ ಬಾಕಿ ತೆರಿಗೆ ಪಾವತಿ ಮಾಡುವುದರ ಜತೆಗೆ ಈ ಅವಧಿಗೆ ಮೂರುಪಟ್ಟು ಬಡ್ಡಿಯನ್ನು ವಿಧಿಸಿರುವುದು ಖಂಡನೀಯ’ ಎಂದು ಕಿಡಿಕಾರಿದ್ದಾರೆ.

Tags: BJPCongress Partyಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಟೋಕಿಯೋ ಒಲಿಂಪಿಕ್ಸ್: ಶತಮಾನದ ದಾಖಲೆ ಮುರಿದ ಭಾರತ: ಜಾವೆಲಿನ್ ಎಸೆತದಲ್ಲಿ ಛೋಪ್ರಾಗೆ ಚಿನ್ನ

Next Post

ಚಿನ್ನ ಗೆದ್ದ ನೀರಜ್‌ಗೆ ಪಿಟಿ.ಉಷಾ ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ ಸುರಿಮಳೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಚಿನ್ನ ಗೆದ್ದ ನೀರಜ್‌ಗೆ ಪಿಟಿ.ಉಷಾ ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ ಸುರಿಮಳೆ

ಚಿನ್ನ ಗೆದ್ದ ನೀರಜ್‌ಗೆ ಪಿಟಿ.ಉಷಾ ಸೇರಿದಂತೆ ಅನೇಕ ಗಣ್ಯರಿಂದ ಅಭಿನಂದನೆ ಸುರಿಮಳೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada