• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕರ್ನಾಟಕದಲ್ಲಿ 18 ಕೋಟಿ ಹಣ ಸೀಜ್‌.. ಯಾರದ್ದು ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
April 17, 2024
in ರಾಜಕೀಯ
0
ಕರ್ನಾಟಕದಲ್ಲಿ 18 ಕೋಟಿ ಹಣ ಸೀಜ್‌.. ಯಾರದ್ದು ಗೊತ್ತಾ..?
Share on WhatsAppShare on FacebookShare on Telegram

ಧಾರವಾಡದಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ದೊಡ್ಡ ಮಟ್ಟದ ಪ್ರಕರಣ ಬೇಧಿಸಿದ್ದಾರೆ. ಲೋಕಸಭಾ ಚುನಾವಣೆಗೆ ಹಣದ ಹೊಳೆ ಹರಿಸಲು ಸಂಗ್ರಹ ಮಾಡಿದ್ದ ಬರೋಬ್ಬರಿ 18 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೊದಲಿಗೆ 2 ಕೋಟಿ ಹಣವನ್ನು ಸೀಜ್‌ ಮಾಡಿದ್ದರು. ಆ ಬಳಿಕ 18 ಕೋಟಿ ಹಣ ಪತ್ತೆಯಾಗಿದೆ. ಇದು ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತೆ ಮಾಡಿದೆ.

ADVERTISEMENT

ಅಕ್ರಮವಾಗಿ ಮದ್ಯ ಸಂಗ್ರಹ ಮಾಡಲಾಗಿದೆ ಅನ್ನೋ ಮಾಹಿತಿ ಚುನಾವಣಾ ಅಧಿಕಾರಿಗಳಿಗೆ ಬಂದಿತ್ತು. ಆ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿತ್ತು. ಆ ವೇಳೆ ಮನೆಗಳಲ್ಲಿದ್ದ ಚೀಲಗಳನ್ನು ಪರಿಶೀಲನೆ ಮಾಡಿದಾಗ ಚೀಲಗಳಲ್ಲಿ ಏನೂ ಸಿಕ್ಕಿರಲಿಲ್ಲ. ಕೊನೆಗೆ ತಿಜೋರಿ ಓಪನ್ ಮಾಡಿದಾಗ ಕಂತೆ ಕಂತೆ ಹಣ ಪತ್ತೆಯಾಗಿದೆ. 6 ಕ್ಕೂ ಹೆಚ್ಚು ವಾಹನಗಳಲ್ಲಿ ಬಂದ 20ಕ್ಕೂ ಅಧಿಕಾರಿಗಳು 18 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ಧಾರವಾಡದ (Dharawada) ಕುಂದಗೋಳದ ರಾಮನಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಂಗಪ್ಪ ಜಟಾದ್‌‌ ಎಂಬುವರ ಮನೆಯಲ್ಲಿ ಬರೋಬ್ಬರಿ 2 ಕೋಟಿಗೂ ಹೆಚ್ಚು ನಗದು ಪತ್ತೆಯಾಗಿತ್ತು. ಈಗ 18 ಕೋಟಿ ಹಣ ಸಿಕ್ಕಿದ್ದು, ಬಸವರಾಜು (Basavaraj)ಎಂಬುವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಬಸವರಾಜ್ ಯು.ಬಿ ಶೆಟ್ಟಿ ಅವರ ಅಕೌಂಟೆಂಟ್ ಎಂದು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಜೊತೆಗೆ ಬೆಂಗಳೂರಿನ ರಾಮಲಿಂಗಂ ಕನ್ಸ್‌‌ಟ್ರಕ್ಷನ್‌‌ ಕಂಪನಿ ದಾಖಲೆ ನೀಡಿದ್ದಾರೆ ಎನ್ನಲಾಗ್ತಿದೆ.

ಧಾರವಾಡದ ದಾಸನಕೊಪ್ಪ ಕ್ರಾಸ್‌ ಬಳಿಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿ ಬಸವರಾಜ್‌ ದತ್ತನವರ್‌ ಫ್ಲಾಟ್‌ ಇದೆ. ಫ್ಲಾಟ್‌ – 303ರ ಮೇಲೆ ದಾಳಿ ಮಾಡಿದಾಗ ಕಂತೆ ಕಂತೆ ಹಣಗಳ: ರಾಶಿಯೇ ಕಂಡು ಬಂದಿದೆ. ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ. ಹಣ ಯಾರಿಗೆ ಸೇರಿದ್ದು, ಇಷ್ಟೊಂದು ದೊಡ್ಡ ಪ್ರಮಾಣದ ಹಣ ಸಂಗ್ರಹ ಮಾಡಿದ್ದ ಉದ್ದೇಶ ಏನು..? ಇಷ್ಟು ದೊಡ್ಡ ಮೊತ್ತ ಬಂದಿದ್ದು ಎಲ್ಲಿಂದ..? ಅನ್ನೋ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.

Tags: 18 ಕೋಟಿBasavarajDharawadaElectionincome taxLokSabhaಚುನಾವಣೆಧಾರವಾಡಲೋಕಸಭೆಹಣ
Previous Post

ಕರ್ನಾಟಕವನ್ನು ಸಿದ್ದರಾಮಯ್ಯ, ಡಿಕೆಶಿ ನೋಡ್ಕೊಳ್ತಾರೆ.. ನಿಮ್ಮದು ನೀವು ನೋಡ್ಕಳಿ..!

Next Post

UPSC ರಿಸಲ್ಟ್ ಪ್ರಕಟ.. ಆದಿತ್ಯ ಶ್ರೀವಾಸ್ತವ ದೇಶಕ್ಕೆ ನಂಬರ್ 1

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
UPSC ರಿಸಲ್ಟ್ ಪ್ರಕಟ.. ಆದಿತ್ಯ ಶ್ರೀವಾಸ್ತವ ದೇಶಕ್ಕೆ ನಂಬರ್ 1

UPSC ರಿಸಲ್ಟ್ ಪ್ರಕಟ.. ಆದಿತ್ಯ ಶ್ರೀವಾಸ್ತವ ದೇಶಕ್ಕೆ ನಂಬರ್ 1

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada