ಅಯೋಧ್ಯೆ : ದೇವಾಲಯವು ಇನ್ನೂ ನಿರ್ಮಾಣ ಹಂತದಲ್ಲಿದೆ ಮತ್ತು ಅದಕ್ಕೂ ಮುನ್ನವೆ ದೇವರ ಪ್ರಾಣ ಪ್ರತಿಷ್ಠಾಪನೆ ಸನಾತನ ಸಂಪ್ರದಾಯಕ್ಕೆ ವಿರುದ್ಧವಾದ ಕಾರಣದಿಂದ ದೇವರ ಪ್ರತಿಷ್ಠಾಪನೆ ನಡೆಯಲು ಸಾಧ್ಯವಿಲ್ಲ ವಿಗ್ರಹದ ಮುಂಬರುವ ಪ್ರಾಣ ಪ್ರತಿಷ್ಠಾ ಮಹೋತ್ಸವವನ್ನು ನಿಷೇಧಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ಗೆ (Alahabad High court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) (PIL) ಸಲ್ಲಿಸಲಾಗಿದೆ.
![](https://pratidhvani.com/wp-content/uploads/2024/01/shutterstock_1731786289_1613330725544_1613330730491-jpg.webp)
ಎಎನ್ಐ ಪ್ರಕಾರ, ಉತ್ತರ ಪ್ರದೇಶದ ಗಾಜಿಯಾಬಾದ್ನ ನಿವಾಸಿ ಭೋಲಾ ದಾಸ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದಾರೆ.ಹಿಂದೂ ಪಂಚಾಂಗದ ಪ್ರಕಾರ ಪುಷ್ಪ ಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
![](https://pratidhvani.com/wp-content/uploads/2024/01/Ayodya_1702962438787_1702962442491-1024x576.webp)
ಅಲ್ಲದೆ, ದೇವಾಲಯವು ಇನ್ನೂ ನಿರ್ಮಾಣ ಹಂತದಲ್ಲಿದೆ ಮತ್ತು ಸನಾತನ ಸಂಪ್ರದಾಯಕ್ಕೆ ಅಸಂಗತವಾಗಿರುವುದರಿಂದ ದೇವರ ಪ್ರತಿಷ್ಠಾಪನೆ ನಡೆಯಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಸಲ್ಲಿಸಿದ್ದಾರೆ. ಜನವರಿ 22, 2024 ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ರಾಮಲಲ್ಲಾನ ವಿಗ್ರಹವನ್ನು ಸ್ಥಾಪಿಸಲಾಗುವುದು ಹಾಗೂ ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೆರವೇರಿಸಲಿದದ್ದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ಇನ್ನೂ ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ನೆರವೇರಲಿದೆ, ದೇವಾಲಯ ಅಪೂರ್ಣವಾಗಿರುವ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಶಂಕರಚಾರ್ಯರ ಆಕ್ಷೇಪವು ಇತ್ತು ಎನ್ನಲಾಗಿದೆ,ಇಲ್ಲಿ ಯಾವುದೇ ದೇವರನ್ನು ಪ್ರತಿಷ್ಠಾಪಿಸಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಹೆಚ್ಚುವರಿಯಾಗಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಅದು ಆರೋಪಿಸಿದೆ.