• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ದೆಹಲಿ ಸೇವಾ ಮಸೂದೆ | ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೇ ಹೆಸರು ಸೇರ್ಪಡೆ ; ಎಎಪಿ ವಿರುದ್ಧ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
August 8, 2023
in ಇದೀಗ, ದೇಶ, ರಾಜಕೀಯ
0
ದೆಹಲಿ ಸೇವಾ ಮಸೂದೆ
Share on WhatsAppShare on FacebookShare on Telegram

ದೆಹಲಿ ಸೇವಾ ಮಸೂದೆ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೇ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯಸಭೆಯ ಐದು ಸದಸ್ಯರು ಆಮ್ ಆದ್ಮಿ ಪಕ್ಷದ (ಎಎಪಿ) ರಾಘವ್ ಚಡ್ಡಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ದೆಹಲಿ ಸೇವೆಗಳ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ತಮ್ಮ ʼನಕಲಿ ಸಹಿʼಯನ್ನು ಸೇರಿಸಲಾಗಿದೆ. ದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ಹೆಸರನ್ನು ಸೇರಿಸಲಾಗಿದೆ ಎಂದು ರಾಜ್ಯಸಭಾ ಸಂಸದರಾದ, ಬಿಜೆಪಿಯ ಎಸ್ ಫಾಂಗ್ನಾನ್ ಕೊನ್ಯಾಕ್, ನರಹರಿ ಅಮೀನ್ ಮತ್ತು ಸುಧಾಂಶು ತ್ರಿವೇದಿ, ಎಐಎಡಿಎಂಕೆ ಸಂಸದ ಎಂ ತಂಬಿದುರೈ ಮತ್ತು ಬಿಜೆಡಿಯ ಸಸ್ಮಿತ್ ಪಾತ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದೆಹಲಿ ಸೇವಾ ಮಸೂದೆ ಸಂಬಂಧ ಎಎಪಿ ನಾಯಕ ರಾಘವ್ ಚಡ್ಡಾ ವಿರುದ್ಧ ಸೋಮವಾರ (ಆಗಸ್ಟ್ 7) ವಿಶೇಷ ಹಕ್ಕು ಮಂಡಿಸಲು ಒತ್ತಾಯಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಎಐಎಡಿಎಂಕೆ ಸಂಸದ ಎಂ ತಂಬಿದುರೈ ಈಗಾಗಲೇ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್‌ ಅವರಿಗೆ ಪತ್ರ ಬರೆದಿದ್ದು, “ಯಾವುದೇ ದಾಖಲೆಗೆ ಸಹಿ ಹಾಕದ ಕಾರಣ ನನ್ನ ಹೆಸರನ್ನು ಪ್ರಸ್ತಾವನೆಯಲ್ಲಿ ಹೇಗೆ ಸೇರಿಸಲಾಗಿದೆ ಎಂದು ವಿಶೇಷಾಧಿಕಾರ ಸಮಿತಿಗೆ ಸೂಚಿಸಿ ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ನೀಡಿದ್ದೇನೆ. ಯಾರೋ ನನ್ನ ಸಹಿಯನ್ನು ನಕಲಿ ಮಾಡಿರಬಹುದು” ಎಂದು ಹೇಳಿದರು.

ಬಿಜೆಪಿ ಸಂಸದ ನರಹರಿ ಅಮೀನ್, “ರಾಘವ್ ಚಡ್ಡಾ ಅವರು ನನ್ನ ಹೆಸರನ್ನು ಆಯ್ಕೆ ಸಮಿತಿಯಲ್ಲಿ ಸೇರಿಸಿದ್ದಾರೆ. ಅವರು ನನ್ನೊಂದಿಗೆ ಮಾತನಾಡಿಲ್ಲ, ನಾನು ಇದಕ್ಕೆ ಒಪ್ಪಿಗೆ ನೀಡಿಲ್ಲ. ಅವರು ತಪ್ಪು ಮಾಡಿದ್ದಾರೆ. ನಾನು ನನ್ನ ಸಹಿಯನ್ನು ನೀಡಿಲ್ಲ” ಎಂದು ಹೇಳಿದರು.

ಬಿಜೆಡಿಯ ಸಸ್ಮಿತ್ ಪಾತ್ರಾ ಅವರು ತಮ್ಮ ಒಪ್ಪಿಗೆಯಿಲ್ಲದೆ ದೆಹಲಿ ಸೇವಾ ಮಸೂದೆ ಸಮಿತಿಯಲ್ಲಿ ಅವರ ಹೆಸರನ್ನು ಸೇರಿಸಿದ್ದಾರೆ ಎಂದು ಇದೇ ರೀತಿಯ ಆರೋಪ ಮಾಡಿದ್ದಾರೆ.

“ಸದನದಲ್ಲಿ ನಿರ್ಣಯಗಳನ್ನು ಮಂಡಿಸಿದ ಸಮಯದಲ್ಲಿ (ದೆಹಲಿ ಸೇವಾ ಮಸೂದೆಯ ಮೇಲಿನ ಚರ್ಚೆಯ ಸಮಯದಲ್ಲಿ) ರಾಘವ್ ಚಡ್ಡಾ ಅವರು ಮಂಡಿಸಿದ ನಿರ್ಣಯದಲ್ಲಿ ನನ್ನ ಹೆಸರನ್ನು ಉಲ್ಲೇಖಿಸಲಾಗಿದೆ. ನನ್ನ ಪೂರ್ವಾನುಮತಿ ಪಡೆಯದೆ ನನ್ನ ಹೆಸರನ್ನು ಹೇಳಲಾಗುವುದಿಲ್ಲ. ಈ ಬಗ್ಗೆ ಸಭಾಪತಿ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ನಾನು ದೂರು ನೀಡಿದ್ದೇನೆ, ನಿಸ್ಸಂಶಯವಾಗಿ, ಇದು ಹಕ್ಕುಚ್ಯುತಿ ವಿಷಯವಾಗಿದೆ, ನಾವೆಲ್ಲರೂ ನಮ್ಮ ಆಯಾ ದೂರುಗಳನ್ನು ಸಲ್ಲಿಸಿದ್ದೇವೆ” ಎಂದು ಮಾಹಿತಿ ನೀಡಿದರು.

ದೆಹಲಿ ಸೇವಾ ಮಸೂದೆಯ ಸಮಿತಿಯಲ್ಲಿ ಹೆಸರು ಸೇರ್ಪಡೆ ಬಗ್ಗೆ ರಾಘವ್‌ ಚಡ್ಡಾ ಪ್ರತಿಕ್ರಿಯಿಸಿದ್ದು ವಿಶೇಷಾಧಿಕಾರ ಸಮಿತಿ ನೋಟಿಸ್ ಕಳುಹಿಸಿದಾಗ ಉತ್ತರ ನೀಡುವುದಾಗಿ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ವಿವಾದಾತ್ಮಕ ‘ದೆಹಲಿ ಸೇವೆಗಳ ನಿಯಂತ್ರಣ ಮಸೂದೆ’ಯು ರಾಜ್ಯಸಭೆಯಲ್ಲಿ 131-102 ಮತಗಳಿಂದ ಸೋಮವಾರ ಅಂಗೀಕಾರಗೊಂಡಿತು.

ಈಗಾಗಲೇ ಲೋಕಸಭೆಯು ದೆಹಲಿ ಸೇವಾ ಮಸೂದೆ ಅಂಗೀಕರಿಸಿದೆ. ರಾಷ್ಟ್ರಪತಿಗಳ ಅಂಕಿತ ಬಿದ್ದ ಬಳಿಕ ಕಾಯ್ದೆಯಾಗಿ ಜಾರಿಗೆ ಬರಲಿದೆ. ಈಗಾಗಲೇ ಹೊರಡಿಸಿರುವ ಸುಗ್ರೀವಾಜ್ಞೆಗೆ ಕಾಯ್ದೆಯ ರೂಪವನ್ನು ನೀಡಲು ಸರ್ಕಾರ ಮಸೂದೆಯನ್ನು ಮಂಡಿಸಿತ್ತು.

ವಿಸ್ಕೃತ, ಬಿಸಿ ಚರ್ಚೆಯ ಬಳಿಕ ಮಸೂದೆಯನ್ನು ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 131 ಮತ್ತು ವಿರುದ್ಧವಾಗಿ 102 ಸದಸ್ಯರು ಮತ ಚಲಾಯಿಸಿದರು. ಹೆಚ್ಚು ಮತ ಚಲಾವಣೆಯಾದ್ದರಿಂದ ಮಸೂದೆಯು ಅಂಗೀಕಾರಗೊಂಡಿತು.

ಇದಕ್ಕೂ ಮೊದಲು ದೆಹಲಿ ಸೇವಾ ಮಸೂದೆ ಮಂಡಿಸಿದ ಗೃಹ ಸಚಿವ ಅಮಿತ್ ಶಾ, “ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭ್ರಷ್ಟಾಚಾರ ರಹಿತ ಮತ್ತು ಪರಿಣಾಮಕಾರಿಯಾದ ಆಡಳಿತ ನೀಡುವುದು ಈ ಮಸೂದೆಯ ಉದ್ದೇಶವಾಗಿದೆ” ಎಂದು ಸಮರ್ಥಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? Breaking: ರಾಹುಲ್‌ ಗಾಂಧಿ ಲೋಕಸಭೆ ಸದಸ್ಯತ್ವ ಮರುಸ್ಥಾಪನೆ

ಟಿಎಂಸಿಯ ಸುಕೇಂದು ಶೇಖರ್ ರಾಯ್, ಡಿಎಂಕೆಯ ತಿರುಚಿ ಶಿವ ಅವರು ಮಸೂದೆ ವಿರೋಧಿಸಿ ಮಾತನಾಡಿದರು. ಬಿಜೆಡಿಯ ಸಸ್ಮಿತ್ ಪಾತ್ರಾ ಮತ್ತು ವೈಎಸ್ಆರ್ಸಿಪಿಯ ವಿ.ವಿಜಯಸಾಯಿ ರೆಡ್ಡಿ ಅವರು ಮಸೂದೆ ಬೆಂಬಲಿಸಿ ಮಾತನಾಡಿದರು.

ಇದಕ್ಕೂ ಮುನ್ನ ಚರ್ಚೆಯಲ್ಲಿ ಭಾಗವಹಿಸಿದ್ದ ಎಎಪಿ ಸದಸ್ಯ ರಾಘವ್ ಛಡ್ಡಾ ಅವರು, “ಇದು ‘ರಾಜಕೀಯ ವಂಚನೆ, ‘ಸಾಂವಿಧಾನಿಕ ಅಪರಾಧ’ವಾಗಿದೆ. ದೆಹಲಿ ಸೇವಾ ಮಸೂದೆ ಚುನಾಯಿತ ಸರ್ಕಾರಗಳ ಅಧಿಕಾರ ಕಸಿದುಕೊಳ್ಳುವ ಉದ್ದೇಶ ಹೊಂದಿದೆ” ಎಂದು ಟೀಕಿಸಿದರು.

Tags: AAPAmit ShahBJPDelhiDelhi Service BillParliamentRaghv ChadhaRajyasabhaಎಎಪಿದೆಹಲಿ ಸೇವಾ ಮಸೂದೆಬಿಜೆಪಿರಾಘವ್‌ ಚಡ್ಡಾ
Previous Post

ವಿಜಯ್​ ರಾಘವೇಂದ್ರ ಪತ್ನಿ ಸಾವಿಗೆ ಕಾರಣವಾದ ಅಂಶಗಳು ಏನೇನು..?

Next Post

ಅಧಿಕಾರಿಗಳ ವರ್ಗಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಟಿಕ್ಕುಗಳ ಕಾರುಭಾರು: ಎಚ್‌.ಡಿ.ಕುಮಾರಸ್ವಾಮಿ ಲೇವಡಿ

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

June 20, 2025
Next Post
ಎಚ್‌.ಡಿ.ಕುಮಾರಸ್ವಾಮಿ

ಅಧಿಕಾರಿಗಳ ವರ್ಗಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಟಿಕ್ಕುಗಳ ಕಾರುಭಾರು: ಎಚ್‌.ಡಿ.ಕುಮಾರಸ್ವಾಮಿ ಲೇವಡಿ

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada