• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆದಾಯ ತೆರಿಗೆ ಮತ್ತು ಜಿಎಸ್‌ಟಿ ವಂಚನೆ ; ವೈದ್ಯ ಸೇರಿ ಮೂವರನ್ನು ಬಂಧಿಸಿದ ಸಿಬಿಐ

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in Top Story, ಇತರೆ / Others
0
Share on WhatsAppShare on FacebookShare on Telegram

ಧನ್‌ಬಾದ್: ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಗೆ ಸೋಮವಾರ ರಾತ್ರಿ ಆಗಮಿಸಿದ ಸಿಬಿಐ ತಂಡವು ಹೌಸಿಂಗ್ ಕಾಲೋನಿಯಲ್ಲಿರುವ ವೈದ್ಯ ಪ್ರಣವ್ ಪುರ್ವೆ, ಬ್ಯಾಂಕ್ ಮೋರ್‌ನಲ್ಲಿರುವ ಟ್ರಾನ್ಸ್‌ಪೋರ್ಟರ್ ಮತ್ತು ಕಲ್ಲಿದ್ದಲು ವ್ಯಾಪಾರಿ ಗುರ್ಪಾಲ್ ಸಿಂಗ್ ಮತ್ತು ಬಿಪಿನ್ ಪ್ರಿಂಟಿಂಗ್ ಪ್ರೆಸ್ ಆಪರೇಟರ್ ಅಶೋಕ್ ಚೌರಾಸಿಯಾ ಅವರ ನಿವಾಸಗಳ ಮೇಲೆ ದಾಳಿ ನಡೆಸಿತು. ಸಿಬಿಐ ತಂಡ ಸೋಮವಾರ ರಾತ್ರಿ ಮೂವರನ್ನು ಕಸ್ಟಡಿಗೆ ತೆಗೆದುಕೊಂಡು ಬಿಪಿನ್ ಪ್ರಿಂಟಿಂಗ್ ಪ್ರೆಸ್‌ನಲ್ಲಿ ರಾತ್ರಿಯಿಡೀ ವಿಚಾರಣೆ ನಡೆಸಿತು.

ADVERTISEMENT

ಮಂಗಳವಾರ ಬೆಳಗ್ಗೆ ಸಿಬಿಐ ತಂಡ ಮೂವರನ್ನು ಸದರ್ ಆಸ್ಪತ್ರೆಗೆ ಕರೆದೊಯ್ದಿತ್ತು. ಅಲ್ಲಿ ಮೂವರ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಬಳಿಕ ಸಿಬಿಐ ತಂಡ ಮೂವರನ್ನೂ ಬಂಧಿಸಿ ಪಾಟ್ನಾಗೆ ಕರೆದೊಯ್ದಿದೆ.ಈ ಹಿಂದೆ ಪಟ್ನಾದಲ್ಲಿ 10 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಬಿಐ ತಂಡ ಆದಾಯ ತೆರಿಗೆ ಆಯುಕ್ತ ಸಂತೋಷ್ ಕುಮಾರ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿತ್ತು.

ಆದಾಯ ತೆರಿಗೆ ಆಯುಕ್ತರಿಗೆ ಹಣ ನೀಡಿದ ಚಿಕು ಎಂಬ ವ್ಯಕ್ತಿಯನ್ನೂ ಸಿಬಿಐ ಬಂಧಿಸಿತ್ತು. ಸಿಬಿಐ ತಂಡ ಇಬ್ಬರನ್ನೂ ವಿಚಾರಣೆ ನಡೆಸಿದೆ. ನಂತರ ಅವರು ಸಿಬಿಐ ಮುಂದೆ ಧನ್‌ಬಾದ್‌ನ ಉದ್ಯಮಿಗಳು ಮತ್ತು ವೈದ್ಯರನ್ನು ಹೆಸರನ್ನು ಬಾಯಿ ಬಿಟ್ಟರು.. ಅವರ ಮಾಹಿತಿ ಮೇರೆಗೆ ಸಿಬಿಐ ತಂಡ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಧನಬಾದ್ ತಲುಪಿದೆ.

ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ಸಂತೋಷ್ ಕುಮಾರ್ ಅವರು ಪಾಟ್ನಾ ಆದಾಯ ತೆರಿಗೆ ಆಯುಕ್ತರೊಂದಿಗೆ ಧನ್ಬಾದ್ ಆದಾಯ ತೆರಿಗೆ ಆಯುಕ್ತರ ಉಸ್ತುವಾರಿಯಲ್ಲಿ ಕೆಲಸ ಮಾಡುತ್ತಿದ್ದರು.ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ, ಡಾ.ಪ್ರಣವ್ ಪುರ್ವೆ ಮತ್ತು ಅಶೋಕ್ ಚೌರಾಸಿಯಾ ಅವರು ಐಟಿ ಕಮಿಷನರ್ ಮತ್ತು ಉದ್ಯಮಿಗಳ ನಡುವೆ ಸಂಪರ್ಕ ಸಾಧಿಸುತ್ತಿದ್ದರು. ಬಹುಶಃ, ಅವರು ಆದಾಯ ತೆರಿಗೆ ಮತ್ತು ಜಿಎಸ್‌ಟಿಗೆ ಸಂಬಂಧಿಸಿದಂತೆ ಸಂಪರ್ಕವನ್ನು ಮಾಡುತ್ತಿದ್ದರು.

ಡೀಲ್ ಕುದುರಿಸಿದ ನಂತರ, ಬಂಧಿತ ಚಿಕು ಎಂಬ ವ್ಯಕ್ತಿ ಆದಾಯ ತೆರಿಗೆ ಆಯುಕ್ತರಿಗೆ ಹಣವನ್ನು ತಲುಪಿಸುತ್ತಿದ್ದನು.ದೆಹಲಿಯ ಸಿಬಿಐ ತಂಡಕ್ಕೆ ಹಲವು ತಿಂಗಳ ಹಿಂದೆಯೇ ಈ ವಂಚನೆಯ ಸುಳಿವು ಸಿಕ್ಕಿತ್ತು. ನಂತರ, ದೆಹಲಿ ಸಿಬಿಐ ತಂಡವು ಈ ವಿಷಯದ ಮೇಲೆ ನಿಗಾ ಇಡುವಂತೆ ಪಾಟ್ನಾ ಸಿಬಿಐಗೆ ಸೂಚಿಸಿತ್ತು. ಪಾಟ್ನಾ ಸಿಬಿಐ ಆದಾಯ ತೆರಿಗೆ ಆಯುಕ್ತರ ಮೇಲೆ ತೀವ್ರ ನಿಗಾ ಇರಿಸಿತ್ತು.ಕಳೆದ ಹಲವು ತಿಂಗಳುಗಳಿಂದ ಸಿಬಿಐ ಐಟಿ ಕಮಿಷನರ್‌ಗೆ ಬಲೆ ಬೀಸಿತ್ತು.

Tags: CBIGovernment of Indiahome ministerIncome Tax and GST Fraud
Previous Post

ಸರ್ಕಾರಿ ಶಾಲೆ ಮಕ್ಕಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಸಲು ಸರ್ಕಾರದ ಸಂಪೂರ್ಣ ಬೆಂಬಲ ಮತ್ತು ಬದ್ಧತೆ ಇದೆ :ಡಿಸಿಎಂ ಡಿ. ಕೆ. ಶಿವಕುಮಾರ್

Next Post

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಶ್ಮೀರ ನಾಯಕನಿಗೆ ಜಾಮೀನು ಮಂಜೂರು

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಶ್ಮೀರ ನಾಯಕನಿಗೆ ಜಾಮೀನು ಮಂಜೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada